Don't Miss!
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇನೋವೆಟಿವ್ ಫಿಲ್ಮ್ ಸಿಟಿಯಲ್ಲಿ ನಡೆಯಲಿದೆ ಅಂತರಾಷ್ಟ್ರೀಯ ಚಿತ್ರೋತ್ಸವ
ಸದ್ಯ 'ಬಿಗ್ ಬಾಸ್' ವೇದಿಕೆ ಆಗಿರುವ ಬಿಡದಿಯ ಇನೋವೆಟಿವ್ ಫಿಲ್ಮ್ ಸಿಟಿಯಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಕಾರ್ಯಕ್ರಮ ನಡೆಯಲಿದೆ. ಮೂರು ದಿನಗಳ ನಡೆಯಲಿರುವ ಈ ಫಿಲ್ಮ್ ಫೆಸ್ಟಿವಲ್ ಚಿತ್ರರಸಿಕರಿಗೆ ಸಿನಿಔತಣ ನೀಡಲಿದೆ.
ಎಪ್ರಿಲ್ ತಿಂಗಳ 14 15 ಮತ್ತು 16 ರಂದು ಇನೋವೆಟಿವ್ ಫಿಲ್ಮ್ ಸಿಟಿಯಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ನಡೆಯಲಿದ್ದು ಇದರ ಹಿನ್ನೆಲೆಯಲ್ಲಿ ನಿನ್ನೆ (ಭಾನುವಾರ) ರಾತ್ರಿ ಇನೋವೆಟಿವ್ ಫಿಲ್ಮ್ ಸಿಟಿಯಲ್ಲಿ ಚಿತ್ರಸಂತೆಯ ಟೀಸರ್ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಇನೋವೆಟಿವ್ ಫಿಲ್ಮ್ ಸಿಟಿಯ ಎಂ.ಡಿ ಸರವಣ ಪ್ರಸಾದ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟಿ ಹಾಗೂ ಚಿತ್ರೋತ್ಸವದ ಅಂಬಾಸೆಡರ್ ಮಾಲಾಶ್ರೀ, ಕರ್ನಾಟಕ ಚಲನಚಿತ್ರ ಅಕಾಡಮಿ ಅಧ್ಯಕ್ಷ ಡಾ.ರಾಜೇಂದ್ರಸಿಂಗ್ ಬಾಬು ಪಾಲ್ಗೊಂಡಿದ್ದರು.
ಇದೇ ವೇಳೆ ಮಾತನಾಡಿದ ಇನೋವೆಟಿವ್ ಫಿಲ್ಮ್ ಸಿಟಿಯ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಸರವಣ ಪ್ರಸಾದ್, ''ಚಿತ್ರೋತ್ಸವದಲ್ಲಿ 9 ರಾಷ್ಟ್ರಗಳ 90 ಚಿತ್ರಗಳ ಜೊತೆಗೆ ಪ್ರತ್ಯೇಕವಾಗಿ ಮಕ್ಕಳ ಚಿತ್ರಗಳು ಸೇರಿದಂತೆ ಒಟ್ಟಾರೆ 160 ಚಿತ್ರಗಳು ಪ್ರದರ್ಶನಗೊಳ್ಳಲಿವೆ. ಕೆನಡಾ, ಭಾರತ, ಶ್ರೀಲಂಕಾ, ಅರ್ಜೆಂಟೈನಾ, ನ್ಯೂಜಿಲೆಂಡ್, ಫ್ರಾನ್ಸ್, ಜರ್ಮನಿ, ಹಾಲಿವುಡ್ ಭಾಷೆಯ ಚಿತ್ರಗಳು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿದ್ದು, ಎಲ್ಲಾ ವಿಭಾಗಗಳಿಂದ ಒಟ್ಟು ಸುಮಾರು 50 ಲಕ್ಷ ರೂ.ಗಳ ಬಹುಮಾನ ನೀಡಲಾಗುತ್ತದೆ'' ಎಂದು ತಿಳಿಸಿದರು.
ಡಾ. ರಾಜೇಂದ್ರಸಿಂಗ್ ಬಾಬು ಮಾತನಾಡಿ ''ಪ್ರಪಂಚದ ಎಲ್ಲಾ ಭಾಗದ ಅಯಾ ಪ್ರದೇಶದ ಸಂಸ್ಕೃತಿ ಮತ್ತು ಅಲ್ಲಿನ ಸಮಾಜಿಕ, ಮತ್ತು ರಾಜಕೀಯದ ರೀತಿ ನೀತಿಗಳು ಚಿತ್ರಸಂತೆಯಲ್ಲಿ ಅನಾವರಣ ಮಾಡಿಸುವ ಮೂಲಕ ಕರುನಾಡಿನ ಜನಕ್ಕೆ ಅದನ್ನ ಪರಿಚಯಿಸುವ ದೃಷ್ಠಿಯಿಂದ ಈ ಚಿತ್ರೋತ್ಸವ ಆಯೋಜನೆ ಮಾಡಲಾಗುತ್ತಿದೆ. ಇಂತಹ ಚಿತ್ರೋತ್ಸವ ಭಾರತದಲ್ಲಿ ಇನ್ನೆಲ್ಲೂ ಕಾಣಲು ಸಾಧ್ಯವಿಲ್ಲ'' ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿದ್ದ ನಟ ಕಿಚ್ಚ ಸುದೀಪ್, ಹಿರಿಯ ನಟ ಅಂಬರೀಷ್ ಸೇರಿದಂತೆ ಹಲವರು ಗೈರು ಹಾಜರಾಗಿದ್ದರು. ಒಟ್ಟಾರೆ ಚಿತ್ರೋತ್ಸವದ ಉದ್ದೇಶ ಸರಿ ಇದ್ದರೂ ಟೀಸರ್ ಬಿಡುಗಡೆ ಬರಬೇಕಿದ್ದ ಗಣ್ಯರ ಗೈರು ಹಾಗೂ ಸಮಯಕ್ಕೆ ಸರಿಯಾಗಿ ಕಾರ್ಯಕ್ರಮ ನಡೆಯದಿರುವುದು ಮಾತ್ರ ನೆರೆದಿದ್ದವರಲ್ಲಿ ಬೇಸರ ಮೂಡಿಸಿತ್ತು.