Don't Miss!
- Automobiles Google Maps: ಇವಿ ಮಾಲೀಕರೇ ಆತಂಕ ಬಿಡಿ... ಗೂಗಲ್ ಮ್ಯಾಪ್ಸ್ ಭರ್ಜರಿ ಅಪ್ಡೇಟ್!
- Finance ಇಳಿಕೆ ಕಂಡ ನೆಸ್ಲೆ ಇಂಡಿಯಾ ಷೇರು: ಸೆರೆಲಾಕ್ನಲ್ಲಿ ಸಕ್ಕರೆ ಬಗ್ಗೆ ಸಂಸ್ಥೆಯ ಸ್ಪಷ್ಟನೆ ಏನು?
- Technology ವಿವೋ V30e ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಬೆಲೆ, ಕ್ಯಾಮೆರಾ, ವಿನ್ಯಾಸ ವಿವರ ಇಲ್ಲಿದೆ..
- News Bengaluru Suburban Rail Project: ಹಳ್ಳ ಹಿಡಿದ ₹15,767 ಕೋಟಿ ವೆಚ್ಚದ ಕಾಮಗಾರಿ, ಜನಸಾಮಾನ್ಯರು ಹೇಳೋದೇನು ಗೊತ್ತಾ?
- Lifestyle ಸ್ವತಂತ್ರ ಭಾರತದ ಮೊದಲ ಮತದಾರನಿಲ್ಲದ ಮೊದಲ ಚುನಾವಣೆ ಇದು..! ಯಾರು ಈ ಮತದಾರ ಗೊತ್ತಾ?
- Sports IPL 2024: ಪಂಜಾಬ್ ಕಿಂಗ್ಸ್ ವಿರುದ್ಧ ಗೆದ್ದರೂ ಹಾರ್ದಿಕ್ ಪಾಂಡ್ಯಗೆ ಭಾರೀ ಮೊತ್ತದ ದಂಡ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಡ್ರಗ್ ವಿಚಾರದಲ್ಲಿ ಮತ್ತೊಂದು ಬಾಂಬ್ ಸಿಡಿಸಿದ ಇಂದ್ರಜಿತ್ ಲಂಕೇಶ್
ಡ್ರಗ್ಸ್ ದಂಧೆಯಲ್ಲಿ ಕೇವಲ ಇಬ್ಬರು ಮಾತ್ರ ನಟಿಯರಿದ್ದಾರಾ, ಬೇರೆ ಯಾರೂ ಇಲ್ವಾ? ಇಬ್ಬರು ನಟಿಯರು ಬಿಟ್ಟರೆ ಯಾಕೆ ಇದುವರೆಗೂ ಯಾವ ನಟ, ನಿರ್ದೇಶಕರ ಮಕ್ಕಳನ್ನು, ರಾಜಕಾರಣಿಗಳ ಮಕ್ಕಳನ್ನು ಬಂಧಿಸಿಲ್ಲ ಅಥವಾ ವಿಚಾರಣೆಗೆ ಕರೆದಿಲ್ಲ ಎಂಬ ಅನುಮಾನ ಕಾಡುವುದು ಸಹಜ. ಇದೇ ಅನುಮಾನವನ್ನು ಇಂದ್ರಜಿತ್ ಲಂಕೇಶ್ ವ್ಯಕ್ತಪಡಿಸಿದ್ದಾರೆ.
Recommended Video
ಡ್ರಗ್ಸ್ ವಿಚಾರದಲ್ಲಿ ವಿರುದ್ಧವಾಗಿ ಧ್ವನಿ ಎತ್ತಿದ್ದ ಇಂದ್ರಜಿತ್ ಲಂಕೇಶ್ ಆರಂಭದಿಂದಲೇ ಚಿತ್ರರಂಗದ ಕೆಲವು ಸ್ಟಾರ್ಗಳು, ಹಿರಿಯ ನಿರ್ದೇಶಕರ ಮಕ್ಕಳು, ರಾಜಕಾರಣಿಗಳ ಮಕ್ಕಳು, ಇವೆಂಟ್ ಆಯೋಜಕರು ಭಾಗಿಯಾಗಿದ್ದಾರೆ ಎಂದು ಹೇಳುತ್ತಲೇ ಬಂದಿದ್ದಾರೆ. ಆದ್ರೆ, ಈ ಕೇಸ್ ಗಂಭೀರವಾಗುವ ಯಾವುದೇ ಲಕ್ಷಣಗಳು ಕಾಣುತ್ತಿಲ್ಲ ಎಂದು ಇಂದ್ರಜಿತ್ ಬೇಸರ ವ್ಯಕ್ತಪಡಿಸಿದ್ದಾರೆ. ಮುಂದೆ ಓದಿ....
ಡ್ರಗ್ಸ್ ಪ್ರಕರಣ: ನಟಿಯರ ಖಾಸಗಿ ವಿಡಿಯೋ ಸೋರಿಕೆ ಮಾಡಿದವರ ವಿರುದ್ಧ ಸಿಡಿದೆದ್ದ ನಟಿ ಪಾರುಲ್
ಸುಮ್ಮನೆ ವಿಚಾರಣೆ ಆಗ್ತಿದೆ ಅಷ್ಟೇ
ಪೊಲೀಸರು ಕೆಲಸ ಮಾಡುತ್ತಿದ್ದರೂ ಅವರ ಕೈಕಟ್ಟಿ ಹಾಕಿರುವಂತೆ ಕೆಲಸ ಕಾಣ್ತಿದೆ. ಇಬ್ಬರು ನಟಿಯರನ್ನು ಬಿಟ್ಟರೆ ಬೇರೆ ಯಾರನ್ನು ಬಂಧಿಸಿಲ್ಲ, ನಟ-ನಿರ್ದೇಶಕರ ಮಕ್ಕಳು, ರಾಜಕಾರಣಿಗಳ ಮಕ್ಕಳು ಈ ದಂಧೆಯಲ್ಲಿದ್ದಾರೆ. ಆದರೆ, ಬೇರೆ ಹಿಡಿದು ತನಿಖೆ ಮಾಡುವಂತೆ ಕಾಣುತ್ತಿಲ್ಲ. ಸುಮ್ಮನೆ ತನಿಖೆ ಮಾಡ್ತಿದ್ದಾರೆ ಅನಿಸುತ್ತಿದೆ'' ಎಂದು ಇಂದ್ರಜಿತ್ ಲಂಕೇಶ್ ಬೇಸರ ವ್ಯಕ್ತಪಡಿಸಿದ್ದಾರೆ.
ಸಿಬಿಐ ಸೂಕ್ತ ಮಾರ್ಗ!
ಈ ಪ್ರಕರಣವನ್ನು ಸಿಬಿಐಗೆ ವಹಿಸಿದರೆ ಖಂಡಿತ ಹಲವು ರಾಜಕಾರಣಿಗಳ ಹೆಸರು ಹೊರಗೆ ಬರುತ್ತೆ, ರಾಜಕಾರಣಿಗಳ ಮಕ್ಕಳ ಹೆಸರು ಬರುತ್ತೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದೆ, ಆದ್ರೆ ಅವರ ನಾಯಕರಿಂದಲೇ ತನಿಖೆಗೆ ಅಡ್ಡಗಾಲು ಎದುರಾಗುತ್ತಿದೆ. ಸಿಬಿಐ ತನಿಖೆ ಮಾಡಿದ್ರೆ ಅಸಲಿ ಸತ್ಯ ಹೊರಗೆ ಬರುತ್ತದೆ'' ಎಂದು ಇಂದ್ರಜಿತ್ ಆಗ್ರಹಿಸಿದ್ದಾರೆ.