Don't Miss!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- News India weather: ಮಳೆಗಾಗಿ ಕಾಯುತ್ತಿದ್ದವರಿಗೆ ಶಾಕ್ ಕೊಟ್ಟ ಹವಾಮಾನ ಇಲಾಖೆ
- Finance ಅಯೋಧ್ಯೆಯಲ್ಲಿ ಓಲಾ ಕ್ಯಾಬ್ ಸೇವೆ ಆರಂಭ
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಂಬಲ್ ಬಿಡುಗಡೆಗೆ ಬ್ರೇಕ್ ಹಾಕಲು ಮುಂದಾದ ಡಿಕೆ ರವಿ ತಾಯಿ
ಸತೀಶ್ ನೀನಾಸಂ ಅಭಿನಯದ ಬಹು ನಿರೀಕ್ಷೆಯ ಚಿತ್ರ 'ಚಂಬಲ್' ಚಿತ್ರಕ್ಕೆ ಬಿಡುಗಡೆಗೂ ಮುನ್ನವೇ ವಿಘ್ನ ಎದುರಾಗಿದೆ. ಚಂಬಲ್ ಪ್ರದರ್ಶನಕ್ಕೆ ತಡೆ ಕೋರಿ ದಿವಂಗತ ಐಎಎಸ್ ಅಧಿಕಾರಿ ದಿ. ಡಿ.ಕೆ. ರವಿ ಅವರ ತಾಯಿ ಗೌರಮ್ಮ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಡಿ.ಕೆ. ರವಿ ಅವರ ತಾಯಿ ಗೌರಮ್ಮ ಮತ್ತು ತಂದೆ ಕರಿಯಪ್ಪ ಅವರು ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದು, 'ಚಂಬಲ್' ಚಿತ್ರದಲ್ಲಿ ಡಿ.ಕೆ. ರವಿ ಅವರ ಚಾರಿತ್ರ್ಯಹರಣ ಮಾಡುವ ಅಂಶಗಳನ್ನು ಸೇರಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಕಥೆ ಕೇಳದೆ 'ಚಂಬಲ್' ಸಿನಿಮಾ ಒಪ್ಪಿಕೊಂಡಿದ್ದು ಯಾಕೆ ಸೋನು.?
ಚಿತ್ರದ ಟ್ರೈಲರ್ ಮತ್ತು ಶೀರ್ಷಿಕೆ ಅವಹೇಳನಕಾರಿಯಾಗಿದ್ದು, ಸೆನ್ಸಾರ್ ಪ್ರಮಾಣ ಪತ್ರ ಹಿಂಪಡೆಯಲು ನಿರ್ದೇಶನ ನೀಡಬೇಕು, ಚಿತ್ರದಲ್ಲಿ ಪ್ರಾಮಾಣಿಕ ಅಧಿಕಾರಿಯಾಗಿದ್ದ ಡಿ.ಕೆ. ರವಿ ಅವರನ್ನು ಚಿತ್ರದಲ್ಲಿ ಕೆಟ್ಟ ವ್ಯಕ್ತಿಯನ್ನಾಗಿ ಬಿಂಬಿಸಲಾಗಿದೆ, ಇದೆಲ್ಲವೂ ಬದಲಾಗಬೇಕು, ಚಿತ್ರ ಯಾವುದೇ ಕಾರಣಕ್ಕೂ ಬಿಡುಗಡೆಯಾಗಬಾರದು ಎಂದು ಗೌರಮ್ಮ ಕೋರಿದ್ದಾರೆ.
'ಚಂಬಲ್' ಚಿತ್ರದ ವಿರುದ್ಧ ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಡಿ.ಕೆ.ರವಿ ತಾಯಿ.!
ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಸುನಿಲ್ ದತ್ ಯಾದವ್ ಅವರ ಪೀಠ, ಕೇಂದ್ರ ಸಾರ್ವಜನಿಕ ಮತ್ತು ಮಾಹಿತಿ ಸಚಿವಾಲಯದ ಕಾರ್ಯದರ್ಶಿ, ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ, ಸೆನ್ಸಾರ್ ಮಂಡಳಿ, ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಚಿತ್ರತಂಡದವರಿಗೆ ನೋಟಿಸ್ ಜಾರಿ ಮಾಡಿ ಫೆಬ್ರವರಿ 21 ಕ್ಕೆ ವಿಚಾರಣೆ ಮುಂದೂಡಲಾಗಿದೆ.
'ಚಂಬಲ್' ಇದು ಡಿಕೆ ರವಿ ಲೈಫ್ ಸ್ಟೋರಿ ಚಿತ್ರವೇ?
ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಜಾಕಬ್ ವರ್ಗೀಸ್ ನಿರ್ದೇಶನದ ಚಂಬಲ್ ಚಿತ್ರವು ಫೆಬ್ರವರಿ 23ರಂದು ಬಿಡುಗಡೆಗೆ ಸಿದ್ಧವಾಗಿದೆ. ಚಿತ್ರದ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿಗೂ ಡಿಕೆ ರವಿ ಪೋಷಕರು ದೂರು ನೀಡಿದ್ದಾರೆ.
ಮಾರ್ಚ್ 16. 2015 ರಲ್ಲಿ ತಮ್ಮ ಬೆಂಗಳೂರಿನ ಫ್ಲಾಟಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಡಿಕೆ ರವಿಯವರ ಮೃತದೇಹ ಸಿಕ್ಕಿತ್ತು. ಅದರೊಂದಿಗೆ ರಾಜ್ಯದಲ್ಲಷ್ಟೇ ಅಲ್ಲದೆ ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿತ್ತು. ಅಲ್ಲದೆ ರಾಜ್ಯದ ರಾಜಕೀಯ ಮುಖಂಡರ ವಿರುದ್ಧ ಕೆಲವು ಆರೋಪಗಳೂ ಕೇಳಿ ಬಂದಿದ್ದವು. ಡಿಕೆ ರವಿಯವರು ದಕ್ಷ ಅಧಿಕಾರಿಯಾಗಿದ್ದರು. ಕೊಲಾರ, ಬೆಂಗಳೂರು ಇತರೆಡೆ ಜನಾನುರಾಗಿಯಾಗಿ ಅನೇಕ ಕೆಲಸಗಳನ್ನು ಮಾಡಿದ್ದರು. ಈಗ ಸಿಬಿಐ ನೀಡಿದ ವರದಿ ಜನರಲ್ಲಿ ಗೊಂದಲವನ್ನು ಮೂಡಿಸಿದೆ.