Don't Miss!
- Automobiles ಫ್ಯಾಮಿಲಿ ಕಾರಾಗಿ ಜನರ ಮನಗೆದ್ದ ಹ್ಯುಂಡೈ ಅಲ್ಕಾಜರ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- News Tirupati Darshan Ticket: ತಿರುಪತಿ ದರ್ಶನಕ್ಕೆ ವಿಶೇಷ ಟಿಕೆಟ್ ಬಿಡುಗಡೆ: ಪೂಜಾ ಸೇವೆಯಲ್ಲಿ ಬಾಗವಹಿಸಲು ದಿನಾಂಕ ಆಯ್ಕೆ ಮಾಡಿ...
- Finance ಕಬ್ಬನ್ ಪಾರ್ಕ್ನಲ್ಲಿ ಮರ ಅಪ್ಪಿಕೊಳ್ಳುವ ಕಾರ್ಯಕ್ರಮಕ್ಕೆ ತಲಾ 1,500 ರೂ. ಶುಲ್ಕವಿಟ್ಟ ಕಂಪನಿ!
- Technology Itel: ಐಟೆಲ್ ಸೂಪರ್ ಗುರು 4G ಫೋನ್ ಲಾಂಚ್! ಯುಪಿಐ ಬೆಂಬಲ
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಐಟಿ ಅಧಿಕಾರಿಗಳ ಪ್ರಕಟಣೆ : 109 ಕೋಟಿ ಮೌಲ್ಯದ ಆಸ್ತಿ ದಾಖಲೆ ಇಲ್ಲ
Recommended Video
ಸ್ಯಾಂಡಲ್ ವುಡ್ ನಟ ಹಾಗೂ ನಿರ್ಮಾಪಕರ ಮೇಲಾದ ಐಟಿ ದಾಳಿಯ ವಿವರವನ್ನು ಆದಾಯ ತೆರಿಗೆ ಇಲಾಖೆ ಬಹಿರಂಗ ಪಡಿಸಿದೆ. ದಾಳಿಯ ಲೆಕ್ಕಾಚಾರಗಳನ್ನು ಐಟಿ ಅಧಿಕಾರಿಗಳು ಮಾಧ್ಯಮ ಪ್ರಕಟಣೆಯನ್ನು ಹೊರಡಿಸಿದ್ದಾರೆ.
ಐಟಿ ಇಲಾಖೆಯಿಂದ ಬಂದಿರುವ ಪತ್ರಿಕಾ ಪ್ರಕಟಣೆಯ ಪ್ರಕಾರ ಒಟ್ಟು 109 ಕೋಟಿ ಮೌಲ್ಯದ ಆಸ್ತಿಗೆ ಯಾವುದೇ ದಾಖಲೆ ಇಲ್ಲ. ಈ ಆಘೋಷಿತ ಆಸ್ತಿಗೆ ತೆರಿಗೆ ಪಾವತಿ ಆಗಿಲ್ಲ ಎನ್ನುವುದು ತಿಳಿಯುತ್ತಿದೆ. ಇದರಲ್ಲಿ 2.85 ಕೋಟಿ ನಗದು ಹಣ ಹಾಗೂ 25.3 ಕೆಜಿ ಬಂಗಾರ ಸೇರಿಕೊಂಡಿದೆ.
ನಟರ ಸಂಭಾವನೆಯ ಹೊರತಾಗಿ ಪ್ರಮುಖವಾಗಿ ನಟರ ವ್ಯವಹಾರಗಳ ಕುರಿತು ಐಟಿ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ. ಅಲ್ಲದೆ, ಸಿನಿಮಾಗಳ ಆಡಿಯೋ ಹಕ್ಕು, ಸೆಟೆಲೈಟ್ ರೈಟ್ಸ್, ಥಿಯೇಟರ್ ಕಲೆಕ್ಷನ್ ಹೀಗೆ ಯಾವುದಕ್ಕೂ ಸರಿಯಾದ ಲೆಕ್ಕ ಪತ್ರಗಳು ಇಲ್ಲ ಎಂದು ತಿಳಿಸಲಾಗಿದೆ.
ನಟರು ಹಾಗೂ ನಿರ್ಮಾಪಕರ 109 ಕೋಟಿ ಮೌಲ್ಯದ ಆಸ್ತಿಯ ಬಗ್ಗೆ ಮತ್ತೆ ವಿಚಾರಣೆ ನಡೆಯಲಿದೆ. ಮತ್ತೊಂದು ಕಡೆ ದಾಳಿಯಿಂದ ಬಂದ ಒಟ್ಟು ಮೊತ್ತವನ್ನು ಅಧಿಕೃತವಾಗಿ ಹೇಳಿರುವ ಐಟಿ ಇಲಾಖೆ ಯಾರ್ಯಾರ ಮೌಲ್ಯ ಎಷ್ಟು ಎನ್ನುವುದನ್ನು ಬಹಿರಂಗ ಪಡಿಸಿಲ್ಲ.
ನಟ ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ಸುದೀಪ್, ಯಶ್, ನಿರ್ಮಾಪಕರಾದ ಜಯಣ್ಣ, ವಿಜಯ್ ಕಿರಗಂದೂರು, ರಾಕ್ ಲೈನ್ ವೆಂಕಟೇಶ್ ಹಾಗೂ ಸಿ ಆರ್ ಮಹೋಹರ್ ಮನೆ ಮೇಲೆ ಕಳೆದ ಗುರುವಾರ ಐಟಿ ದಾಳಿ ನಡೆದಿತ್ತು.