Don't Miss!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Sports ಧೋನಿ ಎದುರು ಬಂದಾಗ ಕೆ.ಎಲ್ ರಾಹುಲ್ ಕ್ಯಾಪ್ ತೆಗೆದಿದ್ದೇಕೆ?: ಕಾರಣವೇನು?
- News Lok Sabha Election 2024: ಮತದಾರರನ್ನು ಆಕರ್ಷಿಸಲು ಚುನಾವಣಾ ಆಯೋಗದ ವಿಭಿನ್ನ ಪ್ರಯತ್ನ
- Automobiles ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಅಮ್ಮ'ದಿಂದ ಹಿಂದೆ ಸರಿದ ಮಲಯಾಳ ನಟ ದಿಲೀಪ್
ಮಲಯಾಳಂ ಖ್ಯಾತ ನಟ ದಿಲೀಪ್ ಅವರು ಮಲಯಾಳಂ ಕಲಾವಿದರ ಸಂಘಕ್ಕೆ ಸೇರಿಸಿಕೊಂಡ ಬೆನ್ನಲ್ಲೆ ನಾಲ್ವರು ಪ್ರಮುಖ ನಟಿಯರು 'ಅಮ್ಮ' (AMMA- Association of Malayalam Movie Artistes) ಸಂಘಟನೆಯಿಂದ ಹೊರ ಬಂದಿದ್ದಾರೆ.
ಬಹುಭಾಷಾ ನಟಿಯನ್ನ ಅಪಹರಿಸಿ, ದೌರ್ಜನ್ಯವೆಸಗಿರುವ ಪ್ರಕರಣದಲ್ಲಿ ದಿಲೀಪ್ ಆರೋಪಿಯಾಗಿದ್ದು, ಇನ್ನು ದೋಷ ಮುಕ್ತವಾಗಿಲ್ಲ. ಈ ನಡುವೆ 'ಅಮ್ಮ' ಸಂಘಕ್ಕೆ ಮತ್ತೆ ಸೇರಿಸಿಕೊಂಡಿದ್ದಕ್ಕೆ ನಟಿಯರು ಆಕ್ರೋಶಗೊಂಡಿದ್ದರು.
ನಟಿಯ ಅಪಹರಣ ಪ್ರಕರಣ: ಮಲಯಾಳಂ ಇಂಡಸ್ಟ್ರಿ ಮತ್ತೆ ಅಲ್ಲೋಲ-ಕಲ್ಲೋಲ
ಇದೀಗ, ದಿಲೀಪ್ ಅವರೇ ಅಮ್ಮ ಸಂಘದಿಂದ ಹಿಂದೆ ಸರಿಯಲು ನಿರ್ಧರಿಸಿದ್ದಾರೆ. ತಮ್ಮ ಮೇಲಿನ ಆರೋಪಗಳಿಂದ ದೋಷಮುಕ್ತನಾದ ನಂತರವೇ ನಾನು ಸಂಘಕ್ಕೆ ಬರುತ್ತೇನೆ, ಅಲ್ಲಿಯವರೆಗೂ ಅಲ್ಲಿಂದ ದೂರವೇ ಇರುತ್ತೇನೆ ತಿಳಿಸಿದ್ದಾರೆ.
ಈ ಬಗ್ಗೆ ಅಮ್ಮ ಸಂಘಕ್ಕೆ ಪತ್ರ ಬರೆದಿರುವ ದಿಲೀಪ್ ''ನನ್ನನ್ನು ಸಂಘಟನೆಗೆ ಸೇರಿಸಿಕೊಂಡಿದ್ದಕ್ಕೆ ಧನ್ಯವಾದ. ಆದ್ರೆ, ನಾನು ಎದುರಿಸುತ್ತಿರುವ ಆರೋಪದಿಂದ ನಾನಿ ನಿರಪರಾಧಿ ಎಂದು ಪ್ರೂವ್ ಆಗಲಿ. ಅಲ್ಲಿಯವರೆಗೂ ಯಾವುದೇ ಸಂಘಟನೆಯಲ್ಲಿ ಇರಲು ನಾನು ಇಷ್ಟಪಡುವುದಿಲ್ಲ. ನನ್ನಿಂದ ಕಲಾವಿದರ ಸಂಘಕ್ಕೆ ಕಪ್ಪುಚುಕ್ಕೆ ಬರುವುದು ಬೇಡ. ಹೊಸದಾಗಿ ಆಯ್ಕೆಯಾಗಿರುವ ಸದಸ್ಯರಿಗೆ ಹೃದಯಪೂರ್ವಕ ಧನ್ಯವಾದಗಳು'' ಎಂದು ತಿಳಿಸಿದ್ದಾರೆ.
2017, ಫೆಬ್ರವರಿಯಲ್ಲಿ ಬಹುಭಾಷಾ ನಟಿಯ ಅಪಹರಣ ಮತ್ತು ದೌರ್ಜನ್ಯ ಪ್ರಕರಣ ಸಿನಿ ಜಗತ್ತಿನಲ್ಲಿ ಬಹುದೊಡ್ಡ ವಿವಾದ ಹುಟ್ಟುಹಾಕಿತ್ತು. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಲಯಾಳಂನ ಖ್ಯಾತ ನಟ ದಿಲೀಪ್ ಅವರನ್ನ ಆರೋಪಿಯನ್ನಾಗಿಸಿ ಬಂಧಿಸಲಾಗಿತ್ತು. ಹಲವು ತಿಂಗಳು ನಟ ದಿಲೀಪ್ ಸೆರೆಮನೆ ವಾಸ ಕೂಡ ಅನುಭವಿಸಿದ್ದರು.