Don't Miss!
- News ಮೈಸೂರು: ಪ್ರಧಾನಿ ಮೋದಿ ಕುರಿತಾದ ಹಾಡು ಶೇರ್ ಮಾಡಿ ಎಂದಿದ್ದಕ್ಕೆ ಯುವಕನ ಮೇಲೆ ಹಲ್ಲೆ
- Lifestyle ಲಿವರ್ ಸಮಸ್ಯೆಯಿದೆ ಎಂದು ಸೂಚಿಸುವ ಲಕ್ಷಣಗಳಿವು, ಕುಟುಂಬಸ್ಥರು ಲಿವರ್ ದಾನ ಮಾಡಿದರೆ ವ್ಯಕ್ತಿಯ ಪ್ರಾಣ ಉಳಿಸಬಹುದು
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸ್ಯಾಂಡಲ್ ವುಡ್ ಗೆ ಡ್ರಗ್ ನಂಟು: ಯುವ ನಟನ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಇಂದ್ರಜಿತ್ ಲಂಕೇಶ್
ಸ್ಯಾಂಡಲ್ ವುಡ್ ನ ಕೆಲವು ನಟ ನಟಿಯರು, ಸಂಗೀತ ನಿರ್ದೇಶಕರಿಗೆ ಡ್ರಗ್ ಮಾಫಿಯಾದ ಜೊತೆ ನಂಟಿದೆ ಎನ್ನುವ ವಿಚಾರ ಬಹಿರಂಗವಾಗುತ್ತಿದ್ದಂತೆ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಈ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟಿದ್ದಾರೆ. ಇತ್ತೀಚಿಗೆ ನಿಧನರಾದ ಸ್ಯಾಂಡಲ್ ವುಡ್ ಯುವ ನಟನ ಸಾವಿನ ಬಗ್ಗೆ ಇಂದ್ರಜಿತ್ ಲಂಕೇಶ್ ಪ್ರಶ್ನಿಸಿದ್ದಾರೆ.
Recommended Video
ಟಿವಿ 9 ಕನ್ನಡ ವಾಹಿನಿ ಜೊತೆ ಮಾತನಾಡಿರುವ ಇಂದ್ರಜಿತ್ ಲಂಕೇಶ್, ಕನ್ನಡದ ಯುವ ನಟನ ಸಾವಿಗೆ ಕಾರಣವೇನು? ಎಂದು ಕೇಳಿದ್ದಾರೆ. ನಟನ ಹೆಸರು ಹೇಳಲು ಇಷ್ಟಪಡದ ಇಂದ್ರಜಿತ್ ಲಂಕೇಶ್, ಇತ್ತೀಚಿಗೆ ನಿಧನರಾದ 35 ವರ್ಷ ವಯಸ್ಸಿನ ನಟನ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಮುಂದೆ ಓದಿ...
ಸ್ಯಾಂಡಲ್ವುಡ್ ಡ್ರಗ್ ನಂಟು ಇದೆ, ರಕ್ಷಣೆ ಕೊಟ್ಟರೆ ವಿವರ ಕೊಡ್ತೀನಿ: ಇಂದ್ರಜಿತ್ ಲಂಕೇಶ್
ಮರಣೋತ್ತರ ಪರೀಕ್ಷೆ ಯಾಕೆ ನಡೆಸಿಲ್ಲ?
ಚಿಕ್ಕ ವಯಸ್ಸಿನಲ್ಲಿಯೇ ಸಾವನ್ನಪ್ಪುತ್ತಾರೆ ಎಂದರೆ ಏನು ಕಾರಣ?, ಆ ನಟನ ಸಾವಿನ ಬಳಿಕ ಮರಣೋತ್ತರ ಪರೀಕ್ಷೆ ಯಾಕೆ ಮಾಡಿಸಿಲ್ಲ? ಪರೀಕ್ಷೆ ಮಾಡಿಸಿದ್ದರೆ ಎಲ್ಲಾ ಬಯಲಾಗುತ್ತಿತ್ತು. ಮರಣೋತ್ತರ ಪರೀಕ್ಷೆ ನಡೆಸದಂತೆ ಪೊಲೀಸರಿಗೆ ರಾಜಕೀಯ ಒತ್ತಡವಿತ್ತು. ಯಾವ ರಾಜಕೀಯ ವ್ಯಕ್ತಿ ಒತ್ತಡ ಹಾಕಿದ್ದಾರೆ ಎನ್ನುವುದು ಗೊತ್ತಿದೆ" ಎಂದು ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.
ಅನೇಕ ನಟ-ನಟಿಯರ ಮನೆಗೆ ಡ್ರಗ್ ಹೋಗುತ್ತಿದೆ
ಸ್ಯಾಂಡಲ್ ವುಡ್ ನಲ್ಲಿ ಹಲವು ನಟ-ನಟಿಯರು ಡ್ರಗ್ ವ್ಯಸನಕ್ಕೆ ಒಳಗಾಗಿದ್ದಾರೆ. ಅನೇಕ ನಟರ ಮನೆಯ ಎಸ್ಟೇಟ್ ಗಳಿಗೆ ಡ್ರಗ್ ಹೋಗುತ್ತಿದೆ. ಕೊರೊನಾ ಲಾಡ್ ಡೌನ್ ಸಮಯದಲ್ಲಿಯೂ ಇಷ್ಟು ದೊಡ್ಡ ಮಟ್ಟದ ದಂಧೆ ನಡೆಯಲು ಹೇಗೆ ಸಾಧ್ಯ? ಎಂದು ಇಂದ್ರಜಿತ್ ಪ್ರಶ್ನಿಸಿದ್ದಾರೆ.
ಡ್ರಗ್ಸ್, ಚಿತ್ರರಂಗ ಮತ್ತು ಬೆಂಗಳೂರು: ನಿವೃತ್ತ ಪೊಲೀಸ್ ಅಧಿಕಾರಿಯ ವಿಶ್ಲೇಷಣೆ
ತನಿಖೆ ಮಾಡಿದರೆ ಎಲ್ಲಾ ಬಯಲಾಗುತ್ತೆ
ಈ ಹಿಂದೆಯೂ ಸ್ಯಾಂಡಲ್ ವುಡ್ ನಲ್ಲಿ ಡ್ರಗ್ ದಂಧೆಯ ಬಗ್ಗೆ ಸುದ್ದಿಯಾಗಿತ್ತು. ಆದರೆ ಈ ಬಗ್ಗೆ ತನಿಖೆ ಯಾಕೆ ನಡೆಸಲಿಲ್ಲ? ಒಂದು ವೇಳೆ ತನಿಖೆ ನಡೆಸಿದ್ದರೆ ಎಲ್ಲಾ ಮಾಹಿತಿ ಹೊರಬರುತ್ತಿತ್ತು. ಯಾರೆಲ್ಲ ಭಾಗಿಯಾಗಿದ್ದಾರೆ ಎನ್ನುವುದು ಗೊತ್ತಾಗುತ್ತಿತ್ತು. ಇದನ್ನು ಮುಚ್ಚಿ ಹಾಕುವ ಪ್ರಯತ್ನ ನಡೆಯುತ್ತಿದೆ. ನನ್ನ ಬಳಿ ಸಂಪೂರ್ಣ ಮಾಹಿತಿ ಇದೆ, ಸಂಬಂಧ ಪಟ್ಟ ಇಲಾಖೆಯವರು, ಪೊಲೀಸರು ಕೇಳಿದರೆ ಕೊಡುತ್ತೇನೆ. ಆದರೆ ನನಗೆ ರಕ್ಷಣೆ ಬೇಕು ಎಂದು ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ.
ಮೂವರು ಆರೋಪಿಗಳ ಬಂಧನ
ಇತ್ತೀಚಿಗೆ ನಾರ್ಕೊಟಿಕ್ಸ್ ಕಂಟ್ರೋಲ್ ಬ್ಯೂರೋ ಅಧಿಕಾರಿಗಳು ಬೆಂಗಳೂರಿನ ಕಲ್ಯಾಣ ನಗರದ ಐಶಾರಾಮಿ ಹೋಟೆಲ್ ಅಪಾರ್ಟ್ ಮೆಂಟ್ ಮೇಲೆ ದಾಳಿ ಮಾಡಿ, ಡ್ರಗ್ಸ್ ದಾಸ್ತಾನು ಮತ್ತು ಮಾರಾಟ ಮಾಡುತ್ತಿದ್ದ ಒಬ್ಬ ಮಹಿಳೆ ಸೇರಿ ಮೂವರನ್ನು ಬಂಧಿಸಿದ್ದಾರೆ. ಬಂಧಿತರು ಕನ್ನಡದ ನಟ-ನಟಿಯರು, ಸಂಗೀತ ನಿರ್ದೇಶಕರಿಗೆ ಮಾದಕ ವಸ್ತು ಸರಬರಾಜು ಮಾಡುತ್ತಿರುವುದಾಗಿ ತಿಳಿಸಿದ್ದಾರೆ.