Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿಷ್ಣು ಸ್ಮಾರಕ ಸ್ಥಳಾಂತರ ಗುಲ್ಲು; ಅಭಿಮಾನಿಗಳ ಬೃಹತ್ ಪ್ರತಿಭಟನೆ
'ಸಾಹಸಸಿಂಹ' ಡಾ.ವಿಷ್ಣುವರ್ಧನ್ ಕಣ್ಮರೆಯಾಗಿ ಆರೂವರೆ ವರ್ಷಗಳಾದರೂ, ಅವರ ಸ್ಮಾರಕದ ಸುತ್ತ ಎದ್ದಿರುವ ವಿವಾದ ಇನ್ನೂ ಬಗೆಹರಿದಿಲ್ಲ.
ಈ ಮಧ್ಯೆ ಡಾ.ವಿಷ್ಣು ಸ್ಮಾರಕ ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಿಂದ ಮೈಸೂರಿಗೆ ಶಿಫ್ಟ್ ಆಗಲಿದೆ ಎಂಬ ಗುಲ್ಲು ಹೇಗೆ ಹಬ್ಬಿತೋ ಗೊತ್ತಿಲ್ಲ, ಸ್ಮಾರಕ ಸ್ಥಳಾಂತರ ವಿರೋಧಿಸಿ ವಿಷ್ಣು ಸೇನಾ ಸಮಿತಿ ಕಳೆದ ಶನಿವಾರ ಬೃಹತ್ ಪ್ರತಿಭಟನೆ ಕೈಗೊಂಡಿತು.
ವಿಷ್ಣು ಸೇನಾ ಸಮಿತಿ ಜೊತೆಗೆ ಸಾವಿರಾರು ಅಭಿಮಾನಿಗಳು ಹಾಗೂ ಕಾರ್ಯಕರ್ತರು ಶನಿವಾರ ಸಂಜೆ 4 ಗಂಟೆಗೆ ಬೆಂಗಳೂರಿನ ಟೌನ್ ಹಾಲ್ ಬಳಿ ಸರ್ಕಾರದ ವಿರುದ್ಧ ಘೋಷವಾಕ್ಯ ಕೂಗಿದರು. [ವಿಷ್ಣುವರ್ಧನ್ ಸ್ಮಾರಕದ ಕಥೆ ಹೇಳುವೆ, ನಿನ್ನ ಕಥೆ ಹೇಳುವೆ!]
ಯಾವುದೇ ಕಾರಣಕ್ಕೂ, ಸ್ಮಾರಕ ಸ್ಥಳಾಂತರಕ್ಕೆ ಭಾರತಿ ವಿಷ್ಣುವರ್ಧನ್ ಒಪ್ಪಬಾರದು ಅಂತ ವಿಷ್ಣು ಅಭಿಮಾನಿಗಳು ಒತ್ತಾಯಿಸಿದರು. ಅಪ್ಪಿ-ತಪ್ಪಿ ಶಿಫ್ಟ್ ಆದರೆ, ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.
ಪ್ರತಿಭಟನೆ ಬಳಿಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿ ಆದ ಪ್ರತಿಭಟನಾಕಾರರು, ವಿಷ್ಣು ಸ್ಮಾರಕ ಸ್ಥಳಾಂತರ ಮಾಡದಂತೆ ಮನವಿ ಮಾಡಿದರು. [ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವಿಷ್ಣು ಅಭಿಮಾನಿಗಳ ಪತ್ರ]
''ಮೊದಲು ಭಾರತಿ ವಿಷ್ಣುವರ್ಧನ್ ರವರನ್ನು ಒಪ್ಪಿಸಿ, ಅವರು ಒಪ್ಪಿದರೆ ಬೆಂಗಳೂರಿನಲ್ಲೇ ಸ್ಮಾರಕ ನಿರ್ಮಾಣವಾಗಲಿದೆ'' ಎಂಬ ಭರವಸೆ ನೀಡಿದ್ದಾರಂತೆ ಸಿ.ಎಂ. ಸಿದ್ಧರಾಮಯ್ಯ.