Don't Miss!
- Automobiles ವಂದೇ ಭಾರತ್ ಸ್ಲೀಪರ್, ಸೂಪರ್ ಆಪ್.. ರೈಲ್ವೆಯಿಂದ ಬಿಗ್ ಪ್ಲ್ಯಾನ್: ನೀವು ತಿಳಿಯಬೇಕಾದ ವಿಚಾರಗಳಿವು!
- News Siddaramaiah campaign: ಬಾಗೇಪಲ್ಲಿಯಲ್ಲಿಂದು ಸಿಎಂ ಸಿದ್ದರಾಮಯ್ಯ ಪ್ರಚಾರ ಸಭೆ, ಡಿಕೆಶಿ ಭಾಗಿ
- Finance Real Estate: ಬೆಂಗಳೂರಿನ ಕೋರಮಂಗಲದಲ್ಲಿ ದುಬಾರಿ ಬೆಲೆಗೆ ಆಸ್ತಿ ಖರೀದಿಸಿದ ಅಜಿತ್ ಐಸಾಕ್
- Technology Infinix: ಭಾರತದಲ್ಲಿಂದು ಇನ್ಫಿನಿಕ್ಸ್ ನೋಟ್ 40 ಪ್ರೊ 5G ಮೊದಲ ಸೇಲ್: ಬೆಲೆ, ಫೀಚರ್ಸ್ ಪರಿಶೀಲಿಸಿ
- Lifestyle ಎಳ ನೀರು ಹಾಕಿ ಮಾಡುವ 2 ದೋಸೆ ರೆಸಿಪಿ: ರುಚಿ ಸೂಪರ್, ಆರೋಗ್ಯಕ್ಕೆ ತುಂಬಾನೇ ಒಳ್ಳೆಯದು
- Sports GT vs DC: ಡೆಲ್ಲಿ ವಿರುದ್ಧದ ಹೀನಾಯ ಸೋಲಿಗೆ ಇವರೇ ಕಾರಣ; ಶುಭ್ಮನ್ ಗಿಲ್ ಗರಂ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪವನ್ ಕಲ್ಯಾಣ್ ರನ್ನ ಮನೆಗೆ ಕಳುಹಿಸಿದ ಪೊಲಿಟಿಷಿಯನ್
ಸಂಕ್ರಾಂತಿ ಹಬ್ಬದ ವಿಶೇಷವಾಗಿ ಕನ್ನಡ ಸಿನಿಮಾ ಪ್ರಿಯರಿಗೆ ಮನೋರಂಜನೆ ನೀಡಲೆಂದು ಹಂಬಲ್ ಪೊಲಿಟಿಷಿಯನ್ ನಾಗರಾಜ್ ಸಿನಿಮಾ ರಾಜ್ಯಾದಂತ್ಯ ತೆರೆಕಂಡಿತ್ತು. ಮೊದಲ ಬಾರಿಗೆ ಡ್ಯಾನಿಶ್ ಸೇಠ್ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸಿದ್ದರು. ಚಿತ್ರದ ಟೀಸರ್ ನಿಂದ ಸಾಕಷ್ಟು ಕುತೂಹಲ ಮೂಡಿಸಿದ್ದ ಹಂಬಲ್ ಪೊಲಿಟಿಷಿಯನ್ ನಾಗರಾಜ್ ಈಗ ಜನರ ಮನಸ್ಸನ್ನ ಗೆಲ್ಲುವುದರ ಜೊತೆಗೆ ಪರಭಾಷೆಯ ಸಿನಿಮಾಗಳಿಗೆ ಸೆಡ್ಡು ಹೊಡೆದಿದೆ.
ಹಂಬಲ್ ಪೊಲಿಟಿಷಿಯನ್ ನಾಗರಾಜ್ ಸಿನಿಮಾ ಜೊತೆಯಲ್ಲಿ ಪವನ್ ಕಲ್ಯಾಣ್ ಅಭಿನಯದ ಅಜ್ಞಾತವಾಸಿ ಚಿತ್ರ ಕೂಡ ಬಿಡುಗಡೆ ಆಗಿತ್ತು. ಸಿನಿಮಾವನ್ನ ಬೆಳ್ಳಂಬೆಳಗ್ಗೆ ನೋಡಿದ ಪ್ರೇಕ್ಷಕರು ಅಜ್ಞಾತವಾಸಿಯನ್ನ ನೋಡದೆ ಇರುವುದೇ ವಾಸಿ ಎಂದು ಅಭಿಪ್ರಾಯ ಪಟ್ಟಿದ್ದರು.
ಇದೇ ಕಾರಣದಿಂದ ಈಗ ಅಜ್ಞಾತವಾಸಿ ಚಿತ್ರ ಬಿಡುಗಡೆ ಆಗಿದ್ದ ಚಿತ್ರಮಂದಿರಗಳಲ್ಲಿ ಹಂಬಲ್ ಪೊಲಿಟಿಷಿಯನ್ ನಾಗರಾಜ್ ಚಿತ್ರವನ್ನ ಹಾಕಲಾಗಿದೆಯಂತೆ. ಉತ್ತಮವಾದ ಕನ್ನಡ ಸಿನಿಮಾ ಮುಂದೆ ಯಾವುದೇ ಪರಭಾಷೆಯ ಸಿನಿಮಾಗಳ ನಿಲ್ಲುವುದಿಲ್ಲ ಎನ್ನುವುದು ಈ ಮೂಲಕ ಸಾಭೀತಾಗಿದೆ.
ಹಂಬಲ್ ಪೊಲಿಟಿಷಿಯನ್ ನಾಗರಾಜ್ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದ್ದು ಊರ್ವಶಿ, ರೆಕ್ಸ್, ಶ್ರೀನಿವಾಸ ಥಿಯೇಟರ್ ನಲ್ಲಿ ಪವನ್ ಕಲ್ಯಾಣ್ ಚಿತ್ರವನ್ನ ವಾರಕ್ಕೂ ಮುಂಚೆಯೇ ತೆಗೆದು ಹಾಕಲಾಗಿದೆ.
ಹಂಬಲ್ ಪೊಲಿಟಿಷಿಯನ್ ನಾಗರಾಜ್ ಸಿನಿಮಾದಲ್ಲಿ ಡ್ಯಾನಿಶ್ ಸೇಠ್ ನಾಯಕನಾಗಿ ಅಭಿನಯಿಸಿದ್ರೆ ರೋಜರ್ ನಾರಾಯಣ್, ಶೃತಿ ಹರಿಹರನ್ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದರು. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅತಿಥಿ ಪಾತ್ರದಲ್ಲಿ ಅಭಿನಯಿಸಿದ್ದಾರೆ.