Don't Miss!
- News ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಪ್ರಮುಖ ಆರೋಪಿಯನ್ನು ಬಂಧಿಸಿದ ಎನ್ಐಎ
- Lifestyle ಗಾಯ ಗುಣವಾಗಲು, ದೃಷ್ಟಿ ಸುಧಾರಣೆ ಸೇರಿ ಕೀವಿ ಹಣ್ಣಿನ ಲಾಭ ಎಷ್ಟಿದೆ ಗೊತ್ತಾ?
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜಕೀಯಕ್ಕೆ ಬರಲ್ಲ, ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದ ಶಿವಣ್ಣ
Recommended Video
ಟಗರು ಚಿತ್ರದ 25ನೇ ದಿನದ ವಿಜಯೋತ್ಸವಕ್ಕೆ ದಾವಣಗೆರೆಯಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರೋಡ್ ಶೋ ನಡೆಸಿದರು. ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದಿಂದ ಅಶೋಕ ಚಿತ್ರಮಂದಿರದವರೆಗೂ ರೋಡ್ ಶೋ ನಡೆಸಿ, ಅಭಿಮಾನಿಗಳಿಗೆ ಖುಷಿಯಿಂದ ಕೈ ಬೀಸಿ ಸಂತಸ ವ್ಯಕ್ತಪಡಿಸಿದರು.
ತೆರೆದ ವಾಹನದಲ್ಲಿ ರೋಡ್ ಶೋ ನಡೆಸುತ್ತಿರುವ ಮೆಚ್ಚಿನ ನಟನನ್ನು ನೋಡಲು ಬಂದ ನೂರಾರು ಅಭಿಮಾನಿಗಳನ್ನು ನಿಯಂತ್ರಿಸಲು ಪೋಲೀಸರು ಲಘು ಲಾಠಿ ಪ್ರಹಾರ ನಡೆಸಿದರು. ಇನ್ನೂ ಅಶೋಕ ಚಿತ್ರಮಂದಿರದ ಮುಂಭಾಗ ಬರುತ್ತಿದ್ದಂತೆ ರೈಲ್ವೇ ಗೇಟ್ ಹಾಕಿದ್ದರಿಂದ ಸ್ವಲ್ಪ ಕಾಲ ಬಿಸಿಲಿನಲ್ಲಿ ನಿಲ್ಲುವಂತಹ ಪರಿಸ್ಥಿತಿ ಹ್ಯಾಟ್ರಿಕ್ ಹೀರೋ ಗೆ ಎದುರಾಯಿತು.
ಇದೇ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಶಿವರಾಜ್ ಕುಮಾರ್, ''ನಾನು ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ಸಿನಿಮಾದಲ್ಲಿ ನಾನು ಶ್ರಮ ವಹಿಸುತ್ತಿದ್ದೇನೆ. ನನ್ನ ಪತ್ನಿ ಮಾತ್ರ ರಾಜಕೀಯಕ್ಕೆ ಹೋಗುತ್ತಾರೆ. ಇನ್ನು ಉಪೇಂದ್ರ ರವರ ರಾಜಕೀಯ ಎಂಟ್ರಿಗೆ ನಾನು ಸ್ವಾಗತ ಮಾಡುತ್ತೇನೆ. ನಾನು ಯಾವಾಗಲೂ ಅವರಿಗೆ ಸಪೋರ್ಟ್ ಮಾಡುತ್ತೇನೆ. ಉಪೇಂದ್ರ ಯಾವಾಗಲೂ ಒಂದು ಚೇಂಜ್ ತರುತ್ತಾರೆ'' ಎಂದರು.
ಶಿವಣ್ಣ ಜೊತೆಗೆ ನಟಿಸುವ ಶ್ರದ್ಧಾ ಕನವರಿಕೆ ಈಡೇರುತ್ತಾ.?
ಸಿನಿಮಾದಲ್ಲಿ ಅವಕಾಶ ಸಿಗಬೇಕು ಅಂದರೆ ನಟಿಯರು ಅಡ್ಜಸ್ಟ್ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಕನ್ನಡ ಚಿತ್ರರಂಗದಲ್ಲಿದೆ ಎಂಬ ಮಂಡ್ಯ ರಮೇಶ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಶಿವರಾಜ್ ಕುಮಾರ್, ''ಅವರು ಯಾಕೆ ಈ ರೀತಿ ಸ್ಟೇಟ್ ಮೆಂಟ್ ಕೊಟ್ಟಿದ್ದಾರೋ ಗೊತ್ತಿಲ್ಲ. ಚಿತ್ರರಂಗದಲ್ಲಿ ಇದುವರೆಗೂ ಈ ರೀತಿಯ ಘಟನೆ ನಡೆದಿಲ್ಲ'' ಅಂತ ಹೇಳಿದರು.