Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಉತ್ತರ ಕರ್ನಾಟಕಕ್ಕೆ ಏಕೆ ಸಹಾಯ ಮಾಡಿಲ್ಲ? : ಕಿಚ್ಚನಿಗೆ ಅಭಿಮಾನಿಯ ಸವಾಲು
Recommended Video
ನಟ ಸುದೀಪ್ ಅಭಿಮಾನಿಯೊಬ್ಬರು ಟ್ವಿಟ್ಟರ್ ನಲ್ಲಿ ಸವಾಲು ಹಾಕಿದ್ದಾರೆ. ನಾನು ಇನ್ನು ಮುಂದೆ ಕನ್ನಡ ಸಿನಿಮಾಗಳನ್ನು ನೋಡುವುದನ್ನು ನಿಲ್ಲಿಸುತ್ತೇನೆ ಎಂದು ಹೇಳಿದ್ದಾರೆ.
ಉತ್ತರ ಕರ್ನಾಟಕ ಜನರ ಸಹಾಯಕ್ಕೆ ಧಾವಿಸಿದ ಸುದೀಪ್
ಮಳೆಯಿಂದ ಅನಾಹುತ ಆಗಿರುವ ಉತ್ತರ ಕರ್ನಾಟಕಕ್ಕೆ ಯಾವುದೇ ರೀತಿಯ ಸಹಾಯ ಮಾಡಿಲ್ಲ ಎಂದು ಹೇಳಿರುವ ಅಭಿಮಾನಿ, ಸುದೀಪ್ ಬಗ್ಗೆ ಬೇಸರ ವ್ಯಕ್ತ ಪಡಿಸಿದ್ದಾರೆ. ಇದೇ ಕಾರಣಕ್ಕೆ ನಾನು ಕನ್ನಡ ಸಿನಿಮಾಗಳನ್ನು ನೋಡುವುದಿಲ್ಲ ಎಂದಿದ್ದಾರೆ.
ಅಭಿಮಾನಿಯ ಟ್ವೀಟ್ ಗೆ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ. ''ಕನ್ನಡ ಚಿತ್ರರಂಗದಲ್ಲಿ ನನ್ನನ್ನು ಸೇರಿದ ಹಾಗೆ ಅನೇಕರು ಉತ್ತರ ಕರ್ನಾಟಕದ ಸಹಾಯಕ್ಕೆ ಮುಂದಾಗಿದ್ದೇವೆ. ಇದು ನಿಮ್ಮ ಗಮನಕ್ಕೆ ಬಂದಿಲ್ಲ ಎನಿಸುತ್ತದೆ. ಅವರ ಅಗತ್ಯಗಳನ್ನು ಪೂರೈಸಲು ನಾವು ನಮ್ಮ ಕೈನಲ್ಲಿ ಆದ ಬೆಂಬಲ ನೀಡುತ್ತಿದ್ದೇವೆ. ನಿಮ್ಮ ಹೇಳಿಕೆ ತುಂಬ ಹಾನಿಕಾರಕ'' ಎಂದು ಪ್ರತಿಕ್ರಿಯೆ ನೀಡಿದ್ದಾರೆ.
I guess u ain't aware tat Many from KFI including me have taken the best initiatives to do our best to support those in need. Many of my people r on it, with their complete heart. It Wil a very damaging line from u if u still throw a blind eye to the efforts. https://t.co/xLPfHydtxe
— Kichcha Sudeepa (@KicchaSudeep) August 12, 2019
ಉತ್ತರ ಕರ್ನಾಟಕದ ಘಟನೆಯ ಬಳಿಕ ಆಗಸ್ಟ್ 8 ರಂದು ಸುದೀಪ್ ವಿಡಿಯೋ ಮೂಲಕ ಮಾತನಾಡಿದ್ದರು. "ನಾನು ಉತ್ತರ ಕರ್ನಾಟಕದ ಪ್ರವಾಹದ ಫೋಟೋಗಳು ಮತ್ತು ವಿಡಿಯೋಗಳ ಮೂಲಕ ಮಾತ್ರ ನೋಡುತ್ತಿದ್ದೀನೆ. ನಮ್ಮ ಜನ ಹೇಗಿದ್ದಾರೆ, ಅಲ್ಲಿ ಏನು ನಡೀತಿದೆ ಎನ್ನುವುದು ಗೊತ್ತಾಗುತ್ತಿಲ್ಲ. ಸರ್ಕಾರ ಏನಾದ್ರು ಮಾಡುತ್ತೆ. ಆದ್ರೆ ನನ್ನ ಸ್ನೇಹಿತರ ಬಳಗಕ್ಕೆ ಚಿಕ್ಕ ವಿನಂತಿ. ಅಲ್ಲೆ ಅಕ್ಕ ಪಕ್ಕದಲ್ಲಿ ಇರುವ ಸ್ನೇಹಿತರು ಹೋಗಿ ಅಲ್ಲಿ ಏನು ಸಹಾಯ ಬೇಕು, ಏನು ಅವಶ್ಯಕತೆ ಇದೆ, ತಕ್ಷಣಕ್ಕೆ ಏನು ಮಾಡಹುದು, ನಮ್ಮಕೈಯಲ್ಲಿ ಏನು ಮಾಡಲಿಕ್ಕೆ ಆಗುತ್ತೆ ಎಂದು ನನಗೆ ತಿಳಿಸಿ. ನಾವೆಲ್ಲರು ಸೇರಿ ನಮ್ಮವರಿಗೆ ಸಹಾಯ ಮಾಡೋಣ. ದಯವಿಟ್ಟು ಆದಷ್ಟು ಬೇಗ ಹೋಗಿ ನಮ್ಮರಿಗೆ ಏನು ಬೇಕು ಎನ್ನುವುದನ್ನು ತಿಳಿಸಿ" ಎಂದು ಕೇಳಿಕೊಂಡಿದ್ದರು.