Don't Miss!
- Sports RCB vs KKR: ಗೇಮ್ ಚೇಂಜರ್ ಆಗಬಹುದು ಈ ಪ್ಲೇಯರ್ಸ್; ಈ ಆಟಗಾರರ ಮೇಲೆ ಕಣ್ಣು
- News Acid Attack: ಆಸ್ತಿ ವಿವಾದ: ಮಗನ ಮೇಲೆ 'ಆಸಿಡ್' ಎರಚಿದ ತಂದೆ
- Automobiles ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಐಟಿ ಅಧಿಕಾರಿಗಳ ಪ್ರಕಟಣೆ : 109 ಕೋಟಿ ಮೌಲ್ಯದ ಆಸ್ತಿ ದಾಖಲೆ ಇಲ್ಲ
Recommended Video
ಸ್ಯಾಂಡಲ್ ವುಡ್ ನಟ ಹಾಗೂ ನಿರ್ಮಾಪಕರ ಮೇಲಾದ ಐಟಿ ದಾಳಿಯ ವಿವರವನ್ನು ಆದಾಯ ತೆರಿಗೆ ಇಲಾಖೆ ಬಹಿರಂಗ ಪಡಿಸಿದೆ. ದಾಳಿಯ ಲೆಕ್ಕಾಚಾರಗಳನ್ನು ಐಟಿ ಅಧಿಕಾರಿಗಳು ಮಾಧ್ಯಮ ಪ್ರಕಟಣೆಯನ್ನು ಹೊರಡಿಸಿದ್ದಾರೆ.
ಐಟಿ ಇಲಾಖೆಯಿಂದ ಬಂದಿರುವ ಪತ್ರಿಕಾ ಪ್ರಕಟಣೆಯ ಪ್ರಕಾರ ಒಟ್ಟು 109 ಕೋಟಿ ಮೌಲ್ಯದ ಆಸ್ತಿಗೆ ಯಾವುದೇ ದಾಖಲೆ ಇಲ್ಲ. ಈ ಆಘೋಷಿತ ಆಸ್ತಿಗೆ ತೆರಿಗೆ ಪಾವತಿ ಆಗಿಲ್ಲ ಎನ್ನುವುದು ತಿಳಿಯುತ್ತಿದೆ. ಇದರಲ್ಲಿ 2.85 ಕೋಟಿ ನಗದು ಹಣ ಹಾಗೂ 25.3 ಕೆಜಿ ಬಂಗಾರ ಸೇರಿಕೊಂಡಿದೆ.
ನಟರ ಸಂಭಾವನೆಯ ಹೊರತಾಗಿ ಪ್ರಮುಖವಾಗಿ ನಟರ ವ್ಯವಹಾರಗಳ ಕುರಿತು ಐಟಿ ಅಧಿಕಾರಿಗಳು ಕಣ್ಣಿಟ್ಟಿದ್ದಾರೆ. ಅಲ್ಲದೆ, ಸಿನಿಮಾಗಳ ಆಡಿಯೋ ಹಕ್ಕು, ಸೆಟೆಲೈಟ್ ರೈಟ್ಸ್, ಥಿಯೇಟರ್ ಕಲೆಕ್ಷನ್ ಹೀಗೆ ಯಾವುದಕ್ಕೂ ಸರಿಯಾದ ಲೆಕ್ಕ ಪತ್ರಗಳು ಇಲ್ಲ ಎಂದು ತಿಳಿಸಲಾಗಿದೆ.
ನಟರು ಹಾಗೂ ನಿರ್ಮಾಪಕರ 109 ಕೋಟಿ ಮೌಲ್ಯದ ಆಸ್ತಿಯ ಬಗ್ಗೆ ಮತ್ತೆ ವಿಚಾರಣೆ ನಡೆಯಲಿದೆ. ಮತ್ತೊಂದು ಕಡೆ ದಾಳಿಯಿಂದ ಬಂದ ಒಟ್ಟು ಮೊತ್ತವನ್ನು ಅಧಿಕೃತವಾಗಿ ಹೇಳಿರುವ ಐಟಿ ಇಲಾಖೆ ಯಾರ್ಯಾರ ಮೌಲ್ಯ ಎಷ್ಟು ಎನ್ನುವುದನ್ನು ಬಹಿರಂಗ ಪಡಿಸಿಲ್ಲ.
ನಟ ಶಿವರಾಜ್ ಕುಮಾರ್, ಪುನೀತ್ ರಾಜ್ ಕುಮಾರ್, ಸುದೀಪ್, ಯಶ್, ನಿರ್ಮಾಪಕರಾದ ಜಯಣ್ಣ, ವಿಜಯ್ ಕಿರಗಂದೂರು, ರಾಕ್ ಲೈನ್ ವೆಂಕಟೇಶ್ ಹಾಗೂ ಸಿ ಆರ್ ಮಹೋಹರ್ ಮನೆ ಮೇಲೆ ಕಳೆದ ಗುರುವಾರ ಐಟಿ ದಾಳಿ ನಡೆದಿತ್ತು.