Don't Miss!
- News ಹಾಸನದ ಬೀದಿಗಳಲ್ಲಿ ಚೆಲ್ಲಾಡುತ್ತಿರುವ ಪೆನ್ಡ್ರೈವ್ ಬಗ್ಗೆ ಹೇಳಿ? ಹೆಚ್ಡಿ ಕುಮಾರಸ್ವಾಮಿಗೆ ಕಾಂಗ್ರೆಸ್ ಪ್ರಶ್ನೆ
- Sports IPL 2024: ಹೈದರಾಬಾದ್ ಅಂಗಳದಲ್ಲಿ ಗೆಲ್ಲುವುದೆ ಆರ್ಸಿಬಿ: ಟಾಸ್ ವರದಿ ಹೀಗಿದೆ
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸೆಟ್ಟೇರಿದೆ ಹಾಸ್ಯದ ಜೊತೆಗೆ ಫಿಲಾಸಫಿ ಹೇಳುವ 'ಆದಿ ಪುರಾಣ'
ಕಳೆದ ಹನ್ನೆರಡು ವರ್ಷಗಳಿಂದ ಸಂಕಲನಕಾರರಾಗಿದ್ದ ಮೋಹನ್ ಕಾಮಾಕ್ಷಿ 'ಆದಿ ಪುರಾಣ' ಚಿತ್ರದಿಂದ ನಿರ್ದೇಶಕರಾಗುತ್ತಿದ್ದಾರೆ. ಈ ಹಿಂದೆ 'ಮೆಲೋಡಿ' ಮತ್ತು 'ಪ್ರೀತಿ ಕಿತಾಬು' ಚಿತ್ರ ನಿರ್ಮಿಸಿದ್ದ ಶಮಂತ್.ಕೆ.ರಾವ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.
ಕ್ರೇಜಿ ಸ್ಟಾರ್ ರವಿಚಂದ್ರನ್ ರವರ ಸಹೋದರ ಬಾಲಾಜಿ ಕ್ಲಾಪ್ ಮಾಡುವ ಮೂಲಕ 'ಆದಿ ಪುರಾಣ' ಚಿತ್ರಕ್ಕೆ ಕಳೆದ ಶುಕ್ರವಾರ (23 ಜೂನ್) ಅಧಿಕೃತ ಚಾಲನೆ ದೊರೆಯಿತು. ರಾಷ್ಟ್ರ ಪ್ರಶಸ್ತಿ ವಿಜೇತ ಛಾಯಾಗ್ರಹಕರಾದ ಎಚ್.ಎಂ.ರಾಮಚಂದ್ರ ಚಿತ್ರಕ್ಕೆ ಕ್ಯಾಮರಾ ಚಾಲನೆ ಮಾಡಿದರು.
'ಅದಿ ಪುರಾಣ' ರೋಮ್ಯಾಂಟಿಕ್ ಕಾಮಿಡಿ ಚಿತ್ರವಾಗಿದ್ದು, ಪ್ರೇಕ್ಷಕರಿಗೆ ಕಚಗುಳಿ ಇಡುವ ಸಂಭಾಷಣೆ ಮತ್ತು ಹೊಸತನದ ನಿರೂಪಣೆ ಇರಲಿದೆ.
ಎಲ್ಲ ಹೊಸ ಪ್ರತಿಭೆಗಳನ್ನು ಒಟ್ಟುಗೂಡಿಸಿ ಹೊಸ ತಂಡ ಕಟ್ಟಿದ್ದಾರೆ ನಿರ್ದೇಶಕ ಮೋಹನ್ ಕಾಮಾಕ್ಷಿ. ಚಿತ್ರಕ್ಕೆ ಶಶಾಂಕ್ ನಾಯಕರಾಗಿದ್ದು, ಅಹಲ್ಯ ಸುರೇಶ್ ಮತ್ತು ಮೋಕ್ಷ ಕುಶಾಲ್ ನಾಯಕಿಯರಾಗಿ ಅಭಿನಯಿಸುತ್ತಿದ್ದಾರೆ.
ರಂಗಾಯಣ ರಘು, ನಾಗೇಂದ್ರ ಶಾ, ಕರಿಸುಬ್ಬು, ವತ್ಸಲಾ ಮೋಹನ್ ಮತ್ತಿತರ ರಂಗಭೂಮಿ ಕಲಾವಿದರು ಚಿತ್ರದ ತಾರಾಗಣದಲ್ಲಿ ಇದ್ದಾರೆ.
ರಂಗಭೂಮಿ ಹಿನ್ನಲೆ ಇರುವ ವಿಕ್ರಮ್ ವಸಿಷ್ಟ, ಚಂದನ ಹಾಗೂ ಖ್ಯಾತ ಸಿತಾರ್ ವಾದಕಿ ಶೃತಿ ಕಾಮತ್ ರವರ ಪುತ್ರ ಸಿದ್ದಾರ್ಥ್ ಕಾಮತ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ.
ಹಲವಾರು ಹಿರಿಯ ಛಾಯಾಗ್ರಾಹಕರಿಗೆ ಸಹಾಯಕರಾಗಿ ಕೆಲಸ ಮಾಡಿರುವ ಗುರುಪ್ರಸಾದ್ ಈ ಚಿತ್ರದ ಮೂಲಕ ಸ್ವತಂತ್ರ ಛಾಯಾಗ್ರಾಹಕರಾಗುತ್ತಿದ್ದಾರೆ. ಮೋಹನ್ ಕಾಮಾಕ್ಷಿ ಮತ್ತು ಮಹೇಂದ್ರ ರಾವ್ ಚಿತ್ರಕ್ಕೆ ಹಾಸ್ಯಭರಿತ ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದಾರೆ.
'ಆದಿ ಪುರಾಣ' ಚಿತ್ರ ಹಾಸ್ಯದ ಜೊತೆಗೆ ಫಿಲಾಸಫಿಯನ್ನೂ ಒಳಗೊಂಡಿದೆ. ಜುಲೈ 3 ರಿಂದ ಚಿತ್ರೀಕರಣ ಆರಂಭವಾಗಲಿದ್ದು, ಬಹುತೇಕ ಚಿತ್ರೀಕರಣ ಬೆಂಗಳೂರಿನಲ್ಲಿಯೇ ನಡೆಯಲಿದೆ. ಒಂದು ಹಾಡನ್ನು ಕೆ.ಆರ್.ಎಸ್ ಬ್ಯಾಕ್ ವಾಟರ್ ನಲ್ಲಿ ಇರುವ ದೇವಸ್ಥಾನದಲ್ಲಿ ಚಿತ್ರೀಕರಿಸುವ ಯೋಚನೆಯಲ್ಲಿದೆ ಚಿತ್ರತಂಡ.