Don't Miss!
- News Kotak Mahindra Bank: ಕೋಟಕ್ ಮಹಿಂದ್ರಾ ಬ್ಯಾಂಕ್ ಮೇಲೆ ಆರ್ಬಿಐ ನಿರ್ಬಂಧ: ಗ್ರಾಹಕರ ಮೇಲೆ ಪರಿಣಾಮಗಳೇನು?
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಆಟೋ ರಾಜ' ಶಂಕರ್ ನೆನಪಲ್ಲಿ ಹುಟ್ಟುಹಬ್ಬದ ಸಂಭ್ರಮ
ನವೆಂಬರ್ 9...ಈ ದಿನ ಪ್ರತಿಭಾವಂತ ಮೇರುನಟ ಶಂಕರ್ ನಾಗ್ ರನ್ನ ನೆನೆಯದ ಕನ್ನಡಿಗರೇ ಇಲ್ಲ..! ಆಟೋ ಚಾಲಕರಿಗಂತೂ ಈ ದಿನ ಸುದಿನ.
1954 ನವೆಂಬರ್ 9, ಶಂಕರ್ ನಾಗ್ ಅನ್ನೋ ಅತ್ಯದ್ಭುತ ಕಲಾವಿದ ಕಣ್ಬಿಟ್ಟ ದಿನ. ಉತ್ತರಕನ್ನಡದ ಹೊನ್ನಾವರ ತಾಲೂಕಿನ ಮಲ್ಲಾಪುರ ಅನ್ನೋ ಪುಟ್ಟ ಗ್ರಾಮದ ಕೊಡುಗೆ ಈ ನಾಗರಕಟ್ಟೆ ಶಂಕರ. [ರಾತ್ರೋರಾತ್ರಿ ಶಂಕರ್ ನೆನೆದು ಗದ್ಗದಿತರಾಗಿದ್ದ ಅನಂತ್ ನಾಗ್.!]
'ಆಟೋ ರಾಜ', 'ಸಿಬಿಐ ಶಂಕರ್', 'ಎಸ್.ಪಿ.ಸಾಂಗ್ಲಿಯಾನ', 'ಸೀತಾರಾಮು' ಸೇರಿದಂತೆ ಅನೇಕ ಸೂಪರ್ ಡ್ಯೂಪರ್ ಹಿಟ್ ಗಳನ್ನು ಕೊಟ್ಟ 'ಕರಾಟೆ ಕಿಂಗ್' ಶಂಕರ್ ನಾಗ್ ರವರ 63ನೇ ಹುಟ್ಟುಹಬ್ಬವನ್ನು ಇಂದು ಶಂಕರಣ್ಣನ ಆಟೋ ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸಿದರು.
ಶಂಕರ್ ನಾಗ್ ಹುಟ್ಟುಹಬ್ಬದ ಪ್ರಯುಕ್ತ ಇಂದು ಬೆಂಗಳೂರಿನ 'ಶಂಕರ್ ನಾಗ್ ವೃತ್ತ'ದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು. ಶಂಕರ್ ನಾಗ್ ರವರ ಪುತ್ಥಳಿಗೆ ಹೂವಿನ ಹಾರ ಹಾಕಿ, ಸಿಹಿ ಹಂಚುವ ಮೂಲಕ ಇಂದು 'ಕರಾಟೆ ಕಿಂಗ್' ಜನ್ಮದಿನವನ್ನು ಅಭಿಮಾನಿಗಳು ಆಚರಿಸಿದರು.
ರಂಗಭೂಮಿ, ಸಿನಿಮಾ ಸೇರಿದಂತೆ ಏಕಕಾಲದಲ್ಲಿ ಹತ್ತು ಹಲವು ಕ್ಷೇತ್ರಗಳಲ್ಲಿ, ಪ್ರಯೋಗಶೀಲ ಕೆಲಸಗಳಲ್ಲಿ ತೊಡಗಿಕೊಂಡಿದ್ದ ಶಂಕರ್ ನಾಗ್, ಬಹುಬೇಗನೇ ತಮ್ಮ ಮಿಂಚಿನ ಓಟ ಮುಗಿಸಿ ಮರೆಯಾಗಿಬಿಟ್ಟರು.
ಶಂಕರ್ ನಾಗ್, ನಮ್ಮನ್ನೆಲ್ಲಾ ಅಗಲಿ 26 ವರ್ಷಗಳು ಕಳೆದರೂ, ಕೋಟ್ಯಾಂತರ ಕನ್ನಡಿಗರ ಹೃದಯದಲ್ಲಿ ಅವರು ಈಗಲೂ ಜೀವಂತ. ಅದಕ್ಕೆ ಇಂದು ನಡೆದ ಜನ್ಮದಿನದ ಆಚರಣೆಯೇ ಸಾಕ್ಷಿ.