Don't Miss!
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Automobiles Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರಾಜಾಹುಲಿ' ಮನೆಯಿಂದ ಸೂಟ್ ಕೇಸ್ ಹಿಡಿದು ಹೊರಟ ಐಟಿ ಅಧಿಕಾರಿಗಳು
ರಾಕಿಂಗ್ ಸ್ಟಾರ್ ಯಶ್ ಮನೆ ಮೇಲೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು, 57 ಗಂಟೆಗಳ ಬಳಿಕ ದಾಳಿ ಅಂತ್ಯಗೊಳಿಸಿದ್ದಾರೆ. ಒಂದು ಸೂಟ್ ಕೇಸ್, ನೋಟ್ ಕೌಂಟಿಂಗ್ ಮಷಿನ್ ಜೊತೆ ಐಟಿ ಆಫಿಸರ್ಸ್ ಮನೆಯಿಂದ ಹೊರ ಹೋಗಿದ್ದಾರೆ. ಅಲ್ಲಿಗೆ ಯಶ್ ಮನೆ ಮೇಲೆ ದಾಳಿ ಮುಗಿದಿದೆ.
ಗುರುವಾರ ಬೆಳಿಗ್ಗೆ ಹೊಸಕೆರೆಹಳ್ಳಿಯಲ್ಲಿರುವ ಯಶ್ ನಿವಾಸ ಹಾಗೂ ಗಾಯಿತ್ರಿ ನಗರದಲ್ಲಿರುವ ಯಶ್ ಅವರ ಪತ್ನಿ ರಾಧಿಕಾ ಪಂಡಿತ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ರೇಡ್ ಮಾಡಿದ್ದರು.
ಮೂರು ದಿನಗಳ ಐಟಿ ದಾಳಿ, ಅಧಿಕಾರಿಗಳ ಕೈ ಖಾಲಿ ಖಾಲಿ
ಈ ಸುದ್ದಿ ಕೇಳಿದ ಮುಂಬೈನಲ್ಲಿದ್ದ ಯಶ್, ಬೆಂಗಳೂರಿಗೆ ವಾಪಸ್ ಆಗಿ ತಾಜ್ ವೆಸ್ಟೆಂಟ್ ಹೋಟೆಲ್ ಗೆ ಹೋಗಿದ್ದರು. ಅಲ್ಲಿ ಯಶ್ ಅವರನ್ನ ವಿಚಾರಣೆಗೆ ಒಳಪಡಿಸಿದ ಐಟಿ ಅಧಿಕಾರಿಗಳು, ದಾಖಲೆ, ಆಸ್ತಿ ವಿವರ ಮತ್ತು ಆದಾಯದ ಬಗ್ಗೆ ವಿವರ ಪಡೆದುಕೊಂಡಿದ್ದಾರೆ.
ಐಟಿ ದಾಳಿ ಬಳಿಕ ಮಾತನಾಡಿದ ಯಶ್ ''ವಿಜಯ್ ಕಿರಗಂದೂರ್, ತಿಮ್ಮೆಗೌಡ ಅವರಿಂದ ಐಟಿ ಅಧಿಕಾರಿಗಳು ಬಂದಿದ್ದರು. ಕೆಜಿಎಫ್ ಸಂಬಂಧ ಅಂತ ಗೊತ್ತಿಲ್ಲ. ಅವರು ಕೆಲಸ ಅವರು ಮಾಡಿದ್ದಾರೆ, ನಾವು ಸಹಕಾರ ಕೊಟ್ಟಿದ್ದೇವೆ. ಊಹಾಪೋಹಗಳು ಬೇಡ, ಯಾವುದೇ ಗೊಂದಲ ಬೇಡ'' ಎಂದು ಸ್ಪಷ್ಟನೆ ನೀಡಿದ್ದಾರೆ.
ಹೀಗೆ, ಸತತ ಮೂರನೇ ದಿನ ಯಶ್ ಅವರ ನಿವಾಸದಲ್ಲಿ ಪರಿಶೀಲನೆ ನಡೆಸಿ, ಕೊನೆಗೂ ವಿಚಾರಣೆ ಅಂತ್ಯ ಮಾಡಿದ್ದಾರೆ. ಸದ್ಯಕ್ಕೆ, ಯಶ್ ಮನೆಯಿಂದ ಏನು ವಶಪಡಿಸಿಕೊಂಡಿದ್ದಾರೆ, ಯಾವ ದಾಖಲೆ ಪತ್ರಗಳನ್ನ ತೆಗೆದುಕೊಂಡಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಇಲ್ಲ.
ಕೊನೆಗೊಂಡ ಐಟಿ ಡ್ರಿಲ್: ಹುಬ್ಬಳ್ಳಿಗೆ ಪುನೀತ್, ಬಿಗ್ ಬಾಸ್ ಮನೆಗೆ ಸುದೀಪ್.!
ಆದ್ರೆ, ಒಂದು ಸೂಟ್ ಕೇಸ್ ಜೊತೆ ಮನೆಯಿಂದ ಹೋಗಿರುವುದು ಕುತೂಹಲ ಮೂಡಿಸಿದೆ. ಇಲ್ಲಿಯವರೆಗೂ ಯಶ್ ಈ ಬಗ್ಗೆ ಸ್ಪಷ್ಟನೆ ನೀಡಿಲ್ಲ.