Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸತತ 24 ಗಂಟೆಗಳಿಂದ ಮುಂದುವರೆದ ಐಟಿ ಶೋಧ ಕಾರ್ಯ
ಕನ್ನಡದ ನಟ, ನಿರ್ಮಾಪಕರ ಮನೆ ಮೇಲೆ ನಿನ್ನೆ ಶುರುವಾದ ಐಟಿ ಅಧಿಕಾರಿಗಳು ಶೋಧ ಇಂದೂ ಸಹ ಮುಂದುವರೆದಿದೆ. ನಟ ಶಿವರಾಜ್ ಕುಮಾರ್, ಪುನೀತ್ ಕುಮಾರ್, ಸುದೀಪ್, ಯಶ್, ನಿರ್ಮಾಪಕರಾದ ಜಯಣ್ಣ, ವಿಜಯ್ ಕಿರಗಂದೂರು, ಸಿ ಆರ್ ಮನೋಹರ್, ರಾಕ್ ಲೈನ್ ವೆಂಕಟೇಶ್ ಅವರ ಮನೆಯಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ನಿನ್ನೆ ಬೆಳಗ್ಗೆ 6.30 ರಿಂದ ರಾತ್ರಿ 11.30 ವರೆಗೆ ನಡೆದ ಐಟಿ ಅಧಿಕಾರಿಗಳ ಕೆಲಸ ಈ ದಿನವೂ ಮುಂದುವರೆದಿದೆ. ಅಲ್ಲದೆ, ನಾಳೆಯವರೆಗೆ ಸಹ ಐ ಟಿ ಅಧಿಕಾರಿಗಳ ಶೋಧ ನಡೆಯಲಿದೆ ಎಂದು ಹೇಳಲಾಗುತ್ತಿದೆ.
ಬೆಂಗಳೂರಿಗೆ ಬಂದ ಯಶ್, ಐಟಿ ರೈಡ್ ಬಗ್ಗೆ ಹೇಳಿದ್ದೇನು?
ದಾಳಿಯ ವೇಳೆ ಕಡತಗಳು, ಮನೆಯಲ್ಲಿರುವ ಬೆಲೆಬಾಳುವ ವಸ್ತುಗಳನ್ನು ಪರಿಶೀಲನೆಯನ್ನು ಮಾಡಲಾಗುತ್ತಿದೆ. ಮನೆಯ ಸದಸ್ಯರನ್ನು ಪ್ರಶ್ನೆ ಮಾಡಿ ಮಾಹಿತಿಯನ್ನು ಪಡೆಯಲಾಗುತ್ತಿದೆ. ಆದಾಯಕ್ಕಿಂತ ಹೆಚ್ಚು ಆಸ್ತಿ ಮಾಡಿದ್ದು ತಿಳಿದರೆ ನೋಟಿಸ್ ನೀಡಲಾಗುತ್ತದೆ. ಇದಕ್ಕೆ ಅವರು ಉತ್ತರ ನೀಡಬೆಕಾಗುತ್ತದೆ.
ಐಟಿ ಅಧಿಕಾರಿಗಳು ಇವರನ್ನೇ ಟಾರ್ಗೆಟ್ ಮಾಡಲು ಕಾರಣ ಇದಿರಬಹುದೇ?
ನಟ, ನಿರ್ಮಾಪಕರು ಹಾಗೂ ಮನೆಯವರ ಹೆಸರಿನಲ್ಲಿ ಇರುವ ಆಸ್ತಿಗಳ ಬಗ್ಗೆ ಸಂಪೂರ್ಣ ವಿವರ ಪಡೆಯುತ್ತಿದ್ದಾರೆ. ಮನೆಯ ಒಳಗೆ ಇರುವವರನ್ನು ಹೊರಗೆ ಬಿಡುವುದಾಗಲಿ ಹಾಗೂ ಫೋನ್ ಮಾಡಲು ಅವಕಾಶ ನೀಡಿಲ್ಲ. ಸ್ಟಾರ್ ನಟರ ಮನೆ ಮುಂದೆ ಅಭಿಮಾನಿಗಳು ಬರುತ್ತಿದ್ದು, ಪೊಲೀಸರು ಬಿಗಿ ಬಂದೊಬಸ್ತ್ ಮಾಡಿದ್ದಾರೆ.