Don't Miss!
- News Bengaluru Rain: ಸುದೀರ್ಘ ಕಾಯುವಿಕೆ ಅಂತ್ಯ: ಬೆಂಗಳೂರಿಗೆ ಎಂಟ್ರಿ ಕೊಟ್ಟ ಮಳೆ; ವಿಡಿಯೋ ನೋಡಿ
- Automobiles ರೈತರ ವಿಶ್ವಾಸದೊಂದಿಗೆ 40 ಲಕ್ಷ ಟ್ರ್ಯಾಕ್ಟರ್ ಮಾರಾಟ ಮೈಲಿಗಲ್ಲು ಸಾಧಿಸಿದ ಮಹೀಂದ್ರಾ
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲೋಕಸಭೆ ಚುನಾವಣೆಯಲ್ಲಿ ಹುಚ್ಚ ವೆಂಕಟ್ ಸ್ಪರ್ಧೆ: ಕ್ಷೇತ್ರ ಯಾವುದು.?
ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ರಾಜಕೀಯದ ಕಡೆ ಒಲವು ತೋರಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡ್ತೀನಿ ಎಂದು ಹೇಳುವ ಮೂಲಕ ಮತ್ತೆ ಸುದ್ದಿಯಾಗಿದ್ದಾರೆ.
ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ನಾನು ಮಂಡ್ಯದಿಂದ ಸ್ಪರ್ಧೆ ಮಾಡ್ತೀನಿ. ಮಂಡ್ಯದ ಜನತೆ ನನ್ನ ಕೈ ಹಿಡಿಯುತ್ತಾರೆ. ಒಂದು ವೇಳೆ ಕೈಬಿಟ್ಟರೂ ಅದಕ್ಕೊಂದು ಕಾರಣ ಇರುತ್ತೆ ಎಂದು ಹೇಳಿದ್ದಾರೆ. ಪ್ರಸಕ್ತ ರಾಜಕೀಯ ವಿದ್ಯಮಾನದ ಬಗ್ಗೆ ಮಾತನಾಡಿದ ವೆಂಕಟ್ ಜನರು ತಪ್ಪು ಆಯ್ಕೆ ಮಾಡ್ತಿದ್ದಾರೆ. ರಾಜಕೀಯ ವ್ಯಕ್ತಿಗಳಲ್ಲ. ಸಮ್ಮಿಶ್ರ ಸರ್ಕಾರ ಬೇಗ ಪತನವಾಗುತ್ತೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿರುವುದು ರಾಜ್ಯ ಸರ್ಕಾರಕ್ಕೆ ತೊಂದರೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಚುನಾವಣೆಯಲ್ಲಿ ಹುಚ್ಚ ವೆಂಕಟ್ ಸೋಲಲು ಈ 3 ಕಾರಣ ಇರಬಹುದು.!
ಇನ್ನು ಕೇಂದ್ರದಲ್ಲಿ ಯಾವ ಸರ್ಕಾರ ಬರಬೇಕು ಎಂಬ ಪ್ರಶ್ನೆಗೆ ಉತ್ತರಿಸಿದ ಹುಚ್ಚ ವೆಂಕಟ್, ''ನರೇಂದ್ರ ಮೋದಿ ಅವರು ಒಳ್ಳೆಯ ಕೆಲಸ ಮಾಡಿದ್ದಾರೆ, ಮತ್ತೆ ಅವರು ಬರಬೇಕು ಎನ್ನುವುದು ನನ್ನ ಆಸೆ. ಒಂದು ವೇಳೆ ರಾಹುಲ್ ಗಾಂಧಿಗೂ ಅವಕಾಶ ಕೊಟ್ರೆ ಅದು ಒಳ್ಳೆಯದೇ'' ಎಂದಿದ್ದಾರೆ.
ಪ್ರಚಾರ ಇಲ್ಲ, ಭಾಷಣನೂ ಮಾಡ್ಲಿಲ್ಲ, ವೆಂಕಟ್ ಗೆ ಸಿಕ್ಕ ಮತವೆಷ್ಟು.?
ಈ ವರ್ಷ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಹುಚ್ಚ ವೆಂಕಟ್ ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಯಾವುದೇ ಪ್ರಚಾರ ಮಾಡಿರಲಿಲ್ಲ. ಚುನಾವಣೆ ಸಮಯದಲ್ಲಿ ನಟಿಯೊಬ್ಬರ ಜೊತೆ ಮದುವೆಯಾಗಿದ್ದೀನಿ ಎಂದು ಹೇಳಿಕೊಂಡು ಕಾಣೆಯಾಗಿದ್ದರು.
ಹೀಗಿದ್ದರೂ ಹುಚ್ಚ ವೆಂಕಟ್ ಅವರಿಗೆ ವಿಧಾನಸಭೆ ಚುನಾವಣೆಯಲ್ಲಿ 764 ಮತಗಳು ಸಿಕ್ಕಿತ್ತು. ಇದು ಆಶ್ಚರ್ಯಕ್ಕೆ ಕಾರಣವಾಗಿತ್ತು. ಈಗ ಬೆಂಗಳೂರಿನಿಂದ ಮಂಡ್ಯ ಕಡೆ ಪ್ರಯಾಣ ಮಾಡಲಿದ್ದಾರೆ. ಅಲ್ಲಿ ವೆಂಕಟ್ ಗೆ ಎಷ್ಟು ಮತ ಸಿಗಲಿದೆ ಎಂದು ಕಾದು ನೋಡಬೇಕಿದೆ.
ಮತ್ತೆ ಪೋಲೀಸರ ಅತಿಥಿಯಾದ ಹುಚ್ಚ ವೆಂಕಟ್
ಇತ್ತೀಚಿಗಷ್ಟೆ ಬೆಂಗಳೂರಿನ ಜ್ಞಾನಭಾರತಿ ಕ್ಯಾಂಪಸ್ ನ ಉಲ್ಲಾಳ ಮುಖ್ಯ ರಸ್ತೆಯಲ್ಲಿ ಹುಚ್ಚ ವೆಂಕಟ್ ಕುಡಿದು ಕುಡುಕರಂತೆ ಓಡಾಡಿ ಕೆಲವರ ಮೇಲೆ ಹಲ್ಲೆ ಮಾಡಿದ್ದರು. ನಂತರ ಪೊಲೀಸರು ವೆಂಕಟ್ ಅವರನ್ನ ಬಂಧಿಸಿದ್ದರು. ಈಗ ಹೊರಗೆ ಬಂದಿರುವ ವೆಂಕಟ್ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಹೊರಟಿದ್ದಾರೆ.