Don't Miss!
- Sports IPL 2024: ಚಹಾಲ್ ಬಿಟ್ಟುಕೊಟ್ಟಿದರ ಬಗ್ಗೆ ಕಾರಣ ತಿಳಿಸಿದ ಆರ್ಸಿಬಿ ಮಾಜಿ ನಿರ್ದೇಶಕ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- News ಗೃಹ ಸಚಿವ ಡಾ. ಜಿ ಪರಮೇಶ್ವರ್ ರಾಜೀನಾಮೆಗೆ ಆಗ್ರಹ: ಕಾರಣವೇನು?
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- Automobiles Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಂಡ್ಯ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಚುನಾವಣೆಯಲ್ಲಿ ಸ್ಪರ್ಧಿಸುವುದು ಪಕ್ಕಾ.?
ರೆಬೆಲ್ ಸ್ಟಾರ್ ಅಂಬರೀಶ್ ಚಿತ್ರರಂಗದಲ್ಲಿ ಎಷ್ಟು ಖ್ಯಾತಿ ಹೊಂದಿದ್ದರೋ, ಅಷ್ಟೇ ಜನಪ್ರಿಯತೆ ರಾಜಕೀಯ ರಂಗದಲ್ಲೂ ಪಡೆದಿದ್ದರು. 'ಮಂಡ್ಯದ ಗಂಡು' ಎಂದೇ ಕರೆಯಿಸಿಕೊಳ್ಳುತ್ತಿದ್ದ ಅಂಬರೀಶ್ ಗೆ ರಾಜಕಾರಣದಲ್ಲಿ ಕೈಹಿಡಿದದ್ದು ಸಕ್ಕರೆ ನಾಡು ಮಂಡ್ಯ ಕ್ಷೇತ್ರ.
ಮಂಡ್ಯ ಜನತೆಯ ಅಕ್ಕರೆಯ ನಾಯಕನಾಗಿದ್ದ ಅಂಬರೀಶ್ ಇಂದು ನಮ್ಮ-ನಿಮ್ಮೊಂದಿಲ್ಲ. ಹೀಗಾಗಿ, ಅಂಬರೀಶ್ ಸ್ಥಾನವನ್ನು ಸುಮಲತಾ ತುಂಬಬೇಕು ಎಂಬುದು ಮಂಡ್ಯ ಜನತೆ ಹಾಗೂ ಅಭಿಮಾನಿಗಳ ಇಚ್ಛೆ ಆಗಿದೆ.
ಲೋಕಸಭೆ ಚುನಾವಣೆ ಇನ್ನೇನು ಹತ್ತಿರ ಸಮೀಪಿಸುತ್ತಿರುವುದರಿಂದ, ಮಂಡ್ಯ ಕ್ಷೇತ್ರದಿಂದ ಸುಮಲತಾ ಅಂಬರೀಶ್ ರನ್ನೇ ಕಣಕ್ಕೆ ಇಳಿಸಲು ಕಾಂಗ್ರೆಸ್ ಪಕ್ಷ ಮುಂದಾಗಿದೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿದೆ.
ಹಾಗಾದ್ರೆ, ರಾಜಕೀಯಕ್ಕೆ ಧುಮುಕಲು ಸುಮಲತಾ ಮೇಡಂ ರೆಡಿ ಇದ್ದಾರಾ.? ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಸ್ಪರ್ಧಿಸುತ್ತಾರಾ.? ಈ ಎಲ್ಲಾ ಪ್ರಶ್ನೆಗಳಿಗೂ ಸುಮಲತಾ ಉತ್ತರ ಕೊಟ್ಟಿದ್ದಾರೆ. ಹೆಚ್ಚಿನ ಮಾಹಿತಿ ಫೋಟೋ ಸ್ಲೈಡ್ ಗಳಲ್ಲಿ ಓದಿರಿ...
ಮಂಡ್ಯದಿಂದ ಮಾತ್ರ..!
''ರಾಜಕೀಯಕ್ಕೆ ಬರುವ ಆಲೋಚನೆ ಇರಲಿಲ್ಲ. ಆದರೆ ಅಭಿಮಾನಿಗಳ ಆಶಯದಂತೆ ನಡೆಯುವೆ. ಒಂದು ವೇಳೆ ರಾಜಕೀಯಕ್ಕೆ ಬಂದರೆ ಮಂಡ್ಯದಿಂದ ಮಾತ್ರ'' ಎಂದಿದ್ದಾರೆ ಸುಮಲತಾ ಅಂಬರೀಶ್. ಅಲ್ಲಿಗೆ, ರಾಜಕೀಯಕ್ಕೆ ಧುಮುಕಲು ಸುಮಲತಾ ಅಂಬರೀಶ್ ಮನಸ್ಸು ಮಾಡಿರುವಂತಿದೆ.
ಮಂಡ್ಯ ಕ್ಷೇತ್ರದಿಂದ ಅಭಿ ಸ್ಪರ್ಧೆ: ಅಂಬಿ ಪುತ್ರ ಹೇಳಿದ್ದೇನು?
ಕಾಂಗ್ರೆಸ್ ಪಕ್ಷದಿಂದ ಅಖಾಡಕ್ಕೆ.?
''ಅಂಬರೀಶ್ ಅವರು ಕಾಂಗ್ರೆಸ್ ಪಕ್ಷದಿಂದ ಗುರುತಿಸಿಕೊಂಡವರು. ಅಭಿಮಾನಿಗಳು ಯಾವ ತೀರ್ಮಾನ ಮಾಡುತ್ತಾರೋ, ಅದನ್ನೇ ಆಯ್ಕೆ ಮಾಡಿಕೊಳ್ಳುವೆ'' ಅಂತ ಸುಮಲತಾ ಅಂಬರೀಶ್ ಹೇಳಿದ್ದಾರೆ.
ನಾಡಿನ ಸಮಸ್ತ ಜನತೆಗೆ ಪತ್ರದ ಮೂಲಕ ಧನ್ಯವಾದ ತಿಳಿಸಿದ ಸುಮಲತಾ-ಅಭಿ
ಮಂಡ್ಯ ಜನರ ಭಾವನೆಗೆ ಬೆಲೆ ಕೊಡುವೆ.!
''ಮಂಡ್ಯ ಜನರೊಂದಿಗೆ ಅಂಬರೀಶ್ ಅವರಿಗೆ ಇದ್ದ ಸಂಬಂಧವನ್ನು ಕಡಿದುಕೊಳ್ಳಲು ಸಾಧ್ಯವಿಲ್ಲ. ಮಂಡ್ಯ ಜನತೆಯ ಭಾವನೆಗೆ ಬೆಲೆ ಕೊಡುವುದು ನನ್ನ ಕರ್ತವ್ಯ. ಅವರು ಹೇಳಿದ ಹಾಗೆ ನಡೆಯುವೆ'' ಎಂದು ಸುಮಲತಾ ಅಂಬರೀಶ್ ತಿಳಿಸಿದ್ದಾರೆ.
ಅಂಬಿಗೆ ಇದ್ದ ಕೊನೆಯ ಆಸೆ ಬಗ್ಗೆ ಹೇಳಿಕೊಂಡ ಸುಮಲತಾ
ಜನರ ಒತ್ತಾಯಕ್ಕೆ ಮಣಿಯುತ್ತಾರಾ ಸುಮಲತಾ.?
ಮಂಡ್ಯ ಜನರ ಒತ್ತಾಯಕ್ಕೆ ಮಣಿದು ಸುಮಲತಾ ಅಂಬರೀಶ್ ಚುನಾವಣೆಗೆ ನಿಲ್ಲಲು ಮುಂದಾಗಿರುವ ಹಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಅಂಬರೀಶ್ ಇದ್ದಿದ್ರಿಂದ, ಅದೇ ಪಕ್ಷದಲ್ಲಿ ಸುಮಲತಾ ಮುಂದುವರೆಯುವ ಸಾಧ್ಯತೆ ಹೆಚ್ಚಿದೆ. ಚುನಾವಣಾ ರಾಜಕೀಯದಲ್ಲಿ ಮುಂದೆ ಏನೇನು ಬದಲಾವಣೆ ಆಗುತ್ತೋ, ಕಾದು ನೋಡಬೇಕು.