Don't Miss!
- Lifestyle ಏಪ್ರಿಲ್ನಲ್ಲಿ 14 ದಿನ ರಜೆ, ಏಪ್ರಿಲ್ 1ಕ್ಕೆ ಬ್ಯಾಂಕ್ಗಳಿಗೆ ರಜೆ ಇರಲು ಕಾರಣವೇನು?
- News 140 ಕೋಟಿ ಜನ ನಿಮ್ಮನ್ನು ತಿರಸ್ಕರಿಸಿರುವುದರಲ್ಲಿ ಅಚ್ಚರಿ ಏನಿಲ್ಲ: ಕಾಂಗ್ರೆಸ್ ವಿರುದ್ಧ ಪ್ರಧಾನಿ ಮೋದಿ ಟೀಕೆ
- Sports ರೋಹಿತ್ vs ಹಾರ್ದಿಕ್: ಸತತ ಸೋಲಿನ ನಡುವೆಯೇ ಮುಂಬೈ ಇಂಡಿಯನ್ಸ್ ಇಬ್ಭಾಗ!?
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
'ರಾಜಾಹುಲಿ' ಮನೆಯಿಂದ ಸೂಟ್ ಕೇಸ್ ಹಿಡಿದು ಹೊರಟ ಐಟಿ ಅಧಿಕಾರಿಗಳು
ರಾಕಿಂಗ್ ಸ್ಟಾರ್ ಯಶ್ ಮನೆ ಮೇಲೆ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು, 57 ಗಂಟೆಗಳ ಬಳಿಕ ದಾಳಿ ಅಂತ್ಯಗೊಳಿಸಿದ್ದಾರೆ. ಒಂದು ಸೂಟ್ ಕೇಸ್, ನೋಟ್ ಕೌಂಟಿಂಗ್ ಮಷಿನ್ ಜೊತೆ ಐಟಿ ಆಫಿಸರ್ಸ್ ಮನೆಯಿಂದ ಹೊರ ಹೋಗಿದ್ದಾರೆ. ಅಲ್ಲಿಗೆ ಯಶ್ ಮನೆ ಮೇಲೆ ದಾಳಿ ಮುಗಿದಿದೆ.
ಗುರುವಾರ ಬೆಳಿಗ್ಗೆ ಹೊಸಕೆರೆಹಳ್ಳಿಯಲ್ಲಿರುವ ಯಶ್ ನಿವಾಸ ಹಾಗೂ ಗಾಯಿತ್ರಿ ನಗರದಲ್ಲಿರುವ ಯಶ್ ಅವರ ಪತ್ನಿ ರಾಧಿಕಾ ಪಂಡಿತ್ ಅವರ ನಿವಾಸದ ಮೇಲೆ ಐಟಿ ಅಧಿಕಾರಿಗಳು ರೇಡ್ ಮಾಡಿದ್ದರು.
ಮೂರು ದಿನಗಳ ಐಟಿ ದಾಳಿ, ಅಧಿಕಾರಿಗಳ ಕೈ ಖಾಲಿ ಖಾಲಿ
ಈ ಸುದ್ದಿ ಕೇಳಿದ ಮುಂಬೈನಲ್ಲಿದ್ದ ಯಶ್, ಬೆಂಗಳೂರಿಗೆ ವಾಪಸ್ ಆಗಿ ತಾಜ್ ವೆಸ್ಟೆಂಟ್ ಹೋಟೆಲ್ ಗೆ ಹೋಗಿದ್ದರು. ಅಲ್ಲಿ ಯಶ್ ಅವರನ್ನ ವಿಚಾರಣೆಗೆ ಒಳಪಡಿಸಿದ ಐಟಿ ಅಧಿಕಾರಿಗಳು, ದಾಖಲೆ, ಆಸ್ತಿ ವಿವರ ಮತ್ತು ಆದಾಯದ ಬಗ್ಗೆ ವಿವರ ಪಡೆದುಕೊಂಡಿದ್ದಾರೆ.
ಐಟಿ ದಾಳಿ ಬಳಿಕ ಮಾತನಾಡಿದ ಯಶ್ ''ವಿಜಯ್ ಕಿರಗಂದೂರ್, ತಿಮ್ಮೆಗೌಡ ಅವರಿಂದ ಐಟಿ ಅಧಿಕಾರಿಗಳು ಬಂದಿದ್ದರು. ಕೆಜಿಎಫ್ ಸಂಬಂಧ ಅಂತ ಗೊತ್ತಿಲ್ಲ. ಅವರು ಕೆಲಸ ಅವರು ಮಾಡಿದ್ದಾರೆ, ನಾವು ಸಹಕಾರ ಕೊಟ್ಟಿದ್ದೇವೆ. ಊಹಾಪೋಹಗಳು ಬೇಡ, ಯಾವುದೇ ಗೊಂದಲ ಬೇಡ'' ಎಂದು ಸ್ಪಷ್ಟನೆ ನೀಡಿದ್ದಾರೆ.
ಹೀಗೆ, ಸತತ ಮೂರನೇ ದಿನ ಯಶ್ ಅವರ ನಿವಾಸದಲ್ಲಿ ಪರಿಶೀಲನೆ ನಡೆಸಿ, ಕೊನೆಗೂ ವಿಚಾರಣೆ ಅಂತ್ಯ ಮಾಡಿದ್ದಾರೆ. ಸದ್ಯಕ್ಕೆ, ಯಶ್ ಮನೆಯಿಂದ ಏನು ವಶಪಡಿಸಿಕೊಂಡಿದ್ದಾರೆ, ಯಾವ ದಾಖಲೆ ಪತ್ರಗಳನ್ನ ತೆಗೆದುಕೊಂಡಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಇಲ್ಲ.
ಕೊನೆಗೊಂಡ ಐಟಿ ಡ್ರಿಲ್: ಹುಬ್ಬಳ್ಳಿಗೆ ಪುನೀತ್, ಬಿಗ್ ಬಾಸ್ ಮನೆಗೆ ಸುದೀಪ್.!
ಆದ್ರೆ, ಒಂದು ಸೂಟ್ ಕೇಸ್ ಜೊತೆ ಮನೆಯಿಂದ ಹೋಗಿರುವುದು ಕುತೂಹಲ ಮೂಡಿಸಿದೆ. ಇಲ್ಲಿಯವರೆಗೂ ಯಶ್ ಈ ಬಗ್ಗೆ ಸ್ಪಷ್ಟನೆ ನೀಡಿಲ್ಲ.