Don't Miss!
- News Gold Price: ಗಗನ ಕುಸುಮವಾದ ಬಂಗಾರ: ಮಾರ್ಚ್ 28ರ ಚಿನ್ನ ಮತ್ತು ಬೆಳ್ಳಿ ದರ ವಿವರ
- Sports SRH vs MI: ಇತಿಹಾಸದ ಪುಟ ಸೇರಿದ ಪಂದ್ಯ; ಈ ಪಂದ್ಯದಲ್ಲಿ ದಾಖಲಾದ ರೆಕಾರ್ಡ್ ಪಟ್ಟಿ ಇಲ್ಲಿದೆ
- Finance 7th pay Commission: ಕೇಂದ್ರ ಸರ್ಕಾರಿ ನೌಕರರಿಗೆ ವೇತನ ಹೆಚ್ಚಳ, ಒಂದು ದಿನ ಮುಂಚಿತವಾಗಿ ಸಂಬಳ
- Lifestyle ಒಂದು ಸೌತೆಕಾಯಿ ಹಾಕಿ ಮಾಡಿ ಮೊಸರು ಹುಳಿ..! ಸಿಕ್ಕಾಪಟ್ಟೆ ರುಚಿ ರೆಸಿಪಿ
- Automobiles ಜಿಮ್ನಿಗೆ ಸೆಡ್ಡು ಹೊಡೆಯಲು ಎಂಜಿ ಮಾಸ್ಟರ್ ಪ್ಲಾನ್: ಸದ್ಯದಲ್ಲೇ ಕಾಮೆಟ್ ಆಧರಿಸಿ 5 ಡೋರ್ ಕಾರು ಭಾರತಕ್ಕೆ?
- Technology ರೆಡ್ಮಿಯ ಈ ಮೊಬೈಲ್ಗೆ ಇರುವ ಬಿಗ್ ಆಫರ್ ತಿಳಿದ್ರೆ, ಖಂಡಿತಾ ವಾವ್ ಅಂತೀರಾ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬ್ರಾಹ್ಮಣರ ಅವಹೇಳನ; ಕಾನೂನು ತೊಡಕಿನಲ್ಲಿ ನಟ
ಆದರೆ ಮೋಹನ್ ಬಾಬು ಮಾತ್ರ ತಮ್ಮ ಚಿತ್ರದಲ್ಲಿ ಯಾವುದೇ ಸಮುದಾಯಕ್ಕೆ ಅವಹೇಳನ ಮಾಡಿಲ್ಲ. ಬ್ರಾಹ್ಮಣ ಸಮುದಾಯವನ್ನು ತಾವು ಗೌರವಿಸುತ್ತೇವೆ. ಚಿತ್ರದಲ್ಲಿ ಅವರಿಗೆ ಯಾವುದೇ ರೀತಿ ಅವಹೇಳನ ಮಾಡಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಚಿತ್ರದಲ್ಲಿ ತಮಗೆ ಅವಹೇಳನ ಮಾಡಲಾಗಿದೆ ಎಂದು ಬ್ರಾಹ್ಮಣ ಸಮುದಾಯ ಕೋರ್ಟ್ ಮೆಟ್ಟಿಲೇರಿತ್ತು. ಈ ಸಂಬಂಧ ಕೋರ್ಟ್ ಆದೇಶದಂತೆ ಮಲಕಜ್ ಗಿರಿ ಪೊಲೀಸರು ನಟ ಮೋಹನ್ ಬಾಬು ಹಾಗೂ ಅವರ ಪುತ್ರ ಮಂಜು ವಿಷ್ಣು ಹಾಗೂ ತೆಲುಗಿನ ಖ್ಯಾತ ಹಾಸ್ಯ ನಟ ಬ್ರಹ್ಮಾನಂದಂ ವಿರುದ್ಧ ಕೇಸು ದಾಖಲಿಕೊಂಡಿದ್ದಾರೆ.
ಮೋಹನ್ ಬಾಬು ನಿರ್ಮಿಸಿರುವ ಈ ಚಿತ್ರದಲ್ಲಿ ನಾಯಕ ನಟನಾಗಿ ಅವರ ಪುತ್ರ ಮಂಜು ವಿಷ್ಣುವರ್ಧನ್ ಅಭಿನಯಿಸಿದ್ದಾರೆ. ಈ ಚಿತ್ರದ ಆಡಿಯೋ ಸಿಡಿ ಬಿಡುಗಡೆಗಾಗಿ ಮೋಹನ್ ಬಾಬು ತಮ್ಮ ಪುತ್ರನ ಜೊತೆ ಬೆಂಗಳೂರಿಗೆ ಆಗಮಿಸಿದ್ದರು. ಈ ಆಡಿಯೋ ಬಿಡುಗಡೆ ಸಮಾರಂಭಕ್ಕೆ ರೆಬೆಲ್ ಸ್ಟಾರ್ ಅಂಬರೀಶ್ ಹಾಗೂ ಕಿಚ್ಚ ಸುದೀಪ್ ಕೂಡ ಆಗಮಿಸಿದ್ದರು.
ಚಿತ್ರದಲ್ಲಿ ಬ್ರಾಹ್ಮಣ ಸಮುದಾಯದ ಸಂಪ್ರದಾಯವನ್ನು ಅವಹೇಳನ ಮಾಡಲಾಗಿದ್ದು, ಅವರ ಭಾವನೆಗಳಿಗೆ ನೋವುಂಟು ಮಾಡಲಾಗಿದೆ ಎಂದು ಆರೋಪಿಸಿ ಕೋರ್ಟ್ ಮೆಟ್ಟಿಲೇರಲಾಗಿತ್ತು. ಈ ಸಂಬಂಧ ಕೋರ್ಟ್ ಪೊಲೀಸರಿಗೆ ತನಿಖೆಗೆ ಆದೇಶಿಸಿದ್ದು ಕೇಸು ದಾಖಲಿಸಿಕೊಳ್ಳುವಂತೆ ಸೂಚಿಸಿದೆ.
ವಿವಿಧ ಬ್ರಾಹ್ಮಣ ಸಂಘಟನೆಗಳು ನಟ ಮೋಹನ್ ಬಾಬು ಅವರ ಹೈದರಾಬಾದಿನ ಫಿಲಂ ನಗರ್ ನಲ್ಲಿರುವ ನಿವಾಸದ ಮುಂದೆ ಪ್ರತಿಭಟನೆ ನಡೆಸಿದವು. 'ದೇನಿಕೈನಾ ರೆಡಿ' ಚಿತ್ರವನ್ನು ನಿಷೇಧಿಸಬೇಕು ಎಂದು ಆಗ್ರಹಿಸಿದವು.
ಚಿತ್ರದಲ್ಲಿ ಬ್ರಾಹ್ಮಣ ಸಮುದಾಯದ ಪುರೋಹಿತರನ್ನು ತಮಾಷೆಯಾಗಿ, ಲೇವಡಿ ಮಾಡಿ ತೋರಿಸಲಾಗಿದೆ. ಮೋಹನ್ ಬಾಬು ಅವರು ಬ್ರಾಹ್ಮಣರ ಕ್ಷಮೆಯಾಚಿಸಬೇಕು. ಚಿತ್ರದಲ್ಲಿನ ಆಕ್ಷೇಪಾರ್ಹ ದೃಶ್ಯಗಳನ್ನು ತೆಗೆಯಬೇಕು ಎಂದು ಆಗ್ರಹಿಸಿದೆ. (ಪಿಟಿಐ)