Don't Miss!
- News Mysuru Zoo: ಬೇಸಿಗೆಯಲ್ಲೂ ಮೈಸೂರು ಮೃಗಾಲಯ ಕೂಲ್.. ಕೂಲ್! ಹೇಗೆ ಗೊತ್ತಾ?
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಶಾಸಕ ಮುನಿರತ್ನ ವಿರುದ್ಧ ರೊಚ್ಚಿಗೆದ್ದ ಹುಚ್ಚ ವೆಂಕಟ್
ರಾಜರಾಜೇಶ್ವರಿ ಶಾಸಕ ಮುನಿರತ್ನ ವಿರುದ್ಧ ನಟ-ನಿರ್ದೇಶಕ ಹುಚ್ಚ ವೆಂಕಟ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಮತದಾರರನ್ನ ಸೆಳೆಯಲು 'ಕುಕ್ಕರ್' ಹಂಚುತ್ತಿದ್ದಾರೆ ಎಂದು ಫೈರಿಂಗ್ ಸ್ಟಾರ್ ಗರಂ ಆಗಿದ್ದಾರೆ.
'ನನ್ನ ತಂಗಿ ಮನೆಗೂ ಕೊಟ್ಟು ತಮಗೆ ಮತ ಹಾಕಿ ಎಂದಿದ್ದಾರೆ. ಅಷ್ಟೇ ಅಲ್ಲದೇ 'ಕುಕ್ಕರ್ ಬಾಕ್ಸ್' ಮೇಲೆ ಬರೆದಿರುವ ಡೈಲಾಗ್ ಕಂಡು ಶಾಸಕರನ್ನ ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಸಂಬಂಧ ಇಂದು ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಹುಚ್ಚ ವೆಂಕಟ್ ಕುಕ್ಕರ್ ಬಾಕ್ಸ್, ಸ್ಟೌವ್ ಹಾಗೂ ನೀರಿನ ಕ್ಯಾನ್ ಹಿಡಿದು ಆಗಮಿಸಿದ್ದರು. ತದ ನಂತರ ಮಾತನಾಡಿದ ಅವರು ''ರಾಜಕೀಯ ಇಂದು ಈ ಹಂತಕ್ಕೆ ಬಂದಿದೆ. ಜನರು ಇಂತಹ ಆಮಿಷಕ್ಕೆ ಒಳಗಾಗದೆ ಉತ್ತಮ ವ್ಯಕ್ತಿಯನ್ನು ಚುನಾವಣೆಯಲ್ಲಿ ಗೆಲ್ಲಿಸಬೇಕು'' ಎಂದು ಜನರಿಗೆ ಸಲಹೆ ನೀಡಿದರು.
ಹುಚ್ಚ ವೆಂಕಟ್ ಅವರೇ... ಇದೆಲ್ಲ ನಿಮಗೆ ಮರೆತು ಹೋಯ್ತಾ.?
ಇದಕ್ಕೆ ಪ್ರತಿಕ್ರಿಯಿಸಿದ ಶಾಸಕ ಮುನಿರತ್ನ ''ಇದನ್ನ ನಾನು ಹಲವು ವರ್ಷಗಳಿಂದ ಮಾಡಿಕೊಂಡು ಬಂದಿದ್ದೇನೆ. ಬಡವರಿಗೆ, ಅಸಹಾಯಕರಿಗೆ, ನಿರ್ಗತಿಕರಿಗೆ ನೆರವಾಗಿದ್ದೇನೆ. ಇದಕ್ಕೂ ಚುನಾವಣೆಗೂ ಯಾವುದೇ ರೀತಿಯ ಸಂಬಂಧವಿಲ್ಲ. ಇದು ಒಳ್ಳೆಯ ಉದ್ದೇಶದಿಂದ ಮಾಡುತ್ತಿರುವ ಕೆಲಸ'' ಎಂದಿದ್ದಾರೆ.