Just In
- 59 min ago
'ಈ ಜಗತ್ತನ್ನು ಉಳಿಸಲು ವನ್ಯಜೀವಿಗಳನ್ನು ಉಳಿಸಿ'- ನಟ ದರ್ಶನ್
- 1 hr ago
ಕನ್ನಡದ ಮೊದಲ ವಾಕ್ಚಿತ್ರ 'ಸತಿ ಸುಲೋಚನ'ಕ್ಕೆ 88ನೇ ವರ್ಷದ ಸಂಭ್ರಮ
- 1 hr ago
ಬಾಲಿವುಡ್ ನಟಿ ತಾಪ್ಸಿ ಪನ್ನು ಮತ್ತು ಅನುರಾಗ್ ಕಶ್ಯಪ್ ಮನೆ ಮೇಲೆ ಐಟಿ ದಾಳಿ
- 1 hr ago
ಕನಸಿನ 'ಮಹಾಭಾರತ' ಚಿತ್ರದಿಂದ ಹಿಂದೆ ಸರಿದ ಆಮೀರ್: ವರ್ಷಗಳಿಂದ ಸಂಶೋಧನೆ ನಡೆಸಿ ಸಿನಿಮಾ ಕೈಬಿಟ್ಟಿದ್ದೇಕೆ?
Don't Miss!
- News
ಹಿರಿಯೂರು ಕ್ಷೇತ್ರದಿಂದ ಜನಾರ್ದನ ರೆಡ್ಡಿ ಚುನಾವಣೆಗೆ ಸ್ಪರ್ಧೆ?
- Automobiles
ಲೋ ಫ್ಲೋರ್ ಎಲೆಕ್ಟ್ರಿಕ್ ಬಸ್ಗಳ ಸಂಚಾರಕ್ಕೆ ಚಾಲನೆ ನೀಡಿದ ಮುಖ್ಯಮಂತ್ರಿ
- Sports
ಫಿಟ್ನೆಸ್ ಟೆಸ್ಟ್ನಲ್ಲಿ ಫೇಲ್ ಆದ ತೆವಾಟಿಯಾ: ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗೆ ಅನುಮಾನ!
- Education
NDRI Recruitment 2021: ಎಕ್ಸಿಕ್ಯುಟಿವ್ ಮತ್ತು ಸಿಇಓ ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
Wome's Day Special: ಮಿಶೆಲ್ ಒಬಾಮ ಹೇಳಿದ ಈ 7 ವಿಷಯ ಪಾಲಿಸಿದರೆ ಆ ಮಹಿಳೆಗೆ ಸಕ್ಸಸ್ ಗ್ಯಾರಂಟಿ
- Finance
ದೇಶದ ಪ್ರಮುಖ ನಗರಗಳಲ್ಲಿ ಮಾರ್ಚ್ 03ರ ಪೆಟ್ರೋಲ್, ಡೀಸೆಲ್ ದರ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
ಇನೋವೆಟಿವ್ ಫಿಲ್ಮ್ ಸಿಟಿಯಲ್ಲಿ ನಡೆಯಲಿದೆ ಅಂತರಾಷ್ಟ್ರೀಯ ಚಿತ್ರೋತ್ಸವ
ಸದ್ಯ 'ಬಿಗ್ ಬಾಸ್' ವೇದಿಕೆ ಆಗಿರುವ ಬಿಡದಿಯ ಇನೋವೆಟಿವ್ ಫಿಲ್ಮ್ ಸಿಟಿಯಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಕಾರ್ಯಕ್ರಮ ನಡೆಯಲಿದೆ. ಮೂರು ದಿನಗಳ ನಡೆಯಲಿರುವ ಈ ಫಿಲ್ಮ್ ಫೆಸ್ಟಿವಲ್ ಚಿತ್ರರಸಿಕರಿಗೆ ಸಿನಿಔತಣ ನೀಡಲಿದೆ.
ಎಪ್ರಿಲ್ ತಿಂಗಳ 14 15 ಮತ್ತು 16 ರಂದು ಇನೋವೆಟಿವ್ ಫಿಲ್ಮ್ ಸಿಟಿಯಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ನಡೆಯಲಿದ್ದು ಇದರ ಹಿನ್ನೆಲೆಯಲ್ಲಿ ನಿನ್ನೆ (ಭಾನುವಾರ) ರಾತ್ರಿ ಇನೋವೆಟಿವ್ ಫಿಲ್ಮ್ ಸಿಟಿಯಲ್ಲಿ ಚಿತ್ರಸಂತೆಯ ಟೀಸರ್ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಇನೋವೆಟಿವ್ ಫಿಲ್ಮ್ ಸಿಟಿಯ ಎಂ.ಡಿ ಸರವಣ ಪ್ರಸಾದ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟಿ ಹಾಗೂ ಚಿತ್ರೋತ್ಸವದ ಅಂಬಾಸೆಡರ್ ಮಾಲಾಶ್ರೀ, ಕರ್ನಾಟಕ ಚಲನಚಿತ್ರ ಅಕಾಡಮಿ ಅಧ್ಯಕ್ಷ ಡಾ.ರಾಜೇಂದ್ರಸಿಂಗ್ ಬಾಬು ಪಾಲ್ಗೊಂಡಿದ್ದರು.
ಇದೇ ವೇಳೆ ಮಾತನಾಡಿದ ಇನೋವೆಟಿವ್ ಫಿಲ್ಮ್ ಸಿಟಿಯ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಸರವಣ ಪ್ರಸಾದ್, ''ಚಿತ್ರೋತ್ಸವದಲ್ಲಿ 9 ರಾಷ್ಟ್ರಗಳ 90 ಚಿತ್ರಗಳ ಜೊತೆಗೆ ಪ್ರತ್ಯೇಕವಾಗಿ ಮಕ್ಕಳ ಚಿತ್ರಗಳು ಸೇರಿದಂತೆ ಒಟ್ಟಾರೆ 160 ಚಿತ್ರಗಳು ಪ್ರದರ್ಶನಗೊಳ್ಳಲಿವೆ. ಕೆನಡಾ, ಭಾರತ, ಶ್ರೀಲಂಕಾ, ಅರ್ಜೆಂಟೈನಾ, ನ್ಯೂಜಿಲೆಂಡ್, ಫ್ರಾನ್ಸ್, ಜರ್ಮನಿ, ಹಾಲಿವುಡ್ ಭಾಷೆಯ ಚಿತ್ರಗಳು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿದ್ದು, ಎಲ್ಲಾ ವಿಭಾಗಗಳಿಂದ ಒಟ್ಟು ಸುಮಾರು 50 ಲಕ್ಷ ರೂ.ಗಳ ಬಹುಮಾನ ನೀಡಲಾಗುತ್ತದೆ'' ಎಂದು ತಿಳಿಸಿದರು.
ಡಾ. ರಾಜೇಂದ್ರಸಿಂಗ್ ಬಾಬು ಮಾತನಾಡಿ ''ಪ್ರಪಂಚದ ಎಲ್ಲಾ ಭಾಗದ ಅಯಾ ಪ್ರದೇಶದ ಸಂಸ್ಕೃತಿ ಮತ್ತು ಅಲ್ಲಿನ ಸಮಾಜಿಕ, ಮತ್ತು ರಾಜಕೀಯದ ರೀತಿ ನೀತಿಗಳು ಚಿತ್ರಸಂತೆಯಲ್ಲಿ ಅನಾವರಣ ಮಾಡಿಸುವ ಮೂಲಕ ಕರುನಾಡಿನ ಜನಕ್ಕೆ ಅದನ್ನ ಪರಿಚಯಿಸುವ ದೃಷ್ಠಿಯಿಂದ ಈ ಚಿತ್ರೋತ್ಸವ ಆಯೋಜನೆ ಮಾಡಲಾಗುತ್ತಿದೆ. ಇಂತಹ ಚಿತ್ರೋತ್ಸವ ಭಾರತದಲ್ಲಿ ಇನ್ನೆಲ್ಲೂ ಕಾಣಲು ಸಾಧ್ಯವಿಲ್ಲ'' ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿದ್ದ ನಟ ಕಿಚ್ಚ ಸುದೀಪ್, ಹಿರಿಯ ನಟ ಅಂಬರೀಷ್ ಸೇರಿದಂತೆ ಹಲವರು ಗೈರು ಹಾಜರಾಗಿದ್ದರು. ಒಟ್ಟಾರೆ ಚಿತ್ರೋತ್ಸವದ ಉದ್ದೇಶ ಸರಿ ಇದ್ದರೂ ಟೀಸರ್ ಬಿಡುಗಡೆ ಬರಬೇಕಿದ್ದ ಗಣ್ಯರ ಗೈರು ಹಾಗೂ ಸಮಯಕ್ಕೆ ಸರಿಯಾಗಿ ಕಾರ್ಯಕ್ರಮ ನಡೆಯದಿರುವುದು ಮಾತ್ರ ನೆರೆದಿದ್ದವರಲ್ಲಿ ಬೇಸರ ಮೂಡಿಸಿತ್ತು.