Don't Miss!
- News Mallikarjun Kharge: ಕಲಬುರಗಿ ಲೋಕಸಭಾ ಕ್ಷೇತ್ರ; ಅಳಿಯನ ಕಾಳಗದಲ್ಲಿ ಮಲ್ಲಿಕಾರ್ಜುನ ಖರ್ಗೆ ಪ್ರತಿಷ್ಠೆ
- Sports T20 World Cup 2024: ವೀರೇಂದ್ರ ಸೆಹ್ವಾಗ್ ಆಯ್ಕೆಯ ಭಾರತ ತಂಡದಲ್ಲಿ ಪ್ರಮುಖ ಆಟಗಾರರಿಗೆ ಸ್ಥಾನವಿಲ್ಲ!
- Technology Realme: ರಿಯಲ್ಮಿ ನಾರ್ಜೋ 70 5G, ನಾರ್ಜೋ 70x 5G ಸ್ಮಾರ್ಟ್ಫೋನ್ ಲಾಂಚ್! ಸಖತ್ ಫೀಚರ್ಸ್... ಬೆಲೆ ಎಷ್ಟು?
- Automobiles ಮೇಡ್ ಇನ್ ಇಂಡಿಯಾ ಈ ಕಾರಿಗೆ ಜಪಾನ್ನಲ್ಲಿ ಭಾರೀ ಬೇಡಿಕೆ: ವಿಶ್ವಗುರು ಭಾರತಕ್ಕೆ ಎಲ್ಲವೂ ಸಾಧ್ಯ!
- Lifestyle ವಿಕಲಚೇತನರಿಗೆ ಸ್ಕೂಟಿ ಗಿಫ್ಟ್..! ಮನೆ ಕಟ್ಟಿಕೊಡುವ ಭರವಸೆ ನೀಡಿದ ನಟ ಲಾರೆನ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂ.ರಾ. ಚಿತ್ರೋತ್ಸವ ನಡೆಸಿ, ಮುಖ್ಯಮಂತ್ರಿಗೆ ಮಂಡಳಿ ಮನವಿ
ಬೆಂಗಳೂರು : ಬರದ ಹಿನ್ನೆಲೆಯಲ್ಲಿ ಮುಂದೂಡಲಾಗಿರುವ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ನಿಗದಿತ ವೇಳಾಪಟ್ಟಿಯಂತೆ ಅಕ್ಟೋಬರ್ 10ರಿಂದ 20ರವರೆಗೆ ನಡೆಸುವಂತೆ, ಕರ್ನಾಟಕ ಚಲನಚಿತ್ರವಾಣಿಜ್ಯ ಮಂಡಳಿಯ ನಿಯೋಗ ಮುಖ್ಯಮಂತ್ರಿಗಳನ್ನು ಕೋರಿದೆ.
ರಾಜ್ಯ ಸರಕಾರದ ಮುಂದೂಡಿಕೆ ನಿರ್ಧಾರವನ್ನು ಪುನರ್ ಪರಿಶೀಲಿಸುವಂತೆ ನಿಯೋಗ ಮನವಿ ಮಾಡಿದೆ. ಸೋಮವಾರ ಬೆಳಗ್ಗೆ ಮಂಡಳಿ ಅಧ್ಯಕ್ಷ ಕೆ.ಸಿ.ಎನ್. ಚಂದ್ರಶೇಖರ್ ನೇತೃತ್ವದಲ್ಲಿ ತೆರಳಿದ ನಿಯೋಗವು ಕೃಷ್ಣ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿ, ಚರ್ಚೆ ನಡೆಸಿತು.
ನಿಯೋಗದಲ್ಲಿದ್ದ ಡಾ. ವಿಜಯಾ, ಟಿ.ಎಸ್. ನಾಗಾಭರಣ, ಗಿರೀಶ್ ಕಾಸರವಳ್ಳಿ, ಸಾ.ರಾ. ಗೋವಿಂದು, ಥಾಮಸ್ ಡಿಸೋಜಾ, ಮಾರುತಿ, ಕೆ.ವಿ. ಗುಪ್ತಾ, ಶಿವರಾಂ ಮೊದಲಾದವರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವವನ್ನು ನಿಗದಿತ ವೇಳಾಪಟ್ಟಿಯಂತೆ ಬೆಂಗಳೂರಿನಲ್ಲೇ ನಡೆಸಬೇಕೆಂದು ಒತ್ತಾಯಿಸಿದರು.
ಚಿತ್ರೋತ್ಸವವು ಹೊರಗಿನವರಿಗೆ ಒಂದು ಮನರಂಜನಾ ಉತ್ಸವವಾಗಿ ಕಾಣಬಹುದು. ಆದರೆ, ವಾಸ್ತವವಾಗಿ ಅದು ಚಿತ್ರೋದ್ಯಮಿಗಳಿಗೆ ಒಂದು ಶಿಕ್ಷಣ - ಅಧ್ಯಯನವಾಗಿದೆ. ಈಗಾಗಲೇ ಬಹುತೇಕ ಪೂರ್ವ ಸಿದ್ಧತೆ ಕಾರ್ಯ ಮುಗಿದಿರುವ ಕಾರಣ ಚಿತ್ರೋತ್ಸವ ರದ್ದು ಮಾಡಬೇಡಿ ಎಂದು ಕೋರಿದರು.
ನಿಯೋಗದ ಮನವಿಯನ್ನು ಆಲಿಸಿದ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು, ಪ್ರಸಕ್ತ ಪರಿಸ್ತಿತಿ ಅವಲೋಕಿಸಿ, ಕೇಂದ್ರ ಸರಕಾರದೊಂದಿಗೂ ಸಮಾಲೋಚಿಸಿ, ಅಂತಿಮ ನಿರ್ಧಾರ ಕೈಗೊಳ್ಳುವ ಭರವಸೆಯನ್ನು ನೀಡಿದರು.
(ಇನ್ಫೋ ವಾರ್ತೆ)