Don't Miss!
- News Gadag: ಕಾಂಗ್ರೆಸ್ ಸರ್ಕಾರದಲ್ಲಿ ಕೊಲೆಗಡುಕರಿಗೆ ರಾಜ ಮರ್ಯಾದೆ: ಮಾಜಿ ಸಿಎಂ
- Automobiles ಎಲೆಕ್ಟ್ರಿಕ್ ಅವತಾರದಲ್ಲಿ ಬರಲಿದೆ ಹೋಂಡಾ ಆಕ್ಟಿವಾ: ಎಲೆಕ್ಟ್ರಿಕ್ ಸ್ಕೂಟರ್ಗಳ ರಾಜ ಆಗುತ್ತಾ?
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಡಿಕೇರಿ ಬೀದಿಯಲ್ಲಿ ಕಾರಿನ ಗ್ಲಾಸ್ ಒಡೆದು 'ಹುಚ್ಚಾಟ' ಮಾಡಿದ ವೆಂಕಟ್
Recommended Video
ನಟ, ನಿರ್ದೇಶಕ ಹುಚ್ಚ ವೆಂಕಟ್ ಚೆನ್ನೈ ಬೀದಿಯಲ್ಲಿ ಕೊಳಕು ಬಟ್ಟೆ, ಕಾಲಲ್ಲಿ ಚಪ್ಪಲಿ ಇಲ್ಲದೇ ಹುಚ್ಚನಂತೆ ಸುತ್ತಾಡಿ ಸುದ್ದಿಯಾಗಿದ್ದರು. ಈಗ ಮಡಿಕೇರಿಯಲ್ಲಿ ಸಾರ್ವಜನಿಕವಾಗಿ ರಂಪಾಟ ಮಾಡಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾನೆ.
ಮಡಿಕೇರಿ ಬಸ್ ನಿಲ್ದಾಣದಲ್ಲಿ ನಿಂತಿದ್ದ ಕಾರಿನ ಗಾಜು ಒಡೆದು ಹಾಕಿ ರೌಡಿಯಂತೆ ವರ್ತಿಸಿದ್ದಾನೆ. ಯಾವುದೇ ಕಾರಣವಿಲ್ಲದೇ ರಸ್ತೆ ಬದಿಯಲ್ಲಿ ನಿಂತಿದ್ದ ಕಾರಿನ ಮೇಲೆ ತನ್ನ ಹುಚ್ಚಾಟ ತೋರಿದ್ದಾರೆ. ಕಲ್ಲಿನಿಂದ ಕಾರಿನ ಗಾಜು ಪೀಸ್ ಪೀಸ್ ಮಾಡಿದ್ದು, ಡೋರ್ ಗಳನ್ನ ಮುರಿದು ಹಾಕಿದ್ದಾರೆ. ಸಂಪೂರ್ಣವಾಗಿ ಕಾರು ಜಖಂಗೊಂಡಿದೆ.
ಕಾಲಲ್ಲಿ ಚಪ್ಪಲಿ ಇಲ್ಲ, ಕೊಳಕು ಬಟ್ಟೆ, ಚೆನ್ನೈನಲ್ಲಿ ಹುಚ್ಚ ವೆಂಕಟ್ ಅಲೆದಾಟ
ಕೆ.ಎಸ್.ಆರ್.ಟಿ.ಸಿ ಬಸ್ ಡಿಪೋ ಘಟಕ ಬಳಿ ಈ ಘಟನೆ ನಡೆದಿದ್ದು, ಸ್ಥಳದಲ್ಲಿ ನಿಂತಿದ್ದ ಸ್ಥಳಿಯ ಜನರನ್ನ ನಿಂದಿಸಿದ್ದಾನೆ. ಇದರಿಂದ ತೀವ್ರವಾಗಿ ರೊಚ್ಚಿಗೆದ್ದ ಸಾರ್ವಜನಿಕರು ಹುಚ್ಚ ವೆಂಕಟ್ ಅವರಿಗೆ ಥಳಿಸಿದ್ದಾರೆ. ಬಳಿಕ ಸ್ಥಳಕ್ಕೆ ಬಂದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಟಿವಿ ಮಾಧ್ಯಮಕ್ಕೆ ತಿಳಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಕಾರು ಮಾಲೀಕ ''ನಾನು ಎ.ಟಿ.ಎಂಗೆ ಹೋಗಿ ವಾಪಸ್ ಬಂದೆ. ವೆಂಕಟ್ ಕಾಣಿಸಿದರು, ನೋಡುತ್ತಿದ್ದೆ. ಆಮೇಲೆ ಯಾಕೋ ಗುರಾಯಿಸುತ್ತಿದ್ದೀಯಾ, ನೀವು ಮಡಿಕೇರಿಯವರು ಜಾಸ್ತಿ ಆಯ್ತು ಎಂದು ಏಕಾಏಕಿ ಹಲ್ಲೆ ನಡೆಸಿದರು. ನಂತರ ಕಾರನ್ನ ಕೂಡ ಒಡೆದು ಹಾಕಿದ್ದಾರೆ'' ಎಂದು ತಿಳಿಸಿದ್ದಾರೆ.
ಚೆನ್ನೈನ ಬೀದಿ ಬೀದಿ ಅಲೆಯುತ್ತಿದ್ದ ಹುಚ್ಚ ವೆಂಕಟ್ ಸಿಕ್ಕಿದ್ದಾರೆ
ಇದಕ್ಕೂ ಮುಂಚೆ ಪಾಂಡವಪುರದಲ್ಲಿ ಹುಚ್ಚ ವೆಂಕಟ್ ಕಾಣಿಸಿಕೊಂಡಿದ್ದರಂತೆ. ಅಲ್ಲಿಂದ ನೇರವಾಗಿ ಮಡಿಕೇರಿಗೆ ಹೋಗಿರುವ ಫೈರಿಂಗ್ ಸ್ಟಾರ್ ಮತ್ತೊಂದು ಹುಚ್ಚಾಟ ಪ್ರದರ್ಶಿಸಿದ್ದಾರೆ.