Don't Miss!
- News ಕಲೆ ಮತ್ತು ಕಲೆಗಾರ! ಪ್ರಧಾನಿ ನರೇಂದ್ರ ಮೋದಿ ಕಾಲೆಳೆದ ಸಿಎಂ ಸಿದ್ದರಾಮಯ್ಯ
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Automobiles ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹೈದರಾಬಾದಿನಲ್ಲಿ ತಾರೆ ಅಕ್ಕಿನೇನಿ ಅಮಲಾ ಬಂಧನ
"Stop Coal Mining Save Indian Forests" ಎಂಬ ಬ್ಯಾನರ್ನ್ನು ಚಾರ್ಮಿನಾರ್ ಮೇಲೆ ಕಟ್ಟಿದ್ದು. ಗ್ರೀನ್ಪೀಸ್ ಸಂಘಟನೆಯ ಕಾರ್ಯಕರ್ತೆಯೂ ಆಗಿರುವ ಅಮಲಾ ಈ ಬ್ಯಾನರ್ಗಳನ್ನು ಕಟ್ಟಿಸಿದ್ದರು. ಇದಕ್ಕಾಗಿ ಈಕೆ ಹಾಗೂ ಇತರೆ ಗ್ರೀನ್ ಪೀಸ್ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.
ಕಲ್ಲಿದ್ದಲು ಗಣಿಗಾರಿಕೆಯಿಂದ ಪರಿಸರ ಹಾಳಾಗುವುದಷ್ಟೇ ಅಲ್ಲ, ಲಕ್ಷಾಂತರ ಮಂದಿ ಗಿರಿಜನರ ಬದುಕು ನಾಶವಾಗುತ್ತದೆ. ಲಕ್ಷಾಂತರ ಪ್ರಾಣಿ ಸಂಕುಲ ನಶಿಸುತ್ತದೆ. ಬಂಗಾಳದ ಹುಲಿ ಸಂತತಿಯೂ ಈಗಾಗಲೆ ನಿರ್ನಾಮದ ಹಾದಿಯಲ್ಲಿದ್ದು ಅವು ಉಳಿಯುವುದಿಲ್ಲ ಎಂದಿದ್ದಾರೆ ಅಮಲಾ.
ಭಾರತದ ಪ್ರಧಾನಿ ಮನಮೋಹನ್ ಸಿಂಗ್ ಅವರು ಇತ್ತೀಚೆಗೆ 13 ಕಲ್ಲಿದ್ದಲು ಗಣಿಗಾರಿಕೆಗೆ ಗ್ರೀನ್ ಸಿಗ್ನಲ್ ನೀಡಿದ್ದರು. ಇದಕ್ಕೆ ದೇಶದಾದ್ಯಂತೆ ತೀವ್ರ ವಿರೋಧ ವ್ಯಕ್ತವಾಗಿದೆ. ಇದರಿಂದ 10 ಲಕ್ಷ ಹೆಕ್ಟೇರ್ ಅರಣ್ಯ ನಾಶವಾಗುತ್ತದೆ. ಅಪಾರ ವನ್ಯ ಸಂಪತ್ತಿಗೆ ಕೊಡಲಿ ಏಟು ಬೀಳಲಿದೆ ಎಂದು ಪ್ರತಿಭಟಿಸಲಾಗಿತ್ತು.
ಅಮಲಾ ಅವರನ್ನು ಚಾರ್ಮಿನಾರ್ ಪೊಲೀಸರು ಬಂಧಿಸಿದ ಬಳಿಕ ಅವರನ್ನು ಠಾಣೆಗೆ ಕರೆದೊಯ್ದು ಬಳಿಕ ಬಾಂಡ್ ಪತ್ರಕ್ಕೆ ಸಹಿ ಮಾಡಿಸಿಕೊಂಡು ಬಿಡುಗಡೆ ಮಾಡಿದ್ದಾರೆ. (ಏಜೆನ್ಸೀಸ್)