Don't Miss!
- News Rain Alert: ಕೊಡಗಿನ ವಿವಿಧಡೆ ಮಳೆ ಅಬ್ಬರ: ಮೋಡ ಕವಿದ ವಾತಾವರಣ
- Automobiles Brezza: ಮಾರುತಿ ಸುಜುಕಿ ಬ್ರೆಝಾ ಖರೀದಿಸಬೇಕೇ.. ಆನ್ ರೋಡ್ ಬೆಲೆ ಎಷ್ಟು? EMI ಏನು?
- Sports IPL 2024: RCB ವಿರುದ್ಧ ಪಂದ್ಯಕ್ಕೆ KKRನ ಆಡುವ 11ರ ಬಳಗ ಮರೆತ ಶ್ರೇಯಸ್ ಅಯ್ಯರ್
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸತತ 24 ಗಂಟೆಗಳಿಂದ ಮುಂದುವರೆದ ಐಟಿ ಶೋಧ ಕಾರ್ಯ
ಕನ್ನಡದ ನಟ, ನಿರ್ಮಾಪಕರ ಮನೆ ಮೇಲೆ ನಿನ್ನೆ ಶುರುವಾದ ಐಟಿ ಅಧಿಕಾರಿಗಳು ಶೋಧ ಇಂದೂ ಸಹ ಮುಂದುವರೆದಿದೆ. ನಟ ಶಿವರಾಜ್ ಕುಮಾರ್, ಪುನೀತ್ ಕುಮಾರ್, ಸುದೀಪ್, ಯಶ್, ನಿರ್ಮಾಪಕರಾದ ಜಯಣ್ಣ, ವಿಜಯ್ ಕಿರಗಂದೂರು, ಸಿ ಆರ್ ಮನೋಹರ್, ರಾಕ್ ಲೈನ್ ವೆಂಕಟೇಶ್ ಅವರ ಮನೆಯಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ನಿನ್ನೆ ಬೆಳಗ್ಗೆ 6.30 ರಿಂದ ರಾತ್ರಿ 11.30 ವರೆಗೆ ನಡೆದ ಐಟಿ ಅಧಿಕಾರಿಗಳ ಕೆಲಸ ಈ ದಿನವೂ ಮುಂದುವರೆದಿದೆ. ಅಲ್ಲದೆ, ನಾಳೆಯವರೆಗೆ ಸಹ ಐ ಟಿ ಅಧಿಕಾರಿಗಳ ಶೋಧ ನಡೆಯಲಿದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರಿಗೆ ಬಂದ ಯಶ್, ಐಟಿ ರೈಡ್ ಬಗ್ಗೆ ಹೇಳಿದ್ದೇನು?
ದಾಳಿಯ ವೇಳೆ ಕಡತಗಳು, ಮನೆಯಲ್ಲಿರುವ ಬೆಲೆಬಾಳುವ ವಸ್ತುಗಳನ್ನು ಪರಿಶೀಲನೆಯನ್ನು ಮಾಡಲಾಗುತ್ತಿದೆ. ಮನೆಯ ಸದಸ್ಯರನ್ನು ಪ್ರಶ್ನೆ ಮಾಡಿ ಮಾಹಿತಿಯನ್ನು ಪಡೆಯಲಾಗುತ್ತಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಮಾಡಿದ್ದು ತಿಳಿದರೆ ನೋಟಿಸ್ ನೀಡಲಾಗುತ್ತದೆ. ಇದಕ್ಕೆ ಅವರು ಉತ್ತರ ನೀಡಬೆಕಾಗುತ್ತದೆ.
ಐಟಿ ಅಧಿಕಾರಿಗಳು ಇವರನ್ನೇ ಟಾರ್ಗೆಟ್ ಮಾಡಲು ಕಾರಣ ಇದಿರಬಹುದೇ?
ನಟ, ನಿರ್ಮಾಪಕರು ಹಾಗೂ ಮನೆಯವರ ಹೆಸರಿನಲ್ಲಿ ಇರುವ ಆಸ್ತಿಗಳ ಬಗ್ಗೆ ಸಂಪೂರ್ಣ ವಿವರ ಪಡೆಯುತ್ತಿದ್ದಾರೆ. ಮನೆಯ ಒಳಗೆ ಇರುವವರನ್ನು ಹೊರಗೆ ಬಿಡುವುದಾಗಲಿ ಹಾಗೂ ಫೋನ್ ಮಾಡಲು ಅವಕಾಶ ನೀಡಿಲ್ಲ. ಸ್ಟಾರ್ ನಟರ ಮನೆ ಮುಂದೆ ಅಭಿಮಾನಿಗಳು ಬರುತ್ತಿದ್ದು, ಪೊಲೀಸರು ಬಿಗಿ ಬಂದೊಬಸ್ತ್ ಮಾಡಿದ್ದಾರೆ.