Don't Miss!
- Automobiles
ಬೆಲೆ ಏರಿಕೆ ಪಡೆದುಕೊಂಡ ಜನಪ್ರಿಯ ಮಹೀಂದ್ರಾ ಸ್ಕಾರ್ಪಿಯೋ ಕ್ಲಾಸಿಕ್
- Finance
7th Pay Commission: ನೌಕರರಿಗೆ ಸಿಹಿ ಸುದ್ದಿ: ಬಾಕಿ DA ಹಣ ನೀಡಲು ಕೇಂದ್ರ ಸರ್ಕಾರ ನಿರ್ಧಾರ, ಹೇಗೆ?
- News
ಉದ್ಯಾನವನಕ್ಕೆ ಇಟ್ಟಿದ್ದ ಟಿಪ್ಪು ಸುಲ್ತಾನ್ ಹೆಸರು ತೆಗೆದ ಮಹಾರಾಷ್ಟ್ರ
- Sports
KCC Cup 2023: ಯಾವ ತಂಡಕ್ಕೆ ಯಾರು ನಾಯಕ?; ಸುದೀಪ್ ತಂಡದಲ್ಲಿ ಯೂನಿವರ್ಸಲ್ ಬಾಸ್!
- Technology
ವಾಟ್ಸಾಪ್ನ ಈ ಹೊಸ ಫೀಚರ್ಸ್ನಲ್ಲಿ ಏನೆಲ್ಲಾ ಅನುಕೂಲ ಇದೆ ಗೊತ್ತಾ!?
- Lifestyle
ಸಂಗಾತಿ ಸುಮ್-ಸಮ್ಮನೇ ಸಂಶಯ ಪಡುತ್ತಾರಾ? ಅವರ ಸಂಶಯ ಹೋಗಲಾಡಿಸಲು ಏನು ಮಾಡಬೇಕು?
- Education
KVS Recruitment 2022 : ಕೇಂದ್ರೀಯ ವಿದ್ಯಾಲಯ ಸಂಗತನ್ ದಲ್ಲಿ 13404 ಹುದ್ದೆಗಳ ನೇಮಕಾತಿ
- Travel
ಯಾವುದೇ ಚಿಂತೆ ಇಲ್ಲದೆ ಸುಖಕರ ಪ್ರಯಾಣ ಅನುಭವಿಸಲು ಇಲ್ಲಿದೆ ಸಲಹೆಗಳು
ಒಂದು ವೇಳೆ ಎಲ್ಲವೂ ಅಂದುಕೊಂಡಂತೆ ಆದ್ರೆ!
ಕೆಸಿಎನ್ ಕುಮಾರ್ ನಿರ್ಮಿಸುತ್ತಿರುವ ಇನ್ನೂ ಹೆಸರಿಡದ ಈ ಚಿತ್ರದಲ್ಲಿ, ಆರ್ಜಿವಿ ಅವರ ಫೆವರಿಟ್ ನಟರಲ್ಲಿ ಒಬ್ಬರಾಗಿರುವ ಕನ್ನಡ ನಟ ಸುದೀಪ್ ಅವರು ಪ್ರಮುಖ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆದರೆ, ವರ್ಮಾ ಅವರು ಕನ್ನಡ ಚಿತ್ರವನ್ನು ನಿರ್ದೇಶಿಸುವುದು ಬಿಡುವುದು ಸುದೀಪ್ ಅವರ ಮೇಲೆಯೇ ನಿರ್ಭರವಾಗಿದೆ.
ಇನ್ನೂ ಹೆಸರಿಡದ ಚಿತ್ರದ ಚಿತ್ರಕಥೆ, ನಟವರ್ಗ, ಚಿತ್ರೀಕರಣದ ಶೆಡ್ಯೂಲ್, ತಾಂತ್ರಿಕ ವರ್ಗ ಯಾವುದೂ ಫೈನಲೈಸ್ ಆಗಿಲ್ಲ. ವರ್ಮಾ ಅವರು ಕನ್ನಡ ಚಿತ್ರವನ್ನು ನಿರ್ದೇಶಿಸಬೇಕೆಂಬುದು ಸುದೀಪ್ ಅವರು ಬಹುಕಾಲದ ಇಚ್ಛೆ. ಸುದೀಪ್ ಮನಸು ಮಾಡಿದರೆ ವರ್ಮಾ ಅವರನ್ನು ಕನ್ನಡಕ್ಕೆ ಎಳೆದು ತರುವುದು ಅಷ್ಟು ಕಷ್ಟದ ಕೆಲಸವಾಗಲಿಕ್ಕಿಲ್ಲ ಎಂದು ಕೆಸಿಎನ್ ಕುಮಾರ್ ಅವರು ಹೇಳಿದ್ದಾರೆ.
ಒಂದು ಮೂಲದ ಪ್ರಕಾರ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನಾಗಿ ಮಿಂಚುತ್ತಿರುವ ದರ್ಶನ್ ಅವರು ಕೂಡ ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಂಗೊಳ್ಳಿ ರಾಯಣ್ಣ ಚಿತ್ರಕ್ಕೆ ಸುದೀಪ್ ಅವರು ಆರಂಭದಲ್ಲಿ ದನಿ ನೀಡಿದ್ದಾರೆ. ಆದರೆ, ವರ್ಮಾ ಎಂದು ಕನ್ನಡಕ್ಕೆ ಎಂದು ಅಡಿಯಿಡಲಿದ್ದಾರೆ ಎಂಬುದು ಸದ್ಯಕ್ಕೆ ನಿಖರವಾಗಿ ಉತ್ತರಿಸಲಾಗದ ಪ್ರಶ್ನೆಯಾಗಿದೆ.
ಸದ್ಯಕ್ಕೆ ಸುದೀಪ್ ಅವರು ಜನವರಿ ಮೊದಲ ವಾರದಲ್ಲಿ ಬಿಡುಗಡೆಯಾಗಲಿರುವ 'ವರದನಾಯಕ' ಮತ್ತು ಭಾರೀ ನಿರೀಕ್ಷೆ ಇಟ್ಟುಕೊಂಡಿರುವ 'ಬಚ್ಚನ್' ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಭಾರೀ ಬಿಜಿಯಾಗಿದ್ದಾರೆ. ಬಚ್ಚನ್ ಬಿಡುಗಡೆಯಾದ ನಂತರವೇ ರಾಮ್ ಗೋಪಾಲ್ ವರ್ಮಾ ಅವರನ್ನು ಕನ್ನಡಕ್ಕೆ ಕರೆತರುವ ಬಗ್ಗೆ ಸುದೀಪ್ ಅಂತಿಮ ನಿರ್ಣಯ ತೆಗೆದುಕೊಳ್ಳಲಿದ್ದಾರೆ.
ಫೂಂಕ್ ಚಿತ್ರದ ಮುಖಾಂತರ ಸುದೀಪ್ ಅವರನ್ನು ಬಾಲಿವುಡ್ಗೆ ಪರಿಚಯಿಸಿದವರು ರಾಮ್ ಗೋಪಾಲ್ ವರ್ಮಾ. ನಂತರ ವರ್ಮಾ ಅವರೊಡನೆ ರಕ್ತ್ ಚರಿತ್ರ ಮತ್ತು ರಣ್ ಹಿಂದಿ ಚಿತ್ರಗಳಲ್ಲಿ ನಟಿಸಿ ಸುದೀಪ್ ನಟಿಸಿದರು. 'ಈಗ' ಚಿತ್ರ ಸೂಪರ್ ಡೂಪರ್ ಹಿಟ್ ಆದ ಮೇಲೆ ಸುದೀಪ್ ತಾರಾಮೌಲ್ಯ ಹೆಚ್ಚಾಗಿದ್ದು, ಸುದೀಪ್ ಕೇಳಿದರೆ ಕನ್ನಡಕ್ಕೆ ರಾಮ್ ಗೋಪಾಲ್ ವರ್ಮಾ ಬರಲಾರರೆ ಎಂಬ ಮಾತು ಕೇಳಿಬರುತ್ತಿದೆ.