Don't Miss!
- Finance April 23 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Automobiles ಸಾಮಾನ್ಯರಂತೆ ಹಳ್ಳಿಯಲ್ಲಿರುವ ದೇಶದ 55ನೇ ಶ್ರೀಮಂತ ಶ್ರೀಧರ್ ವೆಂಬು: ಕಚೇರಿಗೆ ಹೋಗಲು ಎಲೆಕ್ಟ್ರಿಕ್ ಆಟೋ ಖರೀದಿ!
- News Helicopters Crash: ಸೇನೆಯ ಎರಡು ಹೆಲುಕಾಪ್ಟರ್ ಡಿಕ್ಕಿ: 10 ಜನರ ಸಾವು
- Technology Google Chrome: ಗೂಗಲ್ ಕ್ರೋಮ್ ಬಳಕೆದಾರರು ಹ್ಯಾಕಿಂಗ್ ಅಪಾಯದಲ್ಲಿ! ಸುರಕ್ಷಿತವಾಗಿರೋದು ಹೇಗೆ?
- Sports IPL 2024: ವಿರಾಟ್ ಕೊಹ್ಲಿ ವಿವಾದಾತ್ಮಕ ಔಟ್; ಅಂಪೈರಿಂಗ್ ವಿರುದ್ಧ ಕೆಂಡಕಾರಿದ ಮೊಹಮ್ಮದ್ ಕೈಫ್!
- Lifestyle ಮನೆಯಲ್ಲಿ ಘಮ ಘಮಿಸುವ ಮಲ್ಲಿಗೆ ಗಿಡ ಬೆಳೆಸೋದು ಹೇಗೆ..? ಇಲ್ಲಿದೆ ಮಾಹಿತಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿದ್ದಗಂಗಾ ಶ್ರೀಗಳ ಆರೋಗ್ಯಕ್ಕಾಗಿ ಉಪೇಂದ್ರ ಟೀಮ್ ಪ್ರಾರ್ಥನೆ
ನಡೆದಾಡುವ ದೇವರು ಶ್ರೀ ಸಿದ್ದಗಂಗಾ ಶಿವಕುಮಾರ ಸ್ವಾಮಿಜಿ ಅವರು ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯಕ್ಕಾಗಿ ಎಲ್ಲ ಭಕ್ತರು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ.
ಈಗ ನಟ ಉಪೇಂದ್ರ ಸಹ ಶ್ರೀಗಳ ಒಬ್ಬ ಭಕ್ತರಾಗಿ ಅವರ ಆರೋಗ್ಯ ಸರಿ ಹೋಗಲಿ ಎಂದು ದೇವರಲ್ಲಿ ಕೇಳಿಕೊಂಡಿದ್ದಾರೆ. ಶ್ರೀಗಳ ಅನಾರೋಗ್ಯದ ಹಿನ್ನಲೆಯಲ್ಲಿ ಉಪೇಂದ್ರ ನಟನೆಯ 'ಐ ಲವ್ ಯೂ' ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮವನ್ನು ಮುಂದುಡಲಾಗಿದೆ.
ದಾವಣಗೆರೆ ಜನರಿಗೆ 'ಐ ಲವ್ ಯೂ' ಹೇಳ್ತಾರೆ ಉಪ್ಪಿ
ನಾಳೆ ದಾವಣಗೆರೆಯಲ್ಲಿ 'ಐ ಲವ್ ಯೂ' ಸಿನಿಮಾದ ಆಡಿಯೋ ಬಿಡುಗಡೆಯ ಕಾರ್ಯಕ್ರಮ ನಡೆಯಬೇಕಿತ್ತು. ಆದರೆ, ಶ್ರೀಗಳ ಆರೋಗ್ಯ ಸರಿ ಇಲ್ಲದ ಸಮಯದಲ್ಲಿ ಕಾರ್ಯಕ್ರಮ ಮಾಡಿ ಸಂಭ್ರಮಿಸುವುದು ಸೂಕ್ತವಲ್ಲ ಎಂದು ಚಿತ್ರತಂಡ ಆ ಕಾರ್ಯಕ್ರಮವನ್ನು ಮುಂದುಡಿದೆ.
ನಟ ಉಪೇಂದ್ರ ಈ ವಿಷಯವನ್ನು ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ತಿಳಿಸಿದ್ದಾರೆ. ಅಂದಹಾಗೆ, 'ಐ ಲವ್ ಯೂ' ಆಡಿಯೋ ಲಾಂಚ್ ಮುಂದುಡಿದ ದಿನಾಂಕ ಇನ್ನು ಬಹಿರಂಗ ಆಗಿಲ್ಲ.
🙏🙏🙏🙏🙏 pic.twitter.com/tAqNyi9JlL
— Upendra (@nimmaupendra) January 17, 2019
'ಐ ಲವ್ ಯೂ' ನಟ ಉಪೇಂದ್ರ ಹಾಗೂ ರಚಿತಾ ರಾಮ್ ಜೋಡಿಯ ಹೊಸ ಸಿನಿಮಾ. ಆರ್ ಚಂದ್ರು ಈ ಸಿನಿಮಾದ ನಿರ್ದೇಶನ ಹಾಗೂ ನಿರ್ಮಾಣ ಮಾಡಿದ್ದಾರೆ. 'ಬ್ರಹ್ಮ' ಚಿತ್ರದ ಬಳಿಕ ಮತ್ತೆ ಉಪ್ಪಿ ಜೊತೆ ಆರ್ ಚಂದ್ರು ಸಿನಿಮಾ ಮಾಡುತ್ತಿದ್ದಾರೆ.