Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹುಚ್ಚ ವೆಂಕಟ್ ಗೆ 'ಎಕ್ಕಡ' ಚಿಹ್ನೆ ಸಿಕ್ಕಿದೆಯಂತೆ.! ಇದು ನಿಜಾನ.?
Recommended Video
ಫೈರಿಂಗ್ ಸ್ಟಾರ್ ಹುಚ್ಚ ವೆಂಕಟ್ ರಾಜರಾಜೇಶ್ವರಿ ನಗರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುತ್ತಿದ್ದಾರೆ. ಹಾಗಿದ್ರೆ, ಹುಚ್ಚ ವೆಂಕಟ್ ಗೆ ಮತ ಹಾಕಬೇಕು ಅಂದ್ರೆ ಯಾವ ಚಿಹ್ನೆಗೆ ವೋಟ್ ಮಾಡಬೇಕು ಎಂಬ ಕುತೂಹಲಕ್ಕೆ ಈಗ ಬ್ರೇಕ್ ಬಿದ್ದಿದೆ.
ಹೌದು, ಚುನಾವಣೆ ಆಯೋಗವೂ ಹುಚ್ಚ ವೆಂಕಟ್ ಅವರಿಗೆ ತಕ್ಕ ಚಿಹ್ನೆ ನೀಡಿದೆ ಎನ್ನಲಾಗಿದೆ. ವೆಂಕಟ್ ಅವರು ನೆಚ್ಚಿನ 'ಚಪ್ಪಲಿ' ಚಿಹ್ನೆ ನೀಡಿದೆ ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಒಂದು ವೇಳೆ ಇದು ನಿಜವೇ ಆದ್ರೆ, ಇದೊಂದು ರೀತಿಯಲ್ಲಿ ಕಾಕತಾಳೀಯ ಎನ್ನಬಹುದು.
ಇನ್ನು ಇಷ್ಟು ದಿನ ಇತರರನ್ನ ಬೈಯಲು ನನ್ ಎಕ್ಕಡ ಎನ್ನುತ್ತಿದ್ದ ಹುಚ್ಚಾ ವೆಂಕಟ್ ಇಂದಿನಿಂದ 'ನನ್ ಎಕ್ಕಡ'ಕ್ಕೆ ವೋಟ್ ಹಾಕಿ ಎನ್ನಬೇಕಾಗುತ್ತೆ. ಇದು ಕೇವಲ ವದಂತಿ ಅಷ್ಟೇ, ಅಧಿಕೃತವಲ್ಲವೆನ್ನಲಾಗುತ್ತಿದೆ. ಕಾದು ನೋಡೋಣ.
ಹುಚ್ಚ ವೆಂಕಟ್ 'ಆಸ್ತಿ' ವಿವರ ನೋಡಿ ಹೇಳಿ ಈತ 'ಶ್ರೀಮಂತನಾ-ಬಡವನಾ.?
ಅಂದ್ಹಾಗೆ, ಹುಚ್ಚಾ ವೆಂಕಟ್ ಪಕ್ಷೇತರವಾಗಿ ಚುನಾವಣೆಗೆ ನಿಂತಿದ್ದಾರೆ. ಆದ್ರೆ, ಇವರು ಸ್ಪರ್ಧೆ ಮಾಡುತ್ತಿರುವ ಸಾಮಾನ್ಯವಾದ ವ್ಯಕ್ತಿಗಳ ಎದುರಲ್ಲ, ಹಾಲಿ ಶಾಸಕ ಕಾಂಗ್ರೆಸ್ನ ಮುನಿರತ್ನ ಮತ್ತು ಅಮೂಲ್ಯ ಅವರ ಮಾವ ರಾಮಚಂದ್ರಪ್ಪ ಅವರನ್ನ ಎದುರಿಸುತ್ತಿದ್ದಾರೆ.
ಹುಚ್ಚ ವೆಂಕಟ್ ಚುನಾವಣೆ ಪ್ರಣಾಳಿಕೆಯಲ್ಲಿ ಬಂಪರ್ ಕೊಡುಗೆಗಳು: ಊಹೆಗೂ ಮೀರಿದ್ದು.!
ಇಷ್ಟು ದಿನ ಸಿನಿಮಾ ವಿಚಾರಕ್ಕೆ ಸುದ್ದಿಯಾಗುತ್ತಿದ್ದ ವೆಂಕಟ್, ಈಗ ಚುನಾವಣ ಅಖಾಡಕ್ಕೆ ಇಳಿದು ಇಲ್ಲಿಯೂ ಅಬ್ಬರಿಸುವ ಸೂಚನೆ ನೀಡಿದ್ದಾರೆ. 'ನಾನು ಮತ ಕೇಳಲ್ಲ, ನನ್ ಮಗಂದ್ ನಾನು ಶಾಸಕನಾಗಬೇಕಂದ್ರೆ ವೋಟ್ ಹಾಕಿ' ಘರ್ಜಿಸಿದ್ದಾರೆ.