Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಗೀತ ಬ್ರಹ್ಮ ಇಳಯರಾಜಗೆ ಒಲಿದ 'ಪದ್ಮ ವಿಭೂಷಣ'
ಭಾರತ ಚಿತ್ರರಂಗದ ದಿಗ್ಗಜ ಸಂಗೀತ ನಿರ್ದೇಶಕ ಇಳಯರಾಜ ಅವರಿಗೆ ಕೇಂದ್ರ ಸರ್ಕಾರದಿಂದ ನೀಡುವ ಪದ್ಮವಿಭೂಷಣ ಪ್ರಶಸ್ತಿ ಲಭಿಸಿದೆ. ಪ್ರಸಕ್ತ ಸಾಲಿನ ಪದ್ಮ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಗುರುವಾರ ಸಂಜೆ ಪ್ರಕಟಿಸಲಾಗಿದ್ದು, ಸಂಗೀತ ಮಾಂತ್ರಿಕ ಇಳಯರಾಜ ಕೂಡ ಈ ಬಾರಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.
2010ರಲ್ಲಿ ಇಳಯರಾಜಗೆ ಪದ್ಮಶ್ರಿ ಪ್ರಶಸ್ತಿ ನೀಡಲಾಗಿತ್ತು. ಈಗ ಪದ್ಮ ವಿಭೂಷಣ ದೊರೆತಿರುವುದಕ್ಕೆ ಸಂಗೀತ ಪ್ರೇಮಿಗಳು ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಇಳಯರಾಜ ಅವರು ''ಪದ್ಮವಿಭೂಷಣ ನೀಡುತ್ತಿರುವ ಖುಷಿ ಕೊಟ್ಟಿದೆ. ಇದು ನಮ್ಮ ಜನಕ್ಕೆ ಸಿಗುತ್ತಿರುವ ಗೌರವ ಎಂದು ಪರಿಗಣಿಸುತ್ತೇನೆ'' ಎಂದು ತಿಳಿಸಿದರು.
ಇಳಯರಾಜಗೆ ಪದ್ಮ ವಿಭೂಷಣ, ಸೂಲಗಿತ್ತಿ ನರಸಮ್ಮಗೆ ಪದ್ಮಶ್ರೀ
70ನೇ ದಶಕದಿಂದಲೂ ತಮ್ಮ ಸಂಗೀತ ಮೂಲಕ ಅಭಿಮಾನಿಗಳನ್ನ ರಂಜಿಸುತ್ತಿರುವ ಸಂಗೀತ ಬ್ರಹ್ಮ, ಸುಮಾರು 6500ಕ್ಕೂ ಅಧಿಕ ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. 1000 ಸಾವಿರಕ್ಕೂ ಅಧಿಕ ಚಿತ್ರಗಳಿಗೆ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ. ಎಸ್.ಪಿ ಬಾಲಸುಬ್ರಮಣ್ಯಂ, ಯೇಸುದಾಸ್, ಚಿತ್ರ, ಎಸ್ ಜಾನಕಿ ಅಂತಹ ಗಾಯಕಿಯರು ಇಳಯರಾಜ ಅವರ ಹಾಡುಗಳಿಗೆ ಧ್ವನಿಯಾಗಿದ್ದಾರೆ.
ಇಳಯರಾಜ ಮೂಲತಃ ತಮಿಳಿಗರಾದರು, ಕನ್ನಡದಲ್ಲೂ ಹೆಚ್ಚು ಖ್ಯಾತಿ ಗಳಿಸಿಕೊಂಡಿದ್ದಾರೆ. ಕನ್ನಡದ ಹಲವು ಹಾಡಿಗಳಿಗೆ ಇಳಯರಾಜ ಸಂಗೀತ ನೀಡಿದ್ದಾರೆ. ಈ ಮೂಲಕ ಇಳಯರಾಜ ಅವರನ್ನ ಕನ್ನಡ ಕಲಾಭಿಮಾನಿಗಳು ಆರಾಧಿಸುತ್ತಾರೆ.