Don't Miss!
- News ದೇವನಹಳ್ಳಿ, ಹೊಸಕೋಟೆ, ದೊಡ್ಡಬಳ್ಳಾಪುರ & ನೆಲಮಂಗಲ ಹೊಸ ಉಪನಗರ: ಡಾ. ಕೆ. ಸುಧಾಕರ್ ಭರವಸೆ!
- Finance ಜಗತ್ತಿನಾದ್ಯಂತ 6,000 ಉದ್ಯೋಗಿಗಳನ್ನು ವಜಾ ಮಾಡಿದ ಡೆಲ್
- Automobiles ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- Sports IPL 2024 RR vs DC: ರಾಯಲ್ಸ್ ವಿರುದ್ಧ ಗೆಲುವಿನೊಂದಿಗೆ ಪುಟಿದೇಳುವುದೇ ಕ್ಯಾಪಿಟಲ್ಸ್?; ಸಂಭಾವ್ಯ ಆಡುವ 11ರ ಬಳಗ
- Lifestyle ವಿಶ್ವದ ದುಬಾರಿ ಹಣ್ಣುಗಳಿವು..! ನೀವು ಊಹಿಸದ ಬೆಲೆ ಈ ಹಣ್ಣುಗಳಿಗಿದೆ..!
- Technology OnePlus: ಒನ್ಪ್ಲಸ್ ನಾರ್ಡ್ CE 4 ಫೋನ್ನ ಭಾರತದ ಬೆಲೆ ಮಾಹಿತಿ ಲೀಕ್! ಲಾಂಚ್ಗೆ ನಾಲ್ಕೇ ದಿನ ಬಾಕಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
45 ಗಂಟೆಗಳ ಬಳಿಕ ಪುನೀತ್ ನಿವಾಸದ ಮೇಲಿನ ಐಟಿ ದಾಳಿ ಅಂತ್ಯ.!
Recommended Video
ಸ್ಯಾಂಡಲ್ ವುಡ್ ಸ್ಟಾರ್ ನಟರು ಮತ್ತು ನಿರ್ಮಾಪಕರ ನಿವಾಸದ ಮೇಲಿನ ಐಟಿ ರೇಡ್ ಮೂರನೇ ದಿನಕ್ಕೆ ಕಾಲಿಟ್ಟಿದೆ. ಸತತ ಮೂರು ದಿನಗಳಿಂದ ನಟರು, ನಿರ್ಮಾಪಕರ ಮನೆಯಲ್ಲಿ ಆದಾಯ ತೆರಿಗೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.
ಅತ್ತ ನಿರ್ಮಾಪಕರಾದ ರಾಕ್ ಲೈನ್ ವೆಂಕಟೇಶ್, ಜಯಣ್ಣ, ನಟರಾದ ಯಶ್, ಸುದೀಪ್ ಮನೆಯಲ್ಲಿ ಐಟಿ ಅಧಿಕಾರಿಗಳ ಪರಿಶೀಲನೆ ಮುಂದುವರೆದಿದ್ದರೆ, ಇತ್ತ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮನೆಯಲ್ಲಿ ಐಟಿ ದಾಳಿ ಅಂತ್ಯಗೊಂಡಿದೆ.
45 ಗಂಟೆಗಳ ಸುದೀರ್ಘ ಪರಿಶೀಲನೆ ನಡೆಸಿದ ಬಳಿಕ, ನಿನ್ನೆ ಮಧ್ಯರಾತ್ರಿ 12 ರ ಸುಮಾರಿಗೆ ಪುನೀತ್ ರಾಜ್ ಕುಮಾರ್ ಮನೆಯಿಂದ ಆದಾಯ ತೆರಿಗೆ ಅಧಿಕಾರಿಗಳು ವಾಪಸ್ ತೆರಳಿದ್ದಾರೆ. ಮುಂದೆ ಓದಿರಿ...
ಪುನೀತ್ ಮನೆಯಲ್ಲಿ ಶೋಧ ಕಾರ್ಯ ಮುಗಿಯಿತು
ಸದಾಶಿವನಗರದಲ್ಲಿರುವ ಪುನೀತ್ ರಾಜ್ ಕುಮಾರ್ ಮನೆಯಲ್ಲಿ ಆದಾಯ ತೆರಿಗೆ ಅಧಿಕಾರಿಗಳ ಶೋಧ ಕಾರ್ಯ ಅಂತ್ಯಗೊಂಡಿದೆ. ಪುನೀತ್ ಪತ್ನಿ ಅಶ್ವಿನಿಗೆ ಸೇರಿದ ಆಸ್ತಿ ಪತ್ರಗಳು ಸೇರಿದಂತೆ ಹಲವು ದಾಖಲೆಗಳನ್ನು ವಶಕ್ಕೆ ಪಡೆದು ನಿನ್ನೆ ಮಧ್ಯರಾತ್ರಿ ಐಟಿ ಅಧಿಕಾರಿಗಳು ವಾಪಸ್ ಹೊರಟರು.
ದಿಢೀರ್ ಐಟಿ ದಾಳಿಗೆ ಕಾರಣವಾದ ಪ್ರಮುಖ ಅಂಶಗಳು
ಏನೂ ತೊಂದರೆ ಆಗಿಲ್ಲ
''ಐಟಿ ರೇಡ್ ಆಗಿರುವುದು ನಿಜ. ಓರ್ವ ಜವಾಬ್ದಾರಿಯುತ ಪ್ರಜೆಯಾಗಿ, ಆದಾಯ ತೆರಿಗೆ ಅಧಿಕಾರಿಗಳಿಗೆ ನಾನು ಸಹಕರಿಸಿದ್ದೇನೆ. ಏನೂ ತೊಂದರೆ ಆಗಿಲ್ಲ. ಅವರೂ ನಮಗೆ ತೊಂದರೆ ಮಾಡಿಲ್ಲ, ನಾವೂ ಅವರಿಗೆ ತೊಂದರೆ ಕೊಡಲಿಲ್ಲ'' ಎಂದು ಐಟಿ ದಾಳಿ ಮುಗಿದ ಬಳಿಕ ಪುನೀತ್ ರಾಜ್ ಕುಮಾರ್ ಮಾಧ್ಯಮಗಳಿಗೆ ಹೇಳಿಕೆ ಕೊಟ್ಟಿದ್ದಾರೆ.
ಸ್ಯಾಂಡಲ್ ವುಡ್ ನ '8' ಶ್ರೀಮಂತ ಮನೆಗಳ ಮೇಲೆ ಐಟಿ ರೈಡ್
ಅಕೌಂಟ್ ವಿಚಾರವಾಗಿ ಐಟಿ ರೇಡ್
''ಐಟಿ ರೇಡ್ ಕಂಪ್ಲೀಟ್ ಆಗಿದೆ. ಅಕೌಂಟ್ ವಿಚಾರವಾಗಿ ಐಟಿ ರೇಡ್ ನಡೆದಿದೆ. ಊಹಾಪೋಹ ಏನೇ ಇರಬಹುದು, ಆದರೆ ಯಾವುದೋ ಒಂದು ಮಾಹಿತಿಯ ಆಧಾರದ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಧಿಕಾರಿಗಳು ಕೇಳಿದ ಪ್ರಶ್ನೆಗಳಿಗೆಲ್ಲಾ ಉತ್ತರ ಕೊಟ್ಟಿದ್ದೇವೆ'' ಅಂತಾರೆ ಪುನೀತ್ ರಾಜ್ ಕುಮಾರ್.
ಬಂದ್ರು-ಹೋದ್ರು-ತಂದ್ರು: 38 ಗಂಟೆಯಿಂದ 'ಐಟಿ' ದಾಳಿಯಲ್ಲಿ ಆಗಿದ್ದಿಷ್ಟೇ.!
ರಿಲ್ಯಾಕ್ಸ್ ಮೂಡ್ ನಲ್ಲಿ ಅಪ್ಪು ಫ್ಯಾಮಿಲಿ
ಕಳೆದ ಮೂರು ದಿನಗಳಿಂದ ನಡೆದ ಐಟಿ ದಾಳಿಯಿಂದಾಗಿ, ಪುನೀತ್ ರಾಜ್ ಕುಮಾರ್ ಫ್ಯಾಮಿಲಿ ಕೊಂಚ ಟೆನ್ಷನ್ ನಲ್ಲಿತ್ತು. ಆದ್ರೀಗ, ಐಟಿ ರೇಡ್ ಕಂಪ್ಲೀಟ್ ಆಗಿದ್ದು ಅಪ್ಪು ಫ್ಯಾಮಿಲಿ ಕೊಂಚ ರಿಲ್ಯಾಕ್ಸ್ ಮೂಡ್ ನಲ್ಲಿದೆ.
ಐಟಿ ಅಧಿಕಾರಿಗಳು ಇವರನ್ನೇ ಟಾರ್ಗೆಟ್ ಮಾಡಲು ಕಾರಣ ಇದಿರಬಹುದೇ?
'ನಟ ಸಾರ್ವಭೌಮ' ಆಡಿಯೋ ರಿಲೀಸ್
ಇಂದು 'ನಟ ಸಾರ್ವಭೌಮ' ಚಿತ್ರದ ಆಡಿಯೋ ಬಿಡುಗಡೆ ಸಮಾರಂಭ ಇದೆ. ಪುನೀತ್ ನಿವಾಸದ ಮೇಲೆ ಐಟಿ ದಾಳಿ ಮುಗಿದಿರುವ ಕಾರಣ, ಆಡಿಯೋ ರಿಲೀಸ್ ಫಂಕ್ಷನ್ ನಲ್ಲಿ ಅಪ್ಪು ಭಾಗವಹಿಸುವ ಸಾಧ್ಯತೆ ಇದೆ.