Don't Miss!
- News Neha Hiremath: ನೇಹಾ ಹಿರೇಮಠ್ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ನೀಡಲು ವಿಎಚ್ಪಿ ಒತ್ತಾಯ
- Technology vivo: ವಿವೋ Y200i ಸ್ಮಾರ್ಟ್ಫೋನ್ ಲಾಂಚ್! 12GB RAM.. 6000mAh ಬ್ಯಾಟರಿ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕಾಂಗ್ರೆಸ್ ಸೇರಿ ಎಲ್ಲವನ್ನೂ ಕಳೆದುಕೊಂಡೆ: ನಿವೇಶನ ಮಾರಿದ ಕತೆ ಹೇಳಿದ ಜಗ್ಗೇಶ್
ನಟ ಜಗ್ಗೇಶ್ ಸಿನಿಮಾದ ಜೊತೆಗೆ ರಾಜಕೀಯದಲ್ಲಿಯೂ ಬಹಳ ಸಕ್ರಿಯರಾಗಿದ್ದಾರೆ. ಕಾಂಗ್ರೆಸ್ನಿಂದ ಶಾಸಕರಾಗಿ ಆಯ್ಕೆ ಆಗಿದ್ದ ಜಗ್ಗೇಶ್ ಅವರು ಆಪರೇಷನ್ ಕಮಲ ವೇಳೆಯಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರ್ಪಡೆಗೊಂಡರು. ಪ್ರಸ್ತುತ ಬಿಜೆಪಿಯಲ್ಲಿಯೇ ಇದ್ದಾರೆ.
Recommended Video
ನಿನ್ನೆ (ಮಾರ್ಚ್ 28) ಬಿಜೆಪಿಯಿಂದ ಆಯೋಜಿತವಾಗಿದ್ದ 'ಮಾಧ್ಯಮ-ಮಂಥನ' ಕಾರ್ಯಕ್ರಮದಲ್ಲಿ ಮಾತನಾಡಿದ ಜಗ್ಗೇಶ್ ಕಾಂಗ್ರೆಸ್ ಪಕ್ಷದಿಂದಾಗಿ ನಾನು ಗಳಿಸಿದ್ದೆಲ್ಲವನ್ನೂ ಕಳೆದುಕೊಂಡೆ ಎಂದಿದ್ದಾರೆ.
'ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಮಂಕುಬೂದಿ ಎರಚಿದ್ದ ಎಂ.ಡಿ.ಲಕ್ಷ್ಮಿನಾರಾಯಣ ಭಟ್ಟ ನನಗೂ ಬೆಂಕಿ ಇಟ್ಟಿದ್ದ, ನನ್ನ ಭವಿಷ್ಯಕ್ಕೆ ಕಲ್ಲು ಹಾಕಿದ' ಎಂದಿದ್ದಾರೆ ಜಗ್ಗೇಶ್.
ಡಿ.ಕೆ.ಶಿವಕುಮಾರ್ ನನ್ನನ್ನು ಕಾಂಗ್ರೆಸ್ಗೆ ಸೇರಿಸಿ ಕಾರ್ಯದರ್ಶಿಯಾಗಿ ಮಾಡಿದರು. ವೇದಿಕೆಗಳಲ್ಲಿ ಕೂರಿಸುವುದನ್ನು ನೋಡಿ ಇದೇನೋ ದೊಡ್ಡ ಹುದ್ದೆ ಎಂದುಕೊಂಡಿದ್ದೆ ಆದರೆ ವಿಧಾನಸಭೆ ಚುನಾವಣೆಗೆ ಸ್ಪರ್ಧೆ ಮಾಡಿದಾಗಲೇ ನನಗೆ ನಿಜಾಂಶ ಗೊತ್ತಾಗಿದ್ದು ಎಂದರು ಜಗ್ಗೇಶ್.
ಒಂದು ಹೊತ್ತಿನ ಪ್ರಚಾರಕ್ಕೆ 50 ಲಕ್ಷ ಖರ್ಚು ಮಾಡಿದ್ದೆ: ಜಗ್ಗೇಶ್
'ಆಗಿನ ಕಾಲಕ್ಕೆ ಕಾಂಗ್ರೆಸ್ ನಾಯಕರ ಬೆಳಗ್ಗಿನ ಪ್ರಚಾರಕ್ಕೆ ಸುಮಾರು 50 ಲಕ್ಷ ಹಣ ಖರ್ಚು ಮಾಡಿದ್ದೆ. ಮಾಜಿ ಶಾಸಕರೊಬ್ಬರು ಇದು ಕೇವಲ ಟ್ರೇಲರ್ ಅಷ್ಟೆ. ಮಧ್ಯಾಹ್ನ ಮತ್ತು ಸಂಜೆಯ ಖರ್ಚು ಬೇರೆ ಇದೆ ಎಂದರು. ಮೋಟಮ್ಮನ ಪ್ರಚಾರಕ್ಕೆ ಎಂಟು ಲಕ್ಷ ಖರ್ಚು ಮಾಡಿದ್ದೆ ಎಂದರು ಜಗ್ಗೇಶ್.
ನಾಲ್ಕು ನಿವೇಶನ ಮಾರಾಟ ಮಾಡಿದೆ: ಜಗ್ಗೇಶ್
ಸಿನಿಮಾಗಳಲ್ಲಿ ನಟಿಸಿ ಗಳಿಸಿದ್ದ ನಾಲ್ಕು ನಿವೇಶನಗಳನ್ನು ಚುನಾವಣೆಗಾಗಿ ಮಾರಾಟ ಮಾಡಿದೆ. ಆದರೂ ನಾನು ಗೆಲ್ಲಲಿಲ್ಲ. ಏಳು ಸಾವಿರ ಮತ ಸಹ ಬರದ ಕ್ಷೇತ್ರದಲ್ಲಿ ನಾನು 25000 ಮತ ಗಳಿಸಿದ್ದೆ ಅದನ್ನು ಕಾಂಗ್ರೆಸ್ ಹಿರಿಯರು ಮೆಚ್ಚುಗೆ ವ್ಯಕ್ತಪಡಿಸಿದರು. ಆದರೆ ಆ ವೇಳೆಗೆ ನಾನು ಎಲ್ಲವನ್ನೂ ಕಳೆದುಕೊಂಡಿದ್ದೆ ನನ್ನ ಬಳಿ ಕಾಫಿಪುಡಿ ತರಲು ಹಣ ಇರಲಿಲ್ಲ ಯಾವ ಕಾಂಗ್ರೆಸ್ ನಾಯಕನೂ ಆಗ ನನ್ನ ಕೈಹಿಡಿಯಲಿಲ್ಲ ಎಂದರು ಜಗ್ಗೇಶ್.
ನನ್ನ ನೆರವಿಗೆ ಬಂದಿದ್ದು ತೇಜಸ್ವಿನಿ ಗೌಡ: ಜಗ್ಗೇಶ್
'ಕಾಂಗ್ರೆಸ್ ಸೇರಿ ಎಲ್ಲವನ್ನೂ ಕಳೆದುಕೊಂಡಿದ್ದೆ. ಆಗ ನನ್ನ ನೆರವಿಗೆ ಬಂದಿದ್ದು ತೇಜಸ್ವಿನಿ ಗೌಡ. ಮುಂದಿನ ಚುನಾವಣೆಯಲ್ಲಿ ನನ್ನ ಮೇಲೆ ಪಿತೂರಿ ನಡೆಸಿ ಟಿಕೆಟ್ ತಪ್ಪಿಸಿದರು ಆದರೆ ಅಭಿಮಾನಿಗಳು ನನ್ನನ್ನು ಚುನಾವಣೆಗೆ ನಿಲ್ಲಿಸಿ ಅವರೇ ಖರ್ಚು ಮಾಡಿ ಗೆಲ್ಲಿಸಿದರು' ಎಂದು ಹೇಳಿದ್ದಾರೆ ಜಗ್ಗೇಶ್.
ಸಿಡಿ ವಿವಾದದ ಬಗ್ಗೆ ಜಗ್ಗೇಶ್ ಪರೋಕ್ಷ ಮಾತು
'ಬಹಳ ದೊಡ್ಡ ರಾಕ್ಷಸರ ಮುಂದೆ ನಿಂತು ಗೆದ್ದು ಬಂದಿದ್ದೇನೆ. ಈಗ ರಾಜ್ಯದಲ್ಲಿ ದೊಡ್ಡ-ದೊಡ್ಡ ನಾಯಕರ ಹಣೆಬರಹ ಬದಲಿಸುವ ಯತ್ನ ಮಾಡಲಾಗುತ್ತಿದೆ. ಉಪ್ಪು ತಿಂದವರು ನೀರು ಕುಡಿಯುವುದು ನಿಶ್ಚಿತ ಅದರಲ್ಲಿ ಅನುಮಾನವಿಲ್ಲ' ಎಂದು ಸಿಡಿ ವಿವಾದದ ಬಗ್ಗೆ ಪರೋಕ್ಷವಾಗಿ ಮಾತನಾಡಿದರು ಜಗ್ಗೇಶ್.