Don't Miss!
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- News ಮಂಡ್ಯದ ‘ಹಲವು ಸುಮಲತಾ’ ತಂತ್ರ ಬೆಂಗಳೂರು ಗ್ರಾಮಾಂತದಲ್ಲೂ ಬಂತಾ? ಮತ್ತೊಬ್ಬ ಡಾ ಸಿಎನ್ ಮಂಜುನಾಥ್ ಕಣಕ್ಕೆ!
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಿಂಬು ಹಾಡಿದ ಮೊದಲ ಕನ್ನಡ ಹಾಡು ಇದೇ ತಿಂಗಳು ಬಿಡುಗಡೆ
ಕಾಲಿವುಡ್ ನಟ ಸಿಂಬು ಗಾಯಕನಾಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ. ಕಾವೇರಿ ನದಿ ನೀರು ವಿಚಾರದಲ್ಲಿ ತನ್ನ ಹೇಳಿಕೆ ಮೂಲಕ ಕನ್ನಡಿಗರ ಪ್ರೀತಿಗಳಿಸಿದ್ದ ಸಿಂಬು 'ಇರುದೆಲ್ಲವ ಬಿಟ್ಟು ಇರುವೆ ಬಿಟ್ಟುಕೊಳ್ಳುವುದೇ ಜೀವನ' ಸಿನಿಮಾದ ಹಾಡಿನ ಮೂಲಕ ಕನ್ನಡಕ್ಕೆ ಕಾಲಿಟ್ಟಿದ್ದಾರೆ.
ಅಂದಹಾಗೆ, ಸಿಂಬು ಹಾಡಿರುವ ಮೊದಲ ಕನ್ನಡ ಹಾಡು ಇದೇ ತಿಂಗಳು 25ಕ್ಕೆ ಬಿಡುಗಡೆಯಾಗಲಿದೆ. ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮ ಅಂದು ನಡೆಯಲಿದೆ. ಸದ್ಯಕ್ಕೆ ಸಿಂಬು ಹಾಡಿರುವ 'ಕುಣಿರಿ ತಕಥ ಕುಣಿಸಿ ತಕಥೈ ಕುಣಿರಿ ತಕಥ ಕುಣಿಸಿ ತಕಥೈ...''ಹಾಡಿನ ಟೀಸರ್ ಸದ್ದು ಮಾಡುತ್ತಿದೆ.
ತಮಿಳು ನಟ ಸಿಂಬುಗೆ ಥ್ಯಾಂಕ್ಸ್ ಹೇಳಿದ ಮೇಘನಾ ರಾಜ್
ಇನ್ನು ಈ ಹಾಡಿನ ಸಾಹಿತ್ಯವನ್ನು ವಿ.ನಾಗೇಂದ್ರ ಪ್ರಸಾದ್ ಬರೆದಿದ್ದು, ವಿ ಶ್ರೀಧರ್ ಸಂಭ್ರಮ್ ಸಂಗೀತ ನೀಡಿದ್ದಾರೆ. ಕಾಂತ ಕನ್ನಲಿ ನಿರ್ದೇಶನದ ಎರಡನೇ ಸಿನಿಮಾ ಇದಾಗಿದೆ. Bilwa Creations ಬ್ಯಾನರ್ ನಲ್ಲಿ ಚಿತ್ರ ನಿರ್ಮಾಣವಾಗಿದ್ದು, ದೇವರಾಜ್ ದಾವಣಗೆರೆ ಬಂಡವಾಳ ಹಾಕಿದ್ದಾರೆ.
'ಇರುದೆಲ್ಲವ ಬಿಟ್ಟು ಇರುವೆ ಬಿಟ್ಟುಕೊಳ್ಳುವುದೇ ಜೀವನ' ಸಿನಿಮಾ ಈಗಾಗಲೇ ಅನೇಕ ವಿಚಾರಗಳಿಗೆ ದೊಡ್ಡ ಸುದ್ದಿ ಮಾಡಿದೆ. ನಟಿ ಮೇಘನಾ ರಾಜ್ ಈ ಚಿತ್ರದ ನಾಯಕಿ ಆಗಿದ್ದಾರೆ. ಅಲ್ಲದೆ ಮೇಘನಾ ನನ್ನ ಕೆರಿಯರ್ ನಲ್ಲಿ ಬಂದಿರುವ ಬೆಸ್ಟ್ ಸಿನಿಮಾ ಇದು ಅಂತ ಹೇಳಿಕೊಂಡಿದ್ದಾರೆ.
'ರಂಗಿತರಂಗ' ಚಿತ್ರಕ್ಕೆ ಕೆಲಸ ಮಾಡಿದ್ದ ಸಿನಿಮಾಟೋಗ್ರಾಫರ್ ವಿಲಿಯಮ್ ಡೇವಿದ್ ಈ ಚಿತ್ರದ ದೃಶ್ಯಗಳನ್ನು ಸೆರೆ ಹಿಡಿದಿದ್ದಾರೆ. ಈಗಾಗಲೇ ಸಿನಿಮಾದ ಚಿತ್ರೀಕರಣ ಮುಗಿದಿದೆ. ಬೆಂಗಳೂರು, ಊಟಿ, ಮಂಗಳೂರು ನಲ್ಲಿ 45 ದಿನ ಚಿತ್ರೀಕರಣ ಮಾಡಲಾಗಿದೆ. ಅಚ್ಚುತ್ ಕುಮಾರ್ ಸಿನಿಮಾದಲ್ಲಿ ಒಂದು ವಿಶೇಷ ಪಾತ್ರ ಮಾಡಿದ್ದಾರೆ. 'ಡ್ರಾಮಾ ಜೂನಿಯರ್ಸ್' ರನ್ನರ್ ಅಪ್ ಅಭಿಶೇಕ್ ರಾಯನ್ ಸಿನಿಮಾದಲ್ಲಿ ನಟಿಸಿದ್ದಾರೆ.