ಡಾ ವಿಷ್ಣು ಸ್ಮಾರಕ ಸ್ಥಳ ಪರಿಶೀಲನೆ ಮಾಡಿದ ವಾರ್ತಾ ಇಲಾಖೆ ಆಯುಕ್ತ
ಮೈಸೂರಿನಿಂದ ಸುಮಾರು ಆರು ಕಿಲೋ ಮೀಟರ್ಗಳ ದೂರದಲ್ಲಿರುವ ಹಾಲಾಳು ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ದಿವಂಗತ ನಟ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ಸ್ಥಳಕ್ಕೆ ವಾರ್ತಾ ಮತ್ತು ಪ್ರಚಾರ ಇಲಾಖೆ ಆಯುಕ್ತರಾದ ಡಾ ಪಿ.ಎಸ್. ಹರ್ಷ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇಮೇಜ್ ಗ್ಯಾಲರಿ ಮತ್ತು ಸಭಾಂಗಣದ ಕಾಮಗಾರಿ ಆರಂಭಗೊಂಡಿದ್ದು, ವಿಶ್ವ ದರ್ಜೆಯ ಸ್ಮಾರಕ ಸ್ಥಳ ಇದಾಗಬೇಕೆಂಬ ಆಶಯ ತಮ್ಮದಾಗಿದೆ, ರಾಜ್ಯ ಸರ್ಕಾರವೂ ಸಹ ಈ ನಿಟ್ಟಿನಲ್ಲಿ ಅತೀವ ಆಸಕ್ತಿ ವಹಿಸುತ್ತಿದೆ ಎಂದು ಡಾ.ಹರ್ಷ ತಿಳಿಸಿದ್ದಾರೆ.
ಸುಮಾರು 11 ಕೋಟಿ ರೂಗಳ ಯೋಜನೆ ಇದಾಗಿದ್ದು, ಐದು ಎಕರೆ ವಿಶಾಲ ಪ್ರದೇಶದಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಷ್ಣು ಸ್ಮಾರಕವನ್ನು ಅತ್ಯಂತ ಕ್ಷಿಪ್ರವಾಗಿ ಹಾಗೂ ಉತ್ಕೃಷ್ಟವಾಗಿ ನಾಡಿಗೆ ನೀಡುವ ಸಂಕಲ್ಪಕ್ಕೆ ವಾರ್ತಾ ಇಲಾಖೆ ಬದ್ಧವಾಗಿದೆ ಎಂದು ಹರ್ಷ ಹೇಳಿದರು.

ಪೊಲೀಸ್ ಗೃಹ ನಿರ್ಮಾಣ ಸಂಸ್ಥೆ ಕೈಗೆತ್ತಿಕೊಂಡಿರುವ ಈ ಕಾಮಗಾರಿಯ ನಿರ್ವಹಣೆಯನ್ನು ರೇವನಿ ಪ್ರಸಾದ್ ಕನ್ಸ್ಟ್ರಕ್ಷನ್ ಕಂಪನಿ ಮಾಡುತ್ತಿದ್ದು, ಹನ್ನೊಂದು ತಿಂಗಳ ಒಳಗಾಗಿ ಕನ್ನಡ ನಾಡಿಗೆ ಸಮರ್ಪಣೆ ಮಾಡಲಿದೆ.
ಪರಿಶೀಲನೆ ವೇಳೆ ಸಹಾಯಕ ಇಂಜಿನಿಯರುಗಳಾದ ಮಂಜುನಾಥ್ ಸ್ಮಾರಕದ ರೂಪು ರೂಪು-ರೇಷೆಗಳನ್ನು ನಕ್ಷೆಯೊಂದಿಗೆ ವಿವರಿಸಿದರು. ವಾರ್ತಾ ಅಧಿಕಾರಿ ವಿಜಯಾನಂದ್ ಹಾಗೂ ಅಶೋಕ್ ಕುಮಾರ್ ಸಹ ಹಾಜರಿದ್ದರು.


Click it and Unblock the Notifications











