ವಿಷ್ಣು ಸ್ಮಾರಕ ಸ್ಥಳಾಂತರ ಗುಲ್ಲು; ಅಭಿಮಾನಿಗಳ ಬೃಹತ್ ಪ್ರತಿಭಟನೆ

By Harshitha

'ಸಾಹಸಸಿಂಹ' ಡಾ.ವಿಷ್ಣುವರ್ಧನ್ ಕಣ್ಮರೆಯಾಗಿ ಆರೂವರೆ ವರ್ಷಗಳಾದರೂ, ಅವರ ಸ್ಮಾರಕದ ಸುತ್ತ ಎದ್ದಿರುವ ವಿವಾದ ಇನ್ನೂ ಬಗೆಹರಿದಿಲ್ಲ.

ಈ ಮಧ್ಯೆ ಡಾ.ವಿಷ್ಣು ಸ್ಮಾರಕ ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಿಂದ ಮೈಸೂರಿಗೆ ಶಿಫ್ಟ್ ಆಗಲಿದೆ ಎಂಬ ಗುಲ್ಲು ಹೇಗೆ ಹಬ್ಬಿತೋ ಗೊತ್ತಿಲ್ಲ, ಸ್ಮಾರಕ ಸ್ಥಳಾಂತರ ವಿರೋಧಿಸಿ ವಿಷ್ಣು ಸೇನಾ ಸಮಿತಿ ಕಳೆದ ಶನಿವಾರ ಬೃಹತ್ ಪ್ರತಿಭಟನೆ ಕೈಗೊಂಡಿತು.

in-pics-vishnu-fans-protest-against-dr-vishnuvardhan-memorial-shift

ವಿಷ್ಣು ಸೇನಾ ಸಮಿತಿ ಜೊತೆಗೆ ಸಾವಿರಾರು ಅಭಿಮಾನಿಗಳು ಹಾಗೂ ಕಾರ್ಯಕರ್ತರು ಶನಿವಾರ ಸಂಜೆ 4 ಗಂಟೆಗೆ ಬೆಂಗಳೂರಿನ ಟೌನ್ ಹಾಲ್ ಬಳಿ ಸರ್ಕಾರದ ವಿರುದ್ಧ ಘೋಷವಾಕ್ಯ ಕೂಗಿದರು. [ವಿಷ್ಣುವರ್ಧನ್ ಸ್ಮಾರಕದ ಕಥೆ ಹೇಳುವೆ, ನಿನ್ನ ಕಥೆ ಹೇಳುವೆ!]

ಯಾವುದೇ ಕಾರಣಕ್ಕೂ, ಸ್ಮಾರಕ ಸ್ಥಳಾಂತರಕ್ಕೆ ಭಾರತಿ ವಿಷ್ಣುವರ್ಧನ್ ಒಪ್ಪಬಾರದು ಅಂತ ವಿಷ್ಣು ಅಭಿಮಾನಿಗಳು ಒತ್ತಾಯಿಸಿದರು. ಅಪ್ಪಿ-ತಪ್ಪಿ ಶಿಫ್ಟ್ ಆದರೆ, ಉಪವಾಸ ಸತ್ಯಾಗ್ರಹ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

ಪ್ರತಿಭಟನೆ ಬಳಿಕ ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿ ಆದ ಪ್ರತಿಭಟನಾಕಾರರು, ವಿಷ್ಣು ಸ್ಮಾರಕ ಸ್ಥಳಾಂತರ ಮಾಡದಂತೆ ಮನವಿ ಮಾಡಿದರು. [ಮುಖ್ಯಮಂತ್ರಿ ಸಿದ್ದರಾಮಯ್ಯಗೆ ವಿಷ್ಣು ಅಭಿಮಾನಿಗಳ ಪತ್ರ]

''ಮೊದಲು ಭಾರತಿ ವಿಷ್ಣುವರ್ಧನ್ ರವರನ್ನು ಒಪ್ಪಿಸಿ, ಅವರು ಒಪ್ಪಿದರೆ ಬೆಂಗಳೂರಿನಲ್ಲೇ ಸ್ಮಾರಕ ನಿರ್ಮಾಣವಾಗಲಿದೆ'' ಎಂಬ ಭರವಸೆ ನೀಡಿದ್ದಾರಂತೆ ಸಿ.ಎಂ. ಸಿದ್ಧರಾಮಯ್ಯ.

-

-

-

-

-

-

More from Filmibeat

English summary
Vishnu Sena Samithi along with hundreds of fans protested in front of Town Hall, Bengaluru against the shift of Dr.Vishnuvardhan memorial from Abhiman Studio, Bengaluru to Mysore (Mysuru).
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+
X