Don't Miss!
- News ಉಕ್ರೇನ್ ವಿರುದ್ಧ ರಷ್ಯಾ ಗಂಭೀರ ಆರೋಪ!
- Lifestyle ಯೇಸುವನ್ನು ಶಿಲುಬೆಗೆ ಹಾಕಿದ ದಿನವನ್ನು ಗುಡ್ ಪ್ರೈಡೇ ಎಂದು ಹೇಳುವುದೇಕೆ?
- Sports RR vs DC: ಅವೇಶ್ ಖಾನ್, ರಿಯಾನ್ ಪರಾಗ್ ಶೈನ್; ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ವಿನ್
- Automobiles ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಬರ್ಟ್ ಗೆ ಧ್ವನಿ ನೀಡಿದ ಜಗಪತಿ ಬಾಬು, ಖುಷಿ ಹಂಚಿಕೊಂಡ ನಿರ್ದೇಶಕ
ದರ್ಶನ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ರಾಬರ್ಟ್ ಸಿನಿಮಾದ ಬಹುತೇಕ ಕಾರ್ಯಗಳು ಅಂತಿಮ ಹಂತದಲ್ಲಿವೆ.
ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಡಬ್ಬಿಂಗ್ ಅನ್ನು ಮುಗಿಸುವ ಹಂತದಲ್ಲಿದೆ. ಚಿತ್ರ ಬಿಡುಗಡೆ ತಡವಾಗಿ ಮಾಡುವುದಾಗಿ ನಿಶ್ಚಯಿಸಿರುವ ಕಾರಣ ಪೋಸ್ಟ್ ಪ್ರೊಡಕ್ಷನ್ ಕಾರ್ಯಗಳು ನಿಧಾನವಾಗಿ ಸಾಗಿವೆ.
'ರಾಬರ್ಟ್' ಬಿಡುಗಡೆ ಬಗ್ಗೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ನಿರ್ಧಾರವೇನು?
ಇದೀಗ ರಾಬರ್ಟ್ ಸಿನಿಮಾದ ಬಹುಮುಖ್ಯ ಪಾತ್ರ ಜಗಪತಿ ಬಾಬು ಅವರು ಸಿನಿಮಾದ ತಮ್ಮ ಪಾತ್ರಕ್ಕೆ ದನಿ ನೀಡಿದ್ದಾರೆ. ಜಗಪತಿ ಬಾಬು ಡಬ್ಬಿಂಗ್ ಪೂರ್ಣಗೊಳಿಸಿದ ವಿಷಯವನ್ನು ನಿರ್ದೇಶಕ ತರುಣ್ ಕಿಶೋರ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ಡಬ್ಬಿಂಗ್ ಮುಗಿಸಿದ ಜಗಪತಿ ಬಾಬು
'ಜಗಪತಿ ಬಾಬು ಅವರು ತಮ್ಮ ಮೊದಲ ಕನ್ನಡ ಡಬ್ಬಿಂಗ್ ಕಾರ್ಯವನ್ನು ರಾಬರ್ಟ್ ಗಾಗಿ ಮಾಡಿ ಮುಗಿಸಿದ್ದಾರೆ. ಅವರ ಉಪಸ್ಥಿತಿಯಿಂದ ನಮ್ಮ ಸಿನಿಮಾ ಬೇರೆ ಲೆವೆಲ್ ಗೆ ತಲುಪಿದೆ' ಎಂದಿದ್ದಾರೆ ತರುಣ್ ಕಿಶೋರ್.
ವಿಲನ್ ಆಗಿ ಹಿಟ್ ಆಗಿರುವ ಜಗಪತಿ ಬಾಬು
ತೆಲುಗಿನ ಜಗಪತಿ ಬಾಬು ಇತ್ತೀಚೆಗೆ ವಿಲನ್ ಪಾತ್ರಗಳಿಂದ ಭಾರಿ ಖ್ಯಾತರಾಗಿದ್ದಾರೆ. ವಿಲನ್ ಪಾತ್ರಗಳಿಗೆ ಪ್ರಕಾಶ್ ರೈ ಗಿಂತಲೂ ಹೆಚ್ಚು ಬ್ಯುಸಿಯಾಗಿಬಿಟ್ಟಿದ್ದಾರೆ ಜಗಪತಿ ಬಾಬು. ಅವರು ರಾಬರ್ಟ್ ಸಿನಿಮಾದಲ್ಲೂ ನಟಿಸಿದ್ದು, ತೆಲುಗಿನವರಾಗಿದ್ದರೂ ಕನ್ನಡದಲ್ಲಿ ತಮ್ಮ ಪಾತ್ರಕ್ಕೆ ಅವರೇ ಡಬ್ ಮಾಡಿದ್ದಾರೆ. ಜಗಪತಿ ಬಾಬು ಅವರು ಕನ್ನಡದ ಮದಗಜ ಸಿನಿಮಾದಲ್ಲೂ ನಟಿಸುತ್ತಿದ್ದಾರೆ.
ಬಹುತಾರಾಗಣ ಹೊಂದಿರುವ ಸಿನಿಮಾ
ದರ್ಶನ್ ನಟನೆಯ ರಾಬರ್ಟ್ ಸಿನಿಮಾದಲ್ಲಿ ವಿನೋದ್ ಪ್ರಭಾಕರ್ ಸಹ ಬಹುಮುಖ್ಯ ಪಾತ್ರದಲ್ಲಿದ್ದಾರೆ. ಆಶಾ ಭಟ್ ಸಿನಿಮಾದ ನಾಯಕಿಯಾಗಿದ್ದಾರೆ. ಇದರ ಜೊತೆಗೆ ಖ್ಯಾತ ನಟ ರವಿ ಕಿಶನ್, ನಟ ದೇವರಾಜ್, ಚಿಕ್ಕಣ್ಣ, ರವಿಶಂಕರ್ ಸಹ ಸಿನಿಮಾದಲ್ಲಿದ್ದಾರೆ.
Recommended Video
ಸಿನಿಮಾ ಬಿಡುಗಡೆ ತಡ
ಚಿತ್ರಮಂದಿರಗಳು ಪುನಃ ಪ್ರಾರಂಭವಾಗಿವೆಯಾದರೂ ರಾಬರ್ಟ್ ಸಿನಿಮಾವನ್ನು ತಡವಾಗಿಯೇ ಬಿಡುಗಡೆ ಮಾಡುವುದಾಗಿ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಸ್ಪಷ್ಟಪಡಿಸಿದ್ದಾರೆ. ಚಿತ್ರಮಂದಿರಗಳಿಗೆ ಈಗ ವಿಧಿಸಿರುವ 50% ಪ್ರೇಕ್ಷಕರಿಗೆ ಮಾತ್ರ ಅವಕಾಶದ ನಿಯಮ ತೆಗೆದ ನಂತರವೇ ಸಿನಿಮಾ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ ಅವರು.