Don't Miss!
- Automobiles ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- News Bengaluru Rain: ಸುದೀರ್ಘ ಕಾಯುವಿಕೆ ಅಂತ್ಯ: ಬೆಂಗಳೂರಿಗೆ ಎಂಟ್ರಿ ಕೊಟ್ಟ ಮಳೆ; ವಿಡಿಯೋ ನೋಡಿ
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Technology oneplus: ಒನ್ಪ್ಲಸ್ನಿಂದ ಫ್ಲ್ಯಾಗ್ಶಿಪ್ ಕ್ಯಾಮೆರಾ ಸೌಲಭ್ಯದೊಂದಿಗೆ ಫ್ಲಿಪ್ ಫೋನ್!
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇನೋವೆಟಿವ್ ಫಿಲ್ಮ್ ಸಿಟಿಯಲ್ಲಿ ನಡೆಯಲಿದೆ ಅಂತರಾಷ್ಟ್ರೀಯ ಚಿತ್ರೋತ್ಸವ
ಸದ್ಯ 'ಬಿಗ್ ಬಾಸ್' ವೇದಿಕೆ ಆಗಿರುವ ಬಿಡದಿಯ ಇನೋವೆಟಿವ್ ಫಿಲ್ಮ್ ಸಿಟಿಯಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ಕಾರ್ಯಕ್ರಮ ನಡೆಯಲಿದೆ. ಮೂರು ದಿನಗಳ ನಡೆಯಲಿರುವ ಈ ಫಿಲ್ಮ್ ಫೆಸ್ಟಿವಲ್ ಚಿತ್ರರಸಿಕರಿಗೆ ಸಿನಿಔತಣ ನೀಡಲಿದೆ.
ಎಪ್ರಿಲ್ ತಿಂಗಳ 14 15 ಮತ್ತು 16 ರಂದು ಇನೋವೆಟಿವ್ ಫಿಲ್ಮ್ ಸಿಟಿಯಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವದ ನಡೆಯಲಿದ್ದು ಇದರ ಹಿನ್ನೆಲೆಯಲ್ಲಿ ನಿನ್ನೆ (ಭಾನುವಾರ) ರಾತ್ರಿ ಇನೋವೆಟಿವ್ ಫಿಲ್ಮ್ ಸಿಟಿಯಲ್ಲಿ ಚಿತ್ರಸಂತೆಯ ಟೀಸರ್ ಬಿಡುಗಡೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಇನೋವೆಟಿವ್ ಫಿಲ್ಮ್ ಸಿಟಿಯ ಎಂ.ಡಿ ಸರವಣ ಪ್ರಸಾದ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ನಟಿ ಹಾಗೂ ಚಿತ್ರೋತ್ಸವದ ಅಂಬಾಸೆಡರ್ ಮಾಲಾಶ್ರೀ, ಕರ್ನಾಟಕ ಚಲನಚಿತ್ರ ಅಕಾಡಮಿ ಅಧ್ಯಕ್ಷ ಡಾ.ರಾಜೇಂದ್ರಸಿಂಗ್ ಬಾಬು ಪಾಲ್ಗೊಂಡಿದ್ದರು.
ಇದೇ ವೇಳೆ ಮಾತನಾಡಿದ ಇನೋವೆಟಿವ್ ಫಿಲ್ಮ್ ಸಿಟಿಯ ಮುಖ್ಯ ವ್ಯವಸ್ಥಾಪಕ ನಿರ್ದೇಶಕ ಸರವಣ ಪ್ರಸಾದ್, ''ಚಿತ್ರೋತ್ಸವದಲ್ಲಿ 9 ರಾಷ್ಟ್ರಗಳ 90 ಚಿತ್ರಗಳ ಜೊತೆಗೆ ಪ್ರತ್ಯೇಕವಾಗಿ ಮಕ್ಕಳ ಚಿತ್ರಗಳು ಸೇರಿದಂತೆ ಒಟ್ಟಾರೆ 160 ಚಿತ್ರಗಳು ಪ್ರದರ್ಶನಗೊಳ್ಳಲಿವೆ. ಕೆನಡಾ, ಭಾರತ, ಶ್ರೀಲಂಕಾ, ಅರ್ಜೆಂಟೈನಾ, ನ್ಯೂಜಿಲೆಂಡ್, ಫ್ರಾನ್ಸ್, ಜರ್ಮನಿ, ಹಾಲಿವುಡ್ ಭಾಷೆಯ ಚಿತ್ರಗಳು ಚಿತ್ರೋತ್ಸವದಲ್ಲಿ ಪ್ರದರ್ಶನಗೊಳ್ಳಲಿದ್ದು, ಎಲ್ಲಾ ವಿಭಾಗಗಳಿಂದ ಒಟ್ಟು ಸುಮಾರು 50 ಲಕ್ಷ ರೂ.ಗಳ ಬಹುಮಾನ ನೀಡಲಾಗುತ್ತದೆ'' ಎಂದು ತಿಳಿಸಿದರು.
ಡಾ. ರಾಜೇಂದ್ರಸಿಂಗ್ ಬಾಬು ಮಾತನಾಡಿ ''ಪ್ರಪಂಚದ ಎಲ್ಲಾ ಭಾಗದ ಅಯಾ ಪ್ರದೇಶದ ಸಂಸ್ಕೃತಿ ಮತ್ತು ಅಲ್ಲಿನ ಸಮಾಜಿಕ, ಮತ್ತು ರಾಜಕೀಯದ ರೀತಿ ನೀತಿಗಳು ಚಿತ್ರಸಂತೆಯಲ್ಲಿ ಅನಾವರಣ ಮಾಡಿಸುವ ಮೂಲಕ ಕರುನಾಡಿನ ಜನಕ್ಕೆ ಅದನ್ನ ಪರಿಚಯಿಸುವ ದೃಷ್ಠಿಯಿಂದ ಈ ಚಿತ್ರೋತ್ಸವ ಆಯೋಜನೆ ಮಾಡಲಾಗುತ್ತಿದೆ. ಇಂತಹ ಚಿತ್ರೋತ್ಸವ ಭಾರತದಲ್ಲಿ ಇನ್ನೆಲ್ಲೂ ಕಾಣಲು ಸಾಧ್ಯವಿಲ್ಲ'' ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕಿದ್ದ ನಟ ಕಿಚ್ಚ ಸುದೀಪ್, ಹಿರಿಯ ನಟ ಅಂಬರೀಷ್ ಸೇರಿದಂತೆ ಹಲವರು ಗೈರು ಹಾಜರಾಗಿದ್ದರು. ಒಟ್ಟಾರೆ ಚಿತ್ರೋತ್ಸವದ ಉದ್ದೇಶ ಸರಿ ಇದ್ದರೂ ಟೀಸರ್ ಬಿಡುಗಡೆ ಬರಬೇಕಿದ್ದ ಗಣ್ಯರ ಗೈರು ಹಾಗೂ ಸಮಯಕ್ಕೆ ಸರಿಯಾಗಿ ಕಾರ್ಯಕ್ರಮ ನಡೆಯದಿರುವುದು ಮಾತ್ರ ನೆರೆದಿದ್ದವರಲ್ಲಿ ಬೇಸರ ಮೂಡಿಸಿತ್ತು.