Don't Miss!
- Sports SRH vs MI IPL Match: ಹೈಲೈಟ್ಸ್ ನಂತೆ ಕಂಡ ಲೈವ್ ಮ್ಯಾಚ್: ಮುತ್ತಿನ ನಗರಿಯಲ್ಲಿ ಆರ್ಭಟಿಸಿ ಇತಿಹಾಸದ ಪುಟ ಸೇರಿದ SRH
- Lifestyle ಬೆಂಗಳೂರಿಗರೇ... ನೀರಿನ ಕೊರತೆ ತಪ್ಪಿಸಲು ಈ ಟ್ರಿಕ್ಸ್ ಹಾಗೂ ಟಿಪ್ಸ್ ತುಂಬಾನೇ ಪ್ರಯೋಜನಕಾರಿಯಾಗಿದೆ ನೋಡಿ
- News Chitradurga Lok Sabha Constituency: ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ರಾಜಕೀಯ ಹಿನ್ನೆಲೆ ತಿಳಿಯಿರಿ-ಮಾಹಿತಿ, ವಿವರ
- Finance ಐಟಿಆರ್ ಸಲ್ಲಿಸಿದ್ದರೂ, ಆದಾಯ ತೆರಿಗೆ ಇಲಾಖೆಯಿಂದ ನಿಮಗೆ ಇಮೇಲ್ ಬಂದಿದೆಯೇ?
- Automobiles ಜಿಮ್ನಿಗೆ ಸೆಡ್ಡು ಹೊಡೆಯಲು ಎಂಜಿ ಮಾಸ್ಟರ್ ಪ್ಲಾನ್: ಸದ್ಯದಲ್ಲೇ ಕಾಮೆಟ್ ಆಧರಿಸಿ 5 ಡೋರ್ ಕಾರು ಭಾರತಕ್ಕೆ?
- Technology ರೆಡ್ಮಿಯ ಈ ಮೊಬೈಲ್ಗೆ ಇರುವ ಬಿಗ್ ಆಫರ್ ತಿಳಿದ್ರೆ, ಖಂಡಿತಾ ವಾವ್ ಅಂತೀರಾ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರ್ನಾಟಕ ಬಂದ್: ಎಲ್ಲಾ ಚಿತ್ರಮಂದಿರಗಳಿಗೂ ಬಿದ್ದ ಬೀಗ.!
ಕೆ.ಜಿ ರೋಡ್ ನ ಪ್ರಮುಖ ಚಿತ್ರಮಂದಿರಗಳಲ್ಲಿ ಒಳ್ಳೆಯ ಕಲೆಕ್ಷನ್ ಮಾಡುತ್ತಿದ್ದ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ 'ಕಲ್ಪನಾ-2', ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟನೆಯ 'ಸಂತೆಯಲ್ಲಿ ನಿಂತ ಕಬೀರ', 'ಗೋಧಿ ಬಣ್ಣ ಸಾಧಾರಣ ಮೈಕಟ್ಟು', 'ಡೀಲ್ ರಾಜಾ' ಸೇರಿದಂತೆ ಅನೇಕ ಸಿನಿಮಾಗಳು ಇಂದು ಖಾಲಿ ಹೊಡೆಯುತ್ತಿವೆ.
ಕಾರಣ, ಇವತ್ತಿನ ಕರ್ನಾಟಕ ಬಂದ್ ಗೆ ಸ್ಯಾಂಡಲ್ ವುಡ್ ನೀಡಿರುವ ಸಂಪೂರ್ಣ ಬೆಂಬಲ.! [ಕರ್ನಾಟಕ ಬಂದ್: ಶಿವಣ್ಣ ಸಾರಥ್ಯದಲ್ಲಿ ಬೃಹತ್ ಪ್ರತಿಭಟನೆ]
ಮಹದಾಯಿ ನ್ಯಾಯಾಧೀಕರಣದ ಮಧ್ಯಂತರ ತೀರ್ಪು ವಿರೋಧಿಸಿ ವಿವಿಧ ಕನ್ನಡ ಪರ ಸಂಘಟನೆಗಳು ಇಂದು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಬೆಂಗಳೂರಿನಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಮುಂದೆ ಓದಿ.....
ಎಲ್ಲಾ ಚಿತ್ರಮಂದಿರಗಳಿಗೆ ಬೀಗ.!
ಕರ್ನಾಟಕ ಬಂದ್ ಪರಿಣಾಮ ಬೆಂಗಳೂರಿನ ಎಲ್ಲಾ ಚಿತ್ರಮಂದಿರಗಳಿಗೆ ಬೀಗ ಜಡಿಯಲಾಗಿದೆ. ಚಿತ್ರ ಪ್ರದರ್ಶನ ಸ್ಥಗಿತಗೊಂಡಿದೆ. ['ನೋಡಿ ಮುಸಿಮುಸಿನಗಲು ನಾವೇನು ಜೋಕರ್ ಗಳಲ್ಲ']
ಬಿಕೋ ಎನ್ನುತ್ತಿರುವ ಥಿಯೇಟರ್ ಗಳು
ಕೆ.ಜಿ.ರೋಡ್ ನ ಪ್ರಮುಖ ಚಿತ್ರಮಂದಿರಗಳಾದ ಸಂತೋಷ್, ನರ್ತಕಿ ಬಿಕೋ ಎನ್ನುತ್ತಿದೆ.
ಪ್ರತಿಭಟನೆಯ ಕೇಂದ್ರವಾಗಿದೆ ಮೆಜೆಸ್ಟಿಕ್
ಸದಾ ವಾಹನ ಸಂಚಾರ ಹಾಗೂ ಚಲನಚಿತ್ರಗಳ ಅಬ್ಬರದಿಂದ ಗಿಜಿಗುಡುತ್ತಿದ್ದ ಬೆಂಗಳೂರಿನ ಮೆಜೆಸ್ಟಿಕ್ ಇಂದು ಪ್ರತಿಭಟನೆಯ ಕೇಂದ್ರವಾಗಿದೆ.
ಸ್ಯಾಂಡಲ್ ವುಡ್ ನಟರ ಮೆರವಣಿಗೆ ಆರಂಭ
ಟೌನ್ ಹಾಲ್ ನಿಂದ ಮೈಸೂರು ಬ್ಯಾಂಕ್ ಮಾರ್ಗವಾಗಿ ಸೆಂಚುರಿ ಕಿಂಗ್ ಶಿವರಾಜ್ ಕುಮಾರ್ ನೇತೃತ್ವದಲ್ಲಿ ಕನ್ನಡ ಚಿತ್ರರಂಗದ ಸ್ಟಾರ್ ನಟರ ಬೃಹತ್ ಪ್ರತಿಭಟನಾ ಮೆರವಣಿಗೆ ಪ್ರಾರಂಭವಾಗಿದೆ.