Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ಪ್ಯಾನ್ ಇಂಡಿಯಾ' ಪರಿಕಲ್ಪನೆಯಿಂದ ಬದಲಾಗುತ್ತದೆ ಕಲಾವಿದರ ಆಯ್ಕೆ
ಒಂದು ಸಿನಿಮಾದ ಪಾತ್ರಕ್ಕೆ ತಕ್ಕ ಹಾಗೆ ಕಲಾವಿದರ ಆಯ್ಕೆ ನಡೆಯಬೇಕು. ಆದರೆ, ಕಲಾವಿದರ ಆಯ್ಕೆ ಎನ್ನುವುದು ಈಗ ಅದನ್ನು ಮೀರಿ ಮಾರ್ಕೆಟ್ ಗೆ ಮೇಲೆಯೂ ಅವಲಂಬನೆ ಆಗಿದೆ.
ಪ್ಯಾನ್ ಇಂಡಿಯಾ ಸಿನಿಮಾ ಎನ್ನುವ ಕಾನ್ಸೆಪ್ಟ್ ಬಂದ ಮೇಲೆ ಕಲಾವಿದರ ಆಯ್ಕೆಯ ಪ್ರಕ್ರಿಯೆ ಬದಲಾಗುತ್ತಿದೆ. ಉತ್ತರ ಭಾರತದ ಸಿನಿಮಾಗಳಲ್ಲಿ ದಕ್ಷಿಣ ಭಾರತದ ನಟ, ನಟಿಯರು ಕಾಣಿಸಿಕೊಳ್ಳುತ್ತಿದ್ದಾರೆ. ಅದೇ ರೀತಿ ಸೌತ್ ಇಂಡಿಯಾ ಸಿನಿಮಾಗಳಲ್ಲಿಯೂ ಬಾಲಿವುಡ್ ಕಲಾವಿದರು ಹೆಚ್ಚಾಗಿ ನಟಿಸುತ್ತಿದ್ದಾರೆ.
ಹಿಂದಿಯಲ್ಲಿ 'ಡಿ-ಬಾಸ್' ಚಿತ್ರಕ್ಕೆ ಬೇಡಿಕೆ ಹೆಚ್ಚಲು ಕಾರಣ ಇದಿರಬಹುದು.!
ಇದೀಗ ಬರುತ್ತಿರುವ ಬಹುತೇಕ ಸಿನಿಮಾಗಳಲ್ಲಿ ಮಾರ್ಕೆಟ್ ಹೆಚ್ಚು ಮಾಡಬೇಕು ಎನ್ನುವ ದೃಷ್ಟಿಯಿಂದ, ಕಲಾವಿದರ ಆಯ್ಕೆಯ ವಿಧಾನ ಬದಲಾಗಿದೆ. ಆ ರೀತಿಯ ಕೆಲವು ಸಿನಿಮಾಗಳ ವಿವರ ಇಲ್ಲಿದೆ.
'ಮಿಷನ್ ಮಂಗಲ್'ನಲ್ಲಿ ಸೌತ್ ಕಲಾವಿದರು
ಅಕ್ಷಯ್ ಕುಮಾರ್ ನಟನೆಯ 'ಮಿಷನ್ ಮಂಗಲ್' ಟ್ರೇಲರ್ ಇತ್ತೀಚಿಗಷ್ಟೆ ಹೊರ ಬಂದಿದೆ. ಈ ಟ್ರೇಲರ್ ಗಮನಿಸಿದರೆ, ಅದರಲ್ಲಿ ಇರುವ ಬಹುತೇಕ ಕಲಾವಿದರು ಸೌತ್ ಇಂಡಿಯಾದವರಾಗಿದ್ದಾರೆ. ಕನ್ನಡದ ದತ್ತಣ್ಣ ಕೂಡ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ದಕ್ಷಿಣ ಭಾರತದ ಕಲಾವಿದರು ಇರುವ ಕಾರಣ, ಸಿನಿಮಾ ಮತ್ತಷ್ಟು ಜನರಿಗೆ ತಲುಪುತ್ತದೆ.
ಸೌತ್ ಇಂಡಿಯಾದ ಚಿತ್ರಗಳಲ್ಲಿ 'ದರ್ಶನ್ ಕುರುಕ್ಷೇತ್ರ' ನಂ-2, ಏಕೆ?
'ಪೈಲ್ವಾನ್' ನಲ್ಲಿ ಸುನೀಲ್ ಶೆಟ್ಟಿ, 'ಕೆಜಿಎಫ್ 2' ನಲ್ಲಿ ಸಂಜಯ್ ದತ್
ಬಾಲಿವುಡ್ ನಟ ಸುನೀಲ್ ಶೆಟ್ಟಿ ಕನ್ನಡದ 'ಪೈಲ್ವಾನ್' ಸಿನಿಮಾದ ಒಂದು ಪಾತ್ರದಲ್ಲಿ ನಟಿಸಿದ್ದಾರೆ. ಇತ್ತ 'ಕೆಜಿಎಫ್ 2' ಸಿನಿಮಾದಲ್ಲಿ ಸಂಜಯ್ ದತ್ ಕಾಣಿಸಿಕೊಳ್ಳುತ್ತಿದ್ದಾರೆ. ಈ ಎರಡೂ ಸಿನಿಮಾಗಳು ಬಹು ಭಾಷೆಯಲ್ಲಿ ಬಿಡುಗಡೆ ಆಗುತ್ತದೆ. 'ಕುರುಕ್ಷೇತ್ರ'ದಲ್ಲಿಯೂ ಸೋನುಸೂದ್ ಮತ್ತು ಡ್ಯಾನಿಶ್ ಇದ್ದಾರೆ. ಈ ಕಾರಣದಿಂದ ಈ ಕಲಾವಿದರು ಸಿನಿಮಾಗೆ ದೊಡ್ಡ ಪ್ಲೆಸ್ ಪಾಯಿಂಟ್ ಆಗಿದ್ದಾರೆ.
ರಾಜಮೌಳಿ ಕೂಡ ಪಾಲಿಸುತ್ತಿದ್ದಾರೆ ಈ ನಿಯಮ
ನಿರ್ದೇಶಕ ರಾಜಮೌಳಿ ಕೂಡ ಪ್ಯಾನ್ ಇಂಡಿಯಾ ಸಿನಿಮಾದ ಸೂತ್ರ ಪಾಲಿಸುತ್ತಿದ್ದಾರೆ. ತಮ್ಮ ಮುಂದಿನ 'ಆರ್ ಆರ್ ಆರ್'ಗೆ ಸಿನಿಮಾಗೆ ಆಲಿಯಾ ಭಟ್ ರನ್ನು ನಾಯಕಿಯನ್ನಾಗಿ ಮಾಡಿದ್ದಾರೆ. ಹೀಗಾಗಿ, ಆ ಸಿನಿಮಾದ ಕ್ರೇಜ್ ಬಾಲಿವುಡ್ ನಲ್ಲಿ ಮತ್ತಷ್ಟು ಜಾಸ್ತಿ ಆಗುವುದರಲ್ಲಿ ಯಾವುದೇ ಅನುಮಾನವಿಲ್ಲ.
ಯಶ್ ಸ್ಟಾರ್ ಪಟ್ಟ ಉಳಿಸುತ್ತಾರಾ ಪೂರಿ ಜಗನ್ನಾಥ್?
ಮಾರ್ಕೆಟ್ ಹೆಚ್ಚು ಮಾಡಿಕೊಳ್ಳುವುದು ಅನಿವಾರ್ಯ
ಬಾಲಿವುಡ್ ಹಾಗೂ ಸೌತ್ ಸೇರಿದಂತೆ ಎಲ್ಲ ಇಂಡಸ್ಟ್ರಿಗಳು ಇಂದು ತಮ್ಮ ಮಾರ್ಕೆಟ್ ಅನ್ನು ಹೆಚ್ಚು ಮಾಡಿಕೊಳ್ಳಲು ಒಂದಲ್ಲ ಒಂದು ಪ್ರಯತ್ನ ಮಾಡುತ್ತಿವೆ. ಇದು ಅನಿವಾರ್ಯ ಕೂಡ ಆಗಿದೆ. ಅದೇ ಕಾರಣಕ್ಕೆ ಪ್ಯಾನ್ ಇಂಡಿಯಾ ಸಿನಿಮಾ ಮಾಡುವಾಗ ಈ ರೀತಿ ಕಲಾವಿದ ಆಯ್ಕೆಗಳಿಗೆ ನಿರ್ದೇಶಕರು ಮುಂದಾಗುತ್ತಾರೆ.