Don't Miss!
- Automobiles ಬೈಕಿನಂತೆ ಮೈಲೇಜ್, ಹಿಂದೆಗಿಂತಲೂ ಬಲಿಷ್ಠವಾಗಿ ಸ್ವಿಫ್ಟ್ ಅಖಾಡಕ್ಕೆ: ಖರೀದಿಸಲು ಕ್ಯೂ ನಿಲ್ಲಲು ರೆಡಿಯಾಗಿರಿ!
- News Bengaluru Rain: ಮುದ್ದಿನ ನಾಯಿಮರಿಗೆ ಮೊದಲ ಮಳೆ ತೋರಿಸಿ ಖುಷಿ ಪಟ್ಟ ವ್ಯಕ್ತಿ; ವಿಡಿಯೋ ವೈರಲ್
- Lifestyle ಮಕ್ಕಳಲ್ಲಿ ಮಲೇರಿಯಾ: ಹೇಗೆ ಬರುತ್ತದೆ, ಇದರ ಲಕ್ಷಣಗಳೇನು? ತಡೆಗಟ್ಟುವುದು ಹೇಗೆ?
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಧ್ರುವ ಜೊತೆ ಸಿನಿಮಾ ಸಿಗಲಿಲ್ಲ, ಸೇಡು ತೀರಿಸಿಕೊಳ್ಳಲು ಶ್ರುತಿ ಹೀಗೆ ಮಾಡಿದ್ರಂತೆ.!
Recommended Video
ಸ್ಯಾಂಡಲ್ ವುಡ್ ನಲ್ಲಿ #ಮೀಟೂ ಅಭಿಯಾನ ದಿನದಿಂದ ದಿನಕ್ಕೆ ಹೊಸ ಟ್ವಿಸ್ಟ್ ಪಡೆದುಕೊಳ್ಳುತ್ತಿದೆ.
#ಮೀಟೂ ಎಂಬ ಅಸ್ತ್ರಕ್ಕೂ ಲಿಬರಲ್ ಗ್ಯಾಂಗ್ ಗೂ ಲಿಂಕ್ ಇದೆ ಎಂಬ ಮಾತುಗಳು ಕೇಳಿಬರುತ್ತಿರುವಾಗಲೇ, ಸೇಡು ತೀರಿಸಿಕೊಳ್ಳಲು ನಟಿ ಶ್ರುತಿ ಹರಿಹರನ್ ಹೀಗೆ ಮಾಡಿದ್ದಾರೆ ಎಂಬ ಗುಸುಗುಸು ಕೇಳಿಬಂದಿದೆ. ಅದು ಬೇರೆಲ್ಲೂ ಅಲ್ಲ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲೇ.!
ಹೌದು, ಫಿಲ್ಮ್ ಚೇಂಬರ್ ನಲ್ಲಿಯೇ ನಟಿ ಶ್ರುತಿ ಹರಿಹರನ್ ಬಗ್ಗೆ ಗಾಸಿಪ್ ಕೇಳಿಬಂದಿದೆ. ಧ್ರುವ ಸರ್ಜಾ ಜೊತೆ ಸಿನಿಮಾ ಮಾಡುವ ಬಯಕೆ ಶ್ರುತಿ ಹರಿಹರನ್ ಗಿತ್ತು. ಆದ್ರೆ, ಅದಕ್ಕೆ ಅರ್ಜುನ್ ಸರ್ಜಾ ಅವಕಾಶ ಮಾಡಿಕೊಡಲಿಲ್ಲ. ಹೀಗಾಗಿ, ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಹರಿಹರನ್ ದ್ವೇಷ ಸಾಧಿಸುತ್ತಿದ್ದಾರಂತೆ. ಹೆಚ್ಚಿನ ಮಾಹಿತಿ ಫೋಟೋ ಸ್ಲೈಡ್ ಗಳಲ್ಲಿ ಓದಿರಿ...
ಭಾಮಾ ಹರೀಶ್ ಬಳಿ ಅರ್ಜುನ್ ಸರ್ಜಾ ಆಪ್ತರ ಮಾತು
''ಧ್ರುವ ಸರ್ಜಾ ಜೊತೆ ಸಿನಿಮಾ ಮಾಡಬೇಕು ಅಂತ ಶ್ರುತಿ ಹರಿಹರನ್ ಅಂದುಕೊಂಡಿದ್ದರು. ಆದ್ರೆ, ಅರ್ಜುನ್ ಸರ್ಜಾ ರಿಜೆಕ್ಟ್ ಮಾಡಿದ್ದರು. ಹೀಗಾಗಿ ಶ್ರುತಿ ಹೀಗೆಲ್ಲ ಆರೋಪ ಮಾಡುತ್ತಿದ್ದಾರೆ'' ಎಂದು ಅರ್ಜುನ್ ಸರ್ಜಾ ಆಪ್ತರು ನಿರ್ಮಾಪಕ ಭಾಮಾ ಹರೀಶ್ ಬಳಿ ಹೇಳಿಕೊಂಡಿದ್ದಾರಂತೆ.
ಶ್ರುತಿ ಹರಿಹರನ್ ಗೆ ಓಪನ್ ಚಾಲೆಂಜ್ ಹಾಕಿದ ಧ್ರುವ ಸರ್ಜಾ!
ಚಾನ್ಸ್ ತಪ್ಪಿದ್ದಕ್ಕೆ ಶ್ರುತಿ ಹೀಗೆ ಮಾಡಿದ್ರಾ.?
ಧ್ರುವ ಸರ್ಜಾ ಜೊತೆಗಿನ ಸಿನಿಮಾ ಕೈತಪ್ಪಿ ಹೋದ ಸಿಟ್ಟಿಗೆ ಶ್ರುತಿ ಹರಿಹರನ್ ಈ ರೀತಿ ಆರೋಪ ಮಾಡುತ್ತಿದ್ದಾರೆ ಎಂಬ ಮಾತುಗಳು ಫಿಲ್ಮ್ ಚೇಂಬರ್ ಪಡಸಾಲೆಯಲ್ಲಿ ಕೇಳಿಬರುತ್ತಿವೆ. ಇದರಲ್ಲಿ ನಿಜ ಎಷ್ಟು, ಸುಳ್ಳು ಎಷ್ಟು... ದೇವರೇ ಬಲ್ಲ.!
'ನಾಚಿಕೆ ಆಗಬೇಕು' : ಶ್ರುತಿ ವಿರುದ್ಧ ಅರ್ಜುನ್ ಸರ್ಜಾ ಕೆಂಡಾಮಂಡಲ!
ಸಿಡಿದೆದ್ದಿದ್ದ ಧ್ರುವ ಸರ್ಜಾ
ಅರ್ಜುನ್ ಸರ್ಜಾ ವಿರುದ್ಧ ಶ್ರುತಿ ಹರಿಹರನ್ ಬೆಟ್ಟು ಮಾಡಿ ತೋರಿಸಿದ್ಮೇಲೆ, ಆಕೆ ವಿರುದ್ಧ ಧ್ರುವ ಸರ್ಜಾ ಸಿಡಿದೆದ್ದಿದ್ದರು. ''ಆರೋಪದ ಕುರಿತು ಸಾಕ್ಷಿ ಇದ್ದರೆ ತೋರಿಸಲಿ'' ಎಂದು ಶ್ರುತಿ ಹರಿಹರನ್ ಗೆ ಧ್ರುವ ಸರ್ಜಾ ಓಪನ್ ಚಾಲೆಂಜ್ ಹಾಕಿದ್ದರು.
'ರೆಸಾರ್ಟ್ ಗೆ ಹೋಗೋಣ ಬಾ' ಎಂದು ಕರೆದರು : ಸರ್ಜಾ ಮೇಲೆ ಶ್ರುತಿ ಬಾಂಬ್!
ಫಿಲ್ಮ್ ಚೇಂಬರ್ ನಲ್ಲಿ ಸಭೆ
ಶ್ರುತಿ ಹರಿಹರನ್ ಮಾಡಿರುವ ಆರೋಪದ ಬಗ್ಗೆ ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಭೆ ನಡೆಯಿತು. ''ಸದ್ಯದಲ್ಲೇ ಅಂಬರೀಶ್ ಜೊತೆಗೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳುತ್ತೇವೆ'' ಎಂದು ಸಾರಾ ಗೋವಿಂದು ತಿಳಿಸಿದ್ದಾರೆ.