Don't Miss!
- News ನೇಹಾ ಹಿರೇಮಠ್ ಹತ್ಯೆ; ಕಾಣದ ಕೈಗಳಿಂದ ಕೊಲೆ ಆರೋಪಿ ರಕ್ಷಣೆ ಎಂದ ಜೆಡಿಎಸ್
- Automobiles ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಬೆಸ್ಟ್ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓ
- Finance Bengaluru Traffic Police: ಬೆಂಗಳೂರಿನ ಈ ರಸ್ತೆ ಸಂಚಾರ ಮಾರ್ಗ ಬದಲಾವಣೆ, ವಿವರ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬರ, ಅಸ್ಥಿರತೆ ಭೀತಿ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಚಿತ್ರೋತ್ಸವ ರದ್ದು
ನವದೆಹಲಿ : ಅಕ್ಟೋಬರ್ 10 ರಿಂದ 20 ರವರೆಗೆ ಬೆಂಗಳೂರಿನಲ್ಲಿ ನಡೆಯಬೇಕಾಗಿದ್ದ 32 ನೇ ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವವನ್ನು ರದ್ದುಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಅಂತರರಾಷ್ಟ್ರೀಯ ಭಯೋತ್ಪಾದಕತೆಯನ್ನು ಹತ್ತಿಕ್ಕುವ ಪ್ರಯತ್ನಗಳ ಹಿನ್ನೆಲೆಯಲ್ಲಿ ಉಂಟಾಗಿರುವ ಅಸ್ಥಿರ ಪರಿಸ್ಥಿತಿಯಲ್ಲಿ ಚಿತ್ರೋತ್ಸವವನ್ನು ರದ್ದು ಮಾಡಲು ಸರ್ಕಾರ ತೀರ್ಮಾನಿಸಿತು. ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವೆ ಸುಷ್ಮಾ ಸ್ವರಾಜ್ ನೇತೃತ್ವದಲ್ಲಿ ನಡೆದ ಹಿರಿಯ ಅಧಿಕಾರಿಗಳ ಸಭೆ ಈ ನಿರ್ಣಯ ಕೈಗೊಂಡಿದೆ ಎಂದು ಬುಧವಾರ ಬಿಡುಗಡೆ ಮಾಡಿರುವ ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ.
ರಾಜ್ಯದಲ್ಲಿ ಬರ ಪರಿಸ್ಥಿತಿ ಮೂಡಿರುವುದರಿಂದ ಚಿತ್ರೋತ್ಸವವನ್ನು ರದ್ದು ಮಾಡುವಂತೆ ಕರ್ನಾಟಕ ಸರ್ಕಾರ ಮಾಡಿದ ಮನವಿಯನ್ನು ಚಿತ್ರೋತ್ಸವ ರದ್ದು ಮಾಡುವ ತೀರ್ಮಾನದಲ್ಲಿ ಪರಿಗಣಿಸಲಾಗಿದೆ. ಚಿತ್ರೋತ್ಸವಕ್ಕೆ ಆಯ್ಕೆಯಾದ ವಿದೇಶೀ ಸಿನಿಮಾಗಳು ಹಾಗೂ ಪನೋರಮಾಕ್ಕೆ ಆಯ್ಕೆಯಾದ ಭಾರತೀಯ ಸಿನಿಮಾಗಳನ್ನು ಸೂಕ್ತ ಸಮಯದಲ್ಲಿ ವಿವಿಧ ಜಾಗೆಗಳಲ್ಲಿ ಪ್ರದರ್ಶಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
ಅಂತರರಾಷ್ಟ್ರೀಯ ಸಿನಿಮಾ ನಿರ್ಮಾಪಕರ ಒಕ್ಕೂಟ(ಎಫ್ಐಎಪಿಎಫ್) ನಿರ್ಧರಿಸಿರುವ ಕ್ಯಾಲೆಂಡರ್ ಪ್ರಕಾರ ಅಂತರರಾಷ್ಟ್ರೀಯ ಚಿತ್ರೋತ್ಸವವನ್ನು ನಡೆಸಲಾಗುತ್ತದೆ. ಆ ಕಾರಣದಿಂದಾಗಿ ಚಿತ್ರೋತ್ಸವನ್ನು ಮುಂದೂಡುವುದು ಸಾಧ್ಯವಿಲ್ಲ ವಾದ್ದರಿಂದ, ರದ್ದುಗೊಳಿಸಬೇಕಾಯಿತು ಎಂದೂ ಪ್ರಕಟಣೆ ಹೇಳಿದೆ.
(ಪಿಟಿಐ)