Don't Miss!
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- News India Unemployment: ದೇಶದಲ್ಲಿ ಯುವ ನಿರುದ್ಯೋಗಿಗಳ ಸಂಖ್ಯೆ ಹೆಚ್ಚಳ: ಬೆಚ್ಚಿಬೀಳಿಸುವ ವರದಿ ಬಹಿರಂಗ!
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Automobiles ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಚಿತ್ರರಂಗದ ಮುಂದಾಳತ್ವ ವಹಿಸಿಕೊಳ್ತಾರಾ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್?
ಸ್ಯಾಂಡಲ್ ಗೆ ಸಮರ್ಥ ನಾಯಕನ ಕೊರತೆ ಇದೆ ಎನ್ನುವ ಮಾತು ಕೇಳಿ ಬರುತ್ತಿದೆ. ಡಾ.ರಾಜ್ ಕುಮಾರ್ ಮತ್ತು ಅಂಬರೀಶ್ ನಂತರ ಚಿತ್ರರಂಗವನ್ನು ಯಾರು ಮುನ್ನಡೆಸುತ್ತಾರೆ, ಯಾವುದೆ ಸಮಸ್ಯೆ ಬಂದರೇ ಧ್ವನಿ ಎತ್ತುವವರ್ಯಾರು ಎನ್ನುವ ಪ್ರಶ್ನೆ ಆಗಾಗ ಉಧ್ಭವವಾಗುತ್ತಿರುತ್ತೆ. ಅದರಲ್ಲೂ ಕೊರಾನಾ ಸಂಕಷ್ಟದ ಈ ಸ್ಥಿತಿಯಲ್ಲಿ ಕನ್ನಡ ಚಿತ್ರರಂಗದ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ.
Recommended Video
ಕಂಗೆಟ್ಟಿರುವ ಚಿತ್ರರಂಗಕ್ಕೆ ಪುನಶ್ಚೇತನದ ಅಗತ್ಯವಿದೆ. ಈ ನಿಟ್ಟಿನಲ್ಲಿ ಚಿತ್ರರಂಗದ ಪ್ರಮುಖರು ಶಿವರಾಜ್ ಕುಮಾರ್ ಮನೆಯಲ್ಲಿಸಭೆ ಸೇರುತ್ತಿದ್ದಾರೆ. ಚಿತ್ರರಂಗಕ್ಕೆ ಏನೆ ಸಮಸ್ಯೆ ಬಂದರೂ ಮುಂದಾಳತ್ವ ವಹಿಸುವಂತೆ ಶಿವರಾಜ್ ಕುಮಾರ್ ಅವರಿಗೆ ಮನವಿ ಮಾಡಲಿದ್ದಾರೆ.
ಶಿವರಾಜ್ ಕುಮಾರ್ ಸಂದರ್ಶನ: ಹುಟ್ಟುಹಬ್ಬ, ಸಿನಿಮಾ ಮತ್ತು ಕೊರೊನಾ
ಶಿವರಾಜ್ ಕುಮಾರ್ ಮೂರು ದಶಕಗಳಿಗೂ ಹೆಚ್ಚು ಕಾಲ ಚಿತ್ರರಂಗದಲ್ಲಿದ್ದಾರೆ. ಎಲ್ಲರ ಜೊತೆಯೂ ಉತ್ತಮ ಬಾಂಧವ್ಯ ಇಟ್ಟುಕೊಂಡಿರುವ ಶಿವರಾಜ್ ಕುಮಾರ್ ಅವರಿಗೆ ಲೀಡರ್ ಪಟ್ಟ ಕಟ್ಟಲು ಪ್ರಯತ್ನ ನಡೆಯುತ್ತಿದೆ. ಕನ್ನಡ ಚಿತ್ರರಂಗಮಾತ್ರವಲ್ಲದೆ ಬೇರೆ ಬೇರೆ ಚಿತ್ರರಂಗದಲ್ಲಿಯೂ ಶಿವಣ್ಣ ಪರಿಚಿತರು. ಹಾಗಾಗಿ ಶಿವಣ್ಣ ಅವರೇ ಸ್ಯಾಂಡಲ್ ವುಡ್ ನ ಲೀಡಲ್ ಶಿಪ್ ವಹಿಸಿಕೊಳ್ಳಲಿ ಎನ್ನುವುದು ಪ್ರಮುಖ ಒತ್ತಾಯ.
ಜುಲೈ 24 ಶುಕ್ರವಾರ ಕಲಾವಿದರು, ತಂತ್ರಜ್ಞರು, ನಿರ್ಮಾಪಕರು, ಚಿತ್ರಮಂದಿರದ ಮಾಲಿಕರು ಮತ್ತು ವಾಣಿಜ್ಯ ಮಂಡಳಿಯ ಅಧ್ಯಕ್ಷರು ಶಿವರಾಜ್ ಕುಮಾರ್ ಅವರನ್ನು ಭೇಟಿಯಾಗಿ ಸಭೆ ನಡೆಸಲಿದ್ದಾರೆ. ಕೊರೊನಾ ಸಮಯದಲ್ಲಿ ಎಲ್ಲಾ ಉದ್ಯಮಕ್ಕೆ ಕೇಂದ್ರ ಸರ್ಕಾರಕ್ಕೆ ಪ್ಯಾಕೇಜ್ ಗಳನ್ನು ನೀಡಿತ್ತು, ಆದರೆ ಚಿತ್ರರಂಗಕ್ಕೆ ಯಾವುದೇ ಪ್ಯಾಕೇಜ್ ಸಿಕ್ಕಿಲ್ಲ. ಜೊತೆಗೆ ಚಿತ್ರರಂಗ ಎದುರಿಸುವ ಸಮಸ್ಯೆಗಳ ಬಗ್ಗೆ ಚರ್ಚೆನಡೆಯಲಿದೆ. ನಾಳೆಯ ಸಭೆಯ ಬಳಿಕ ಏನೆಲ್ಲ ಬೆಣಳವಣಿಗೆಯಾಗಲಿದೆ, ಶಿವಣ್ಣ ಚಿತ್ರರಂಗದ ಮುಂದಾಳತ್ವ ವಹಿಸಿಕೊಳ್ಳುತ್ತಾರಾ ಎಂದು ಕಾದುನೋಡಬೇಕು.