Don't Miss!
- Finance mukesh ambaniಗೆ 67 ವರ್ಷ, ಅವರು ಹೊಂದಿರುವ ದುಬಾರಿ ವಸ್ತುಗಳು ಏನೇನು ಗೊತ್ತಾ?
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Automobiles ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿಂಬು ಹಾಡಿದ ಮೊದಲ ಕನ್ನಡ ಹಾಡು ಇದೇ ತಿಂಗಳು ಬಿಡುಗಡೆ
ಕಾಲಿವುಡ್ ನಟ ಸಿಂಬು ಗಾಯಕನಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಕಾವೇರಿ ನದಿ ನೀರು ವಿಚಾರದಲ್ಲಿ ತನ್ನ ಹೇಳಿಕೆ ಮೂಲಕ ಕನ್ನಡಿಗರ ಪ್ರೀತಿಗಳಿಸಿದ್ದ ಸಿಂಬು 'ಇರುದೆಲ್ಲವ ಬಿಟ್ಟು ಇರುವೆ ಬಿಟ್ಟುಕೊಳ್ಳುವುದೇ ಜೀವನ' ಸಿನಿಮಾದ ಹಾಡಿನ ಮೂಲಕ ಕನ್ನಡಕ್ಕೆ ಕಾಲಿಟ್ಟಿದ್ದಾರೆ.
ಅಂದಹಾಗೆ, ಸಿಂಬು ಹಾಡಿರುವ ಮೊದಲ ಕನ್ನಡ ಹಾಡು ಇದೇ ತಿಂಗಳು 25ಕ್ಕೆ ಬಿಡುಗಡೆಯಾಗಲಿದೆ. ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮ ಅಂದು ನಡೆಯಲಿದೆ. ಸದ್ಯಕ್ಕೆ ಸಿಂಬು ಹಾಡಿರುವ 'ಕುಣಿರಿ ತಕಥ ಕುಣಿಸಿ ತಕಥೈ ಕುಣಿರಿ ತಕಥ ಕುಣಿಸಿ ತಕಥೈ...''ಹಾಡಿನ ಟೀಸರ್ ಸದ್ದು ಮಾಡುತ್ತಿದೆ.
ತಮಿಳು ನಟ ಸಿಂಬುಗೆ ಥ್ಯಾಂಕ್ಸ್ ಹೇಳಿದ ಮೇಘನಾ ರಾಜ್
ಇನ್ನು ಈ ಹಾಡಿನ ಸಾಹಿತ್ಯವನ್ನು ವಿ.ನಾಗೇಂದ್ರ ಪ್ರಸಾದ್ ಬರೆದಿದ್ದು, ವಿ ಶ್ರೀಧರ್ ಸಂಭ್ರಮ್ ಸಂಗೀತ ನೀಡಿದ್ದಾರೆ. ಕಾಂತ ಕನ್ನಲಿ ನಿರ್ದೇಶನದ ಎರಡನೇ ಸಿನಿಮಾ ಇದಾಗಿದೆ. Bilwa Creations ಬ್ಯಾನರ್ ನಲ್ಲಿ ಚಿತ್ರ ನಿರ್ಮಾಣವಾಗಿದ್ದು, ದೇವರಾಜ್ ದಾವಣಗೆರೆ ಬಂಡವಾಳ ಹಾಕಿದ್ದಾರೆ.
'ಇರುದೆಲ್ಲವ ಬಿಟ್ಟು ಇರುವೆ ಬಿಟ್ಟುಕೊಳ್ಳುವುದೇ ಜೀವನ' ಸಿನಿಮಾ ಈಗಾಗಲೇ ಅನೇಕ ವಿಚಾರಗಳಿಗೆ ದೊಡ್ಡ ಸುದ್ದಿ ಮಾಡಿದೆ. ನಟಿ ಮೇಘನಾ ರಾಜ್ ಈ ಚಿತ್ರದ ನಾಯಕಿ ಆಗಿದ್ದಾರೆ. ಅಲ್ಲದೆ ಮೇಘನಾ ನನ್ನ ಕೆರಿಯರ್ ನಲ್ಲಿ ಬಂದಿರುವ ಬೆಸ್ಟ್ ಸಿನಿಮಾ ಇದು ಅಂತ ಹೇಳಿಕೊಂಡಿದ್ದಾರೆ.
'ರಂಗಿತರಂಗ' ಚಿತ್ರಕ್ಕೆ ಕೆಲಸ ಮಾಡಿದ್ದ ಸಿನಿಮಾಟೋಗ್ರಾಫರ್ ವಿಲಿಯಮ್ ಡೇವಿದ್ ಈ ಚಿತ್ರದ ದೃಶ್ಯಗಳನ್ನು ಸೆರೆ ಹಿಡಿದಿದ್ದಾರೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಮುಗಿದಿದೆ. ಬೆಂಗಳೂರು, ಊಟಿ, ಮಂಗಳೂರು ನಲ್ಲಿ 45 ದಿನ ಚಿತ್ರೀಕರಣ ಮಾಡಲಾಗಿದೆ. ಅಚ್ಚುತ್ ಕುಮಾರ್ ಸಿನಿಮಾದಲ್ಲಿ ಒಂದು ವಿಶೇಷ ಪಾತ್ರ ಮಾಡಿದ್ದಾರೆ. 'ಡ್ರಾಮಾ ಜೂನಿಯರ್ಸ್' ರನ್ನರ್ ಅಪ್ ಅಭಿಶೇಕ್ ರಾಯನ್ ಸಿನಿಮಾದಲ್ಲಿ ನಟಿಸಿದ್ದಾರೆ.