Don't Miss!
- Automobiles Bangaluru: ನಮ್ಮ ಯಾತ್ರಿ ಕ್ಯಾಬ್ ಸೇವೆ ಆರಂಭ.. ಎಷ್ಟಿದೆ ದರ?
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- News ಚಾಮರಾಜನಗರ: ಚೊಂಬುಗಳ ಪಾರ್ಟಿ ಕಾಂಗ್ರೆಸ್
- Lifestyle ಮಸಾಲ ಭರಿತ ಬಿಸಿ ಬಿಸಿ ಪೊಂಗಲ್ ಮಾಡೋದು ಹೇಗೆ..? ಏನಿದರ ರೆಸಿಪಿ?
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಉಪ್ಪು ಹುಳಿ ಖಾರ' ತಿನ್ನೋಕೆ ರೆಡಿಯಾದ ಇಮ್ರಾನ್ ಸರ್ದಾರಿಯಾ
ನೃತ್ಯ ನಿರ್ದೇಶಕನಿಂದ ಸಿನಿಮಾ ನಿರ್ದೇಶಕರಾಗಿ ಭಡ್ತಿ ಪಡೆದುಕೊಂಡಿರುವ ನೃತ್ಯ ನಿರ್ದೇಶಕ ಇಮ್ರಾನ್ ಸರ್ದಾರಿಯಾ ಅವರು 'ಎಂದೆಂದಿಗೂ' ಚಿತ್ರ ನಿರ್ದೇಶನ ಮಾಡಿದ ನಂತರ ಇದೀಗ ಎರಡನೇ ಚಿತ್ರಕ್ಕೆ ಸಜ್ಜಾಗುತ್ತಿದ್ದಾರೆ.
ಹೌದು ಈ ಬಾರಿ 'ಉಪ್ಪು ಹುಳಿ ಖಾರ' ಎಂಬ ವಿಭಿನ್ನ ಸಿನಿಮಾ ಮಾಡಲು ಹೊರಟಿರುವ ನೃತ್ಯ ನಿರ್ದೇಶಕ ಇಮ್ರಾನ್ ಸರ್ದಾರಿಯಾ ಅವರು 'ಭಾನುವಾರ' (ಏಪ್ರಿಲ್ 17) ದಂದು ಚಿತ್ರಕ್ಕೆ ಮುಹೂರ್ತ ನೆರವೇರಿಸಿದ್ದಾರೆ.[ದಲೇರ್ ಮಹಿಂದಿ ನಿರ್ಮಾಣದಲ್ಲಿ ಕನ್ನಡ ಚಿತ್ರ 'ಪವರ್ ಆಫ್ ಡ್ಯಾನ್ಸ್']
ನಿರ್ಮಾಪಕ ಎಂ.ರಮೇಶ್ ರೆಡ್ಡಿ ಅವರು ಬಂಡವಾಳ ಹೂಡುತ್ತಿರುವ ಚಿತ್ರಕ್ಕೆ ಲೇಖಕಿ ಸುಧಾ ಮೂರ್ತಿ ಅವರು ಕ್ಲ್ಯಾಪ್ ಮಾಡಿದ್ದು, ಇಡೀ ಚಿತ್ರತಂಡ ಬೆಂಗಳೂರಿನ ಬನಶಂಕರಿ ದೇವಸ್ಥಾನದಲ್ಲಿ ಬೀಡು ಬಿಟ್ಟಿತ್ತು.
ಅಂದಹಾಗೆ ಈ ಚಿತ್ರದಲ್ಲಿ ಮಾಲಾಶ್ರೀ, ಅನುಶ್ರೀ ಮತ್ತು ಬಿಗ್ ಬಾಸ್ ಖ್ಯಾತಿಯ ಜಯಶ್ರೀ ಅಂತ ಮೂರು 'ಶ್ರೀಗಳು' ಇರೋದು ವಿಶೇಷ. ಅಂತ ಖುಷಿ ವ್ಯಕ್ತಪಡಿಸುತ್ತಾರೆ ನಿರ್ದೇಶಕ ಇಮ್ರಾನ್ ಸರ್ದಾರಿಯಾ ಅವರು.['ಲೇಡಿ ಟೈಗರ್' ಮಾಲಾಶ್ರೀ ಅವರ ಮುಂದಿನ ಪ್ರಾಜೆಕ್ಟ್ ಯಾವುದು?]
ನಟಿ ಮಾಲಾಶ್ರೀ ಅವರು 'ಗಂಗಾ' ಚಿತ್ರದ ಬಳಿಕ ಮತ್ತೆ ಕಮ್ ಬ್ಯಾಕ್ ಆದರೆ, ಬಿಗ್ ಬಾಸ್ ಖ್ಯಾತಿಯ ಡ್ಯಾನ್ಸರ್ ಜಯಶ್ರೀ ರಾಮಯ್ಯ ಅವರಿಗೆ ಇದು ಚೊಚ್ಚಲ ಸಿನಿಮಾ. 'ರಿಂಗ್ ಮಾಸ್ಟರ್' ನಂತರ ಮತ್ತೆ ನಟಿ ಕಮ್ ನಿರೂಪಕಿ ಅನುಶ್ರೀ ಅವರು ಫೀಲ್ಡ್ ಗೆ ಇಳಿದಿದ್ದಾರೆ.
ನಟ ಅಜೇಯ್ ರಾವ್ ಮತ್ತು ರಾಧಿಕಾ ಪಂಡಿತ್ ಕಾಣಿಸಿಕೊಂಡಿದ್ದ 'ಎಂದೆಂದಿಗೂ' [ಚಿತ್ರ ವಿಮರ್ಶೆ: 'ಎಂದೆಂದಿಗೂ' ಸಾಕೆನ್ನಿಸುವ ಚಿತ್ರ] ಚಿತ್ರದಲ್ಲಿ ಹಾಸ್ಯ-ಹಾರರ್ ಮಿಶ್ರಿತ ಕಥೆಯಲ್ಲಿ ಮನರಂಜನೆ ನೀಡಿದ್ದರು. ಇದೀಗ 'ಉಪ್ಪು ಹುಳಿ ಖಾರ' ಚಿತ್ರದಲ್ಲಿ ಸಂಪೂರ್ಣ ಕಾಮಿಡಿ ಮೂಲಕ ಪ್ರೇಕ್ಷಕರನ್ನು ಮನರಂಜಿಸಲಿದ್ದಾರಂತೆ.
'ಉಪ್ಪು ಹುಳಿ ಖಾರ' ಚಿತ್ರದ ಮುಹೂರ್ತದ ಫೋಟೋ ಗ್ಯಾಲರಿ ನೋಡಿ ಕೆಳಗಿನ ಸ್ಲೈಡುಗಳಲ್ಲಿ..