Don't Miss!
- News ಮಳೆ.. ಮಳೆ.. ಗುಡುಗು ಸಹಿತ ಭರ್ಜರಿ ಮಳೆಗೆ ತತ್ತರಿಸಿದ ಕರ್ನಾಟಕ!
- Automobiles ಪೆಟ್ರೋಲ್ಗೆ ಹೆಚ್ಚು ಹಣ ಖರ್ಚು ಮಾಡುತ್ತಿದ್ದೀರಾ?.. ಇಲ್ಲಿವೆ ಉತ್ತಮ ಎಲೆಕ್ಟ್ರಿಕ್ ಸ್ಕೂಟರ್ಗಳು, ಜಾಸ್ತಿ ಓಡ
- Finance Bengaluru Traffic Police: ಬೆಂಗಳೂರಿನ ಈ ರಸ್ತೆ ಸಂಚಾರ ಮಾರ್ಗ ಬದಲಾವಣೆ, ವಿವರ
- Technology Samsung: ಭಾರತದಲ್ಲಿ ಹೊಸ ವೇರಿಯಂಟ್ನಲ್ಲಿ ಸ್ಯಾಮ್ಸಂಗ್ ಗ್ಯಾಲಕ್ಸಿ F15 5G! ಬೆಲೆ ಎಷ್ಟು?
- Sports RCB: 'ಗೋ ಗ್ರೀನ್' ಭಾಗವಾಗಿ 3 ಕೆರೆಗಳ ಅಭಿವೃದ್ಧಿಪಡಿಸಿದ ಆರ್ಸಿಬಿ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕೊನೆಗೂ 'ಮದಗಜ' ಚಿತ್ರಕ್ಕೆ ವಿಲನ್ ಆದ್ರು ಸೌತ್ ಸ್ಟಾರ್ ನಟ
ಶ್ರೀಮುರಳಿ ನಟನೆಯ 'ಮದಗಜ' ಸಿನಿಮಾ ಎರಡನೇ ಹಂತದ ಚಿತ್ರೀಕರಣ ಆರಂಭಿಸಿದೆ. ಸೆಪ್ಟೆಂಬರ್ ಕೊನೆಯ ವಾರದಿಂದ ಮೈಸೂರಿನಲ್ಲಿ ಶೂಟಿಂಗ್ ಆರಂಭಿಸಿರುವ ಮದಗಜ ಸೆಟ್ಗೆ ಇತ್ತೀಚಿಗಷ್ಟೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ ನೀಡಿದ್ದರು.
ಇದೀಗ, ಮದಗಜ ಚಿತ್ರತಂಡದಿಂದ ಭರ್ಜರಿ ಸುದ್ದಿಯೊಂದು ಹೊರಬಿದ್ದಿದೆ. ಶ್ರೀಮುರಳಿ ಎದುರು ಯಾರು ವಿಲನ್ ಆಗಿ ನಟಿಸಲಿದ್ದಾರೆ ಎಂದು ಕುತೂಹಲಕ್ಕೆ ತೆರೆ ಬಿದ್ದಿದೆ. ಈ ಹಿಂದಿನ ವರದಿಯಂತೆ ಸೌತ್ ಇಂಡಸ್ಟ್ರಿಯ ಖ್ಯಾತ ನಟರೊಬ್ಬರು ಮದಗಜ ಚಿತ್ರಕ್ಕೆ ವಿಲನ್ ಆಗ್ತಾರೆ ಎನ್ನಲಾಗಿತ್ತು. ಅದರಂತೆ ಖ್ಯಾತ ನಟ ಶ್ರೀಮುರಳಿ ಚಿತ್ರಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಮುಂದೆ ಓದಿ...
ಮದಗಜ ಜೊತೆ ಜಗಪತಿ ಬಾಬು
'ಅಯೋಗ್ಯ' ಖ್ಯಾತಿಯ ಮಹೇಶ್ ಕುಮಾರ್ ನಿರ್ದೇಶನ ಮಾಡುತ್ತಿರುವ ಮದಗಜ ಚಿತ್ರಕ್ಕೆ ಉಮಾಪತಿ ಶ್ರೀನಿವಾಸ್ ಬಂಡವಾಳ ಹಾಕುತ್ತಿದ್ದಾರೆ. ಆಶಿಕಾ ರಂಗನಾಥ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಇದೀಗ, ತೆಲುಗಿನ ಖ್ಯಾತ ನಟ ಹಾಗೂ ವಿಲನ್ ಪಾತ್ರಗಳಿಂದ ಹೆಚ್ಚು ಅಭಿಮಾನಿಗಳನ್ನು ಗಳಿಸಿಕೊಂಡಿರುವ ಜಗಪತಿ ಬಾಬು ಶ್ರೀಮುರಳಿ ಚಿತ್ರಕ್ಕೆ ಎಂಟ್ರಿಕೊಟ್ಟಿದ್ದಾರೆ.
ವಿಜಯ್ ಸೇತುಪತಿ ಅಥವಾ ಜಗಪತಿ ಬಾಬು: 'ಮದಗಜ'ನಿಗೆ ಯಾರಾಗಲಿದ್ದಾರೆ ವಿಲನ್?
ಮೈಸೂರಿನ ಶೂಟಿಂಗ್ನಲ್ಲಿ ಭಾಗಿ
ಈ ಹಿಂದೆ ವಿಜಯ್ ಸೇತುಪತಿ ಅಥವಾ ಜಗಪತಿ ಬಾಬು ಅವರನ್ನು ಮದಗಜ ಚಿತ್ರದಲ್ಲಿ ವಿಲನ್ ಆಗಿಸಲು ಪ್ರಯತ್ನ ನಡೆದಿದ್ದವು. ಅಂತಿಮವಾಗಿ ಜಗಪತಿ ಬಾಬು ಅವರನ್ನು ಕರೆತರುವಲ್ಲಿ ನಿರ್ದೇಶಕರು ಯಶಸ್ವಿಯಾಗಿದ್ದಾರೆ. ಸದ್ಯದ ಮಾಹಿತಿ ಪ್ರಕಾರ, ಮೈಸೂರಿನಲ್ಲಿ ನಡೆಯುತ್ತಿರುವ ಮದಗಜ ಚಿತ್ರೀಕರಣದಲ್ಲಿ ಜಗಪತಿ ಬಾಬು ಭಾಗಿಯಾಗಿದ್ದಾರೆ ಎನ್ನಲಾಗಿದೆ.
ರಾಮ್-ಲಕ್ಷ್ಮಣ್ ಎಂಟ್ರಿ
ಮದಗಜ ಚಿತ್ರಕ್ಕೆ ತೆಲುಗಿನ ಖ್ಯಾತ ಸಾಹಸ ನಿರ್ದೇಶಕರಾದ ರಾಮ್-ಲಕ್ಷ್ಮಣ್ ಮಾಸ್ಟರ್ ಬಂದಿದ್ದಾರೆ. ಇದು ಸಹ ಚಿತ್ರದ ಆಕ್ಷನ್ ಮೇಲೆ ಹೆಚ್ಚು ನಿರೀಕ್ಷೆ ಮೂಡಿಸಿದೆ. ರಾಮ್-ಲಕ್ಷ್ಮಣ್ ಮಾಸ್ಟರ್ ತೆಲುಗಿನ ಸ್ಟಾರ್ ನಟರ ಚಿತ್ರಗಳಿಗೆ ಸ್ಟಂಟ್ ಡೈರೆಕ್ಟ್ ಮಾಡುವ ನಿರ್ದೇಶಕರು. ಇದೀಗ, ಕನ್ನಡಕ್ಕೆ ಬಂದಿರುವುದು ಚಿತ್ರಕ್ಕೆ ಹೆಚ್ಚಿನ ಶಕ್ತಿ ತುಂಬಿದೆ.
ನಟ ಶ್ರೀಮುರಳಿಯನ್ನು ದಿಢೀರ್ ಭೇಟಿಯಾದ ಡಿ ಬಾಸ್ ದರ್ಶನ್: ಕಾರಣವೇನು?
Recommended Video
'ರಾಬರ್ಟ್' ಚಿತ್ರಕ್ಕೂ ಜಗಪತಿ ಬಾಬು ವಿಲನ್
ಅಂದ್ಹಾಗೆ, ದರ್ಶನ್ ನಟಿಸುತ್ತಿರುವ ರಾಬರ್ಟ್ ಚಿತ್ರದಲ್ಲಿ ಜಗಪತಿ ಬಾಬು ವಿಲನ್ ಆಗಿ ನಟಿಸಿದ್ದಾರೆ. ಈ ಚಿತ್ರ ನಿರ್ಮಿಸಿರುವುದು ಉಮಾಪತಿ ಶ್ರೀನಿವಾಸ್. ಈಗ ಶ್ರೀಮುರಳಿ ನಟನೆಯ ಮದಗಜ ಚಿತ್ರ ನಿರ್ಮಿಸುತ್ತಿರುವುದು ಉಮಾಪತಿ ಶ್ರೀನಿವಾಸ್.