twitter
    For Quick Alerts
    ALLOW NOTIFICATIONS  
    For Daily Alerts

    ಡಾ ವಿಷ್ಣು ಸ್ಮಾರಕ ಸ್ಥಳ ಪರಿಶೀಲನೆ ಮಾಡಿದ ವಾರ್ತಾ ಇಲಾಖೆ ಆಯುಕ್ತ

    |

    ಮೈಸೂರಿನಿಂದ ಸುಮಾರು ಆರು ಕಿಲೋ ಮೀಟರ್‌ಗಳ ದೂರದಲ್ಲಿರುವ ಹಾಲಾಳು ಗ್ರಾಮದಲ್ಲಿ ನಿರ್ಮಾಣಗೊಳ್ಳುತ್ತಿರುವ ದಿವಂಗತ ನಟ ಸಾಹಸ ಸಿಂಹ ವಿಷ್ಣುವರ್ಧನ್ ಅವರ ಸ್ಮಾರಕ ಸ್ಥಳಕ್ಕೆ ವಾರ್ತಾ ಮತ್ತು ಪ್ರಚಾರ ಇಲಾಖೆ ಆಯುಕ್ತರಾದ ಡಾ ಪಿ.ಎಸ್. ಹರ್ಷ ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಇಮೇಜ್ ಗ್ಯಾಲರಿ ಮತ್ತು ಸಭಾಂಗಣದ ಕಾಮಗಾರಿ ಆರಂಭಗೊಂಡಿದ್ದು, ವಿಶ್ವ ದರ್ಜೆಯ ಸ್ಮಾರಕ ಸ್ಥಳ ಇದಾಗಬೇಕೆಂಬ ಆಶಯ ತಮ್ಮದಾಗಿದೆ, ರಾಜ್ಯ ಸರ್ಕಾರವೂ ಸಹ ಈ ನಿಟ್ಟಿನಲ್ಲಿ ಅತೀವ ಆಸಕ್ತಿ ವಹಿಸುತ್ತಿದೆ ಎಂದು ಡಾ.ಹರ್ಷ ತಿಳಿಸಿದ್ದಾರೆ.

    'ಸ್ನೇಹ ಪ್ರೀತಿಗೆ ಸಾಕಾರ ರೂಪ ನಮ್ಮ ವಿಷ್ಣುವರ್ಧನ್': ಸುಮಲತಾ ಅಂಬರೀಶ್'ಸ್ನೇಹ ಪ್ರೀತಿಗೆ ಸಾಕಾರ ರೂಪ ನಮ್ಮ ವಿಷ್ಣುವರ್ಧನ್': ಸುಮಲತಾ ಅಂಬರೀಶ್

    ಸುಮಾರು 11 ಕೋಟಿ ರೂಗಳ ಯೋಜನೆ ಇದಾಗಿದ್ದು, ಐದು ಎಕರೆ ವಿಶಾಲ ಪ್ರದೇಶದಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಷ್ಣು ಸ್ಮಾರಕವನ್ನು ಅತ್ಯಂತ ಕ್ಷಿಪ್ರವಾಗಿ ಹಾಗೂ ಉತ್ಕೃಷ್ಟವಾಗಿ ನಾಡಿಗೆ ನೀಡುವ ಸಂಕಲ್ಪಕ್ಕೆ ವಾರ್ತಾ ಇಲಾಖೆ ಬದ್ಧವಾಗಿದೆ ಎಂದು ಹರ್ಷ ಹೇಳಿದರು.

    Information Department Commissioner Dr Harsha has visit to Dr vishnuvardhan memorial place

    ಪೊಲೀಸ್ ಗೃಹ ನಿರ್ಮಾಣ ಸಂಸ್ಥೆ ಕೈಗೆತ್ತಿಕೊಂಡಿರುವ ಈ ಕಾಮಗಾರಿಯ ನಿರ್ವಹಣೆಯನ್ನು ರೇವನಿ ಪ್ರಸಾದ್ ಕನ್ಸ್ಟ್ರಕ್ಷನ್ ಕಂಪನಿ ಮಾಡುತ್ತಿದ್ದು, ಹನ್ನೊಂದು ತಿಂಗಳ ಒಳಗಾಗಿ ಕನ್ನಡ ನಾಡಿಗೆ ಸಮರ್ಪಣೆ ಮಾಡಲಿದೆ.

    ವಿಷ್ಣು ಪ್ರತಿಮೆ ಧ್ವಂಸ: ಸಿಂಹ ಯಾವತ್ತಿದ್ದರೂ ಸಿಂಹವೇ- ವಿಷ್ಣು ಪುತ್ರಿ ತಿರುಗೇಟುವಿಷ್ಣು ಪ್ರತಿಮೆ ಧ್ವಂಸ: ಸಿಂಹ ಯಾವತ್ತಿದ್ದರೂ ಸಿಂಹವೇ- ವಿಷ್ಣು ಪುತ್ರಿ ತಿರುಗೇಟು

    ಪರಿಶೀಲನೆ ವೇಳೆ ಸಹಾಯಕ ಇಂಜಿನಿಯರುಗಳಾದ ಮಂಜುನಾಥ್ ಸ್ಮಾರಕದ ರೂಪು ರೂಪು-ರೇಷೆಗಳನ್ನು ನಕ್ಷೆಯೊಂದಿಗೆ ವಿವರಿಸಿದರು. ವಾರ್ತಾ ಅಧಿಕಾರಿ ವಿಜಯಾನಂದ್ ಹಾಗೂ ಅಶೋಕ್ ಕುಮಾರ್ ಸಹ ಹಾಜರಿದ್ದರು.

    English summary
    Information and Public Relations Department Commissioner Dr Harsha has visit to halalu village in mysore and check the progress of late actor vishnuvardhan memorial.
    Friday, January 8, 2021, 19:32
    IIFA

    Kannada Photos

    Go to : More Photos
    ತಾಜಾ ಸುದ್ದಿ ತಕ್ಷಣ ಪಡೆಯಿರಿ
    Enable
    x
    Notification Settings X
    Time Settings
    Done
    Clear Notification X
    Do you want to clear all the notifications from your inbox?
    Settings X
    X