Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವೇದ ವಿಜಯಯಾತ್ರೆ: ಶಿವಣ್ಣನನ್ನು ನೋಡಲು ಕಿಕ್ಕಿರಿದು ಜಮಾಯಿಸಿದ ಜನರು
ನಿರ್ದೇಶಕ ಎ ಹರ್ಷ ಸ್ಯಾಂಡಲ್ವುಡ್ ಕಿಂಗ್ ಶಿವ ರಾಜ್ಕುಮಾರ್ ಅವರಿಗೆ ನಾಲ್ಕನೇ ಬಾರಿಗೆ ವೇದ ಚಿತ್ರದ ಮೂಲಕ ಆಕ್ಷನ್ ಕಟ್ ಹೇಳಿದ್ದಾರೆ. ಈ ಹಿಂದೆ ಬಂದಿದ್ದ ಎ ಹರ್ಷ ಹಾಗೂ ಶಿವಣ್ಣ ಕಾಂಬಿನೇಶನ್ಗಳಿಗಿಂತ ವೇದ ಭಿನ್ನವಾಗಿದ್ದು, ಚಿತ್ರ ಪ್ರೇಕ್ಷಕರನ್ನು ಮೆಚ್ಚಿಸುವಲ್ಲಿ ಯಶಸ್ವಿಯಾಗಿದೆ. ಶಿವ ರಾಜ್ಕುಮಾರ್ ವಿಭಿನ್ನ ಲುಕ್ ಹಾಗೂ ನಟನೆಗೆ ಸಿನಿ ರಸಿಕರು ಫುಲ್ ಮಾರ್ಕ್ಸ್ ನೀಡಿದ್ದಾರೆ. ಚಿತ್ರದಲ್ಲಿ ನಟಿಸಿರುವ ಅದಿತಿ ಸಾಗರ್, ಉಮಾಶ್ರೀ, ಶ್ವೇತಾ ಚೆಂಗಪ್ಪ ಹಾಗೂ ವೀಣಾ ಪೊನ್ನಪ್ಪ ಸಹ ಅದ್ಭುತ ಅಭಿನಯ ಮಾಡಿ ಜನರ ಮನ ಗೆದ್ದಿದ್ದಾರೆ.
ಶಿವ ರಾಜ್ಕುಮಾರ್ 125ನೇ ಚಿತ್ರವಾಗಿರುವ ವೇದ ಕೇವಲ 125ನೇ ಚಿತ್ರ ಎಂಬ ಕಾರಣಕ್ಕೆ ಮಾತ್ರವಲ್ಲದೇ ತನ್ನ ಕಂಟೆಂಟ್ನಿಂದ ಸದ್ದು ಮಾಡಲಾರಂಭಿಸಿದೆ. ಸಿನಿ ರಸಿಕರು ತಮ್ಮ ಕುಟುಂಬ ಸಮೇತರಾಗಿ ಚಿತ್ರಮಂದಿರಕ್ಕೆ ಬಂದು ಸಿನಿಮಾ ವೀಕ್ಷಿಸುತ್ತಿದ್ದಾರೆ. ಹೀಗೆ ಫ್ಯಾಮಿಲಿ ಆಡಿಯನ್ಸ್ ಅನ್ನು ತನ್ನತ್ತ ಸೆಳೆಯುವಲ್ಲಿ ಯಶಸ್ವಿಯಾಗಿರುವ ವೇದ ಬ್ಲಾಕ್ ಬಸ್ಟರ್ ಆಗಿದೆ.
ಹೀಗೆ ಚಿತ್ರ ಗೆದ್ದ ಕಾರಣ ವೇದ ಚಿತ್ರತಂಡ ವಿಜಯ ಯಾತ್ರೆಯನ್ನು ಆರಂಭಿಸಿದೆ. ಮೊದಲಿಗೆ ಕ್ರಿಸ್ಮಸ್ ದಿನದಂದು ಬೆಂಗಳೂರಿನ ಮುಖ್ಯ ಚಿತ್ರಮಂದಿರ ನರ್ತಕಿ, ಪ್ರಸನ್ನ, ವೀರೇಶ್ ಹಾಗೂ ಒರಾಯನ್ ಪಿವಿಆರ್ಗೆ ಭೇಟಿ ನೀಡಿದ್ದ ವೇದ ಚಿತ್ರತಂಡ ಸೋಮವಾರ ಮೈಸೂರು ಹಾಗೂ ನಿನ್ನೆ (ಡಿಸೆಂಬರ್ 27 ) ಮೈಸೂರು ಜಿಲ್ಲೆಯ ಚಿತ್ರಮಂದಿರಗಳಿಗೆ ಭೇಟಿ ನೀಡಿದೆ.
ಇನ್ನು ಮೈಸೂರು ಜಿಲ್ಲೆಯ ತಿರುಮಕೂಡಲು ನರಸಿಪುರ ಪಟ್ಟಣದ ಚಿತ್ರಮಂದಿರಕ್ಕೆ ಭೇಟಿ ನೀಡಿದ್ದ ಶಿವ ರಾಜ್ಕುಮಾರ್ ಅವರನ್ನು ನೋಡಲು ಅಲ್ಲಿನ ಜನ ಕಿಕ್ಕಿರಿದು ತುಂಬಿದ್ದರು ಹಾಗೂ ಕೆಲ ಕಾಲ ಅಲ್ಲಿ ವಾಹನ ಸಂಚಾರ ಅಸ್ತವ್ಯಸ್ತ ಕೂಡ ಆಗಿತ್ತು. ಶಿವ ರಾಜ್ಕುಮಾರ್ ಅವರನ್ನು ನೋಡಲು ಅಲ್ಲಿ ನೆರೆದಿದ್ದ ಜನಸ್ತೋಮದ ಚಿತ್ರಗಳು ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಈ ವಯಸ್ಸಿನಲ್ಲೂ ಇಷ್ಟರ ಮಟ್ಟಿಗೆ ಜನರನ್ನು ರಂಜಿಸಿ ಜನರ ಗುಂಪು ಸೇರುವ ಹಾಗೆ ಮಾಡುವ ಶಿವಣ್ಣ ಕುರಿತು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇನ್ನು ಇಂದು ( ಡಿಸೆಂಬರ್ 28 ) ಕೊಳ್ಳೇಗಾಲ, ಮಳವಳ್ಳಿ, ಮದ್ದೂರು, ಮಂಡ್ಯ ಹಾಗೂ ರಾಮನಗರದ ಚಿತ್ರಮಂದಿರಗಳಿಗೆ ಶಿವ ರಾಜ್ಕುಮಾರ್ ಆಗಮಿಸಲಿದ್ದಾರೆ.