Just In
Don't Miss!
- News
ಪೆಟ್ರೋಲ್, ಡೀಸೆಲ್ ದರ ಏರಿಕೆ: ಕೇಂದ್ರಕ್ಕೆ ಬಿಸಿ ಮುಟ್ಟಿಸಿದ ಮಲ್ಲಿಕಾರ್ಜುನ್ ಖರ್ಗೆ
- Education
UAS Dharwad Recruitment 2021: ಸೀನಿಯರ್ ರಿಸರ್ಚ್ ಫೆಲೋ ಹುದ್ದೆಗೆ ಮಾ.10ಕ್ಕೆ ನೇರ ಸಂದರ್ಶನ
- Automobiles
ಹೊಸ ರೂಪದೊಂದಿಗೆ ರಸ್ತೆಗಿಳಿಯಲಿವೆ ತೆರೆಮರೆಗೆ ಸರಿದ ಜಟಕಾ ಬಂಡಿ
- Sports
ಐಎಸ್ಎಲ್: ಫೈನಲ್ಗಾಗಿ ನಾರ್ಥ್ ಈಸ್ಟ್, ಬಾಗನ್ ನಡುವೆ ಫೈನಲ್ ಫೈಟ್
- Lifestyle
ಮಾ.11ಕ್ಕೆ ಕುಂಭ ರಾಶಿಗೆ ಬುಧನ ಪ್ರವೇಶ: ನಿಮ್ಮ ಬದುಕಿನಲ್ಲಿ ಆಗಲಿದೆ ಈ ಬದಲಾವಣೆ
- Finance
ಅಡಿಕೆ, ಕಾಫೀ, ಮೆಣಸು ಹಾಗೂ ರಬ್ಬರ್ನ ಮಾ. 08ರ ಮಾರುಕಟ್ಟೆ ದರ ಇಲ್ಲಿದೆ
- Technology
ಒನ್ಪ್ಲಸ್ ನಾರ್ಡ್ ಜುಲೈ 15 ರಿಂದ ಅಮೆಜಾನ್ ತಾಣದಲ್ಲಿ ಪ್ರಿ-ಆರ್ಡರ್ಗೆ ಲಭ್ಯವಿದೆ; ಖರೀದಿಸುವಲ್ಲಿ ಮೊದಲಿಗರಾಗಿರಿ!
- Travel
ಭಾರತದಲ್ಲಿ ಜೂನ್ 1 ರಿಂದ ಚಲಿಸಲಿರುವ ರೈಲುಗಳ ಸಂಪೂರ್ಣ ಪಟ್ಟಿ
'ತೋತಾಪುರಿ' ಚಿತ್ರೀಕರಣ ಆರಂಭಿಸಿದ ಜಗ್ಗೇಶ್-ಅದಿತಿ ಪ್ರಭುದೇವ
ಸತೀಶ್ ನೀನಾಸಂ ಮತ್ತು ಹರಿಪ್ರಿಯಾ ನಟಿಸಿರುವ ಪೆಟ್ರೋಮ್ಯಾಕ್ಸ್ ಚಿತ್ರೀಕರಣ ಮುಗಿಸಿದ ನಿರ್ದೇಶಕ ವಿಜಯ್ ಪ್ರಸಾದ್ ಈಗ ಮತ್ತೊಂದು ಚಿತ್ರದ ಕೆಲಸ ಪ್ರಾರಂಭಿಸಿದ್ದಾರೆ.
ನವರಸ ನಾಯಕ ಜಗ್ಗೇಶ್ ನಟನೆಯಲ್ಲಿ ತಯಾರಾಗುತ್ತಿರುವ ತೋತಾಪುರಿ ಸಿನಿಮಾದ ಮತ್ತೆ ಶೂಟಿಂಗ್ ಆರಂಭಿಸಿದೆ. ಸೋಮವಾರದಿಂದ ಮೈಸೂರಿನಲ್ಲಿ ತೋತಾಪುರಿ ಸಿನಿಮಾ ಚಿತ್ರೀಕರಣಕ್ಕೆ ಚಾಲನೆ ಸಿಕ್ಕಿದೆ.
ಹಣೆ ಬರಹ ಚೆನ್ನಾಗಿದ್ದು ಚಪ್ಪಾಳೆ ಬೀಳುವವರೆಗು ಮಾತ್ರ ಕಲಾವಿದ ಕೈಲಾಸದಲ್ಲಿರುತ್ತಾನೆ; ನಟ ಜಗ್ಗೇಶ್
ಲಾಕ್ಡೌನ್ ಆದ್ಮೇಲೆ ನಟ ಜಗ್ಗೇಶ್ ಶೂಟಿಂಗ್ ಮಾಡುತ್ತಿರುವ ಮೊದಲ ಚಿತ್ರ ಇದಾಗಿದೆ. ಇದಕ್ಕೂ ಮುಂಚೆ ವಿಜಯ್ ಪ್ರಸಾದ್ ಜೊತೆ ನೀರ್ದೋಸೆ ಸಿನಿಮಾ ಮಾಡಿದ್ದರು ಜಗ್ಗೇಶ್. ತೋತಾಪುರಿ ಚಿತ್ರದಲ್ಲಿ ಅದಿತಿ ಪ್ರಭುದೇವ ನಾಯಕಿಯಾಗಿ ಕಾಣಿಸಿಕೊಳ್ಳುತ್ತಿದ್ದು, ಮೊದಲ ಸಲ ಜಗ್ಗೇಶ್ ಸಿನಿಮಾದಲ್ಲಿ ಬಣ್ಣ ಹಚ್ಚಿದ್ದಾರೆ.
ಕೆಎ ಸುರೇಶ್ ಈ ಚಿತ್ರಕ್ಕೆ ಬಂಡವಾಳ ಹಾಕಿದ್ದು, ಎರಡು ಭಾಗಗಳಲ್ಲಿ ಸಿನಿಮಾ ಮೂಡಿಬರಲಿದೆ ಎಂದು ಹೇಳಲಾಗಿದೆ. ಈಗಾಗಲೇ ಚಿತ್ರದ 80 ರಷ್ಟು ಭಾಗ ಶೂಟಿಂಗ್ ಮುಗಿದಿದೆ. ಉಳಿದ ಚಿತ್ರೀಕರಣಕ್ಕೆ ಮರು ಚಾಲನೆ ಸಿಕ್ಕಿದೆ.
ಅಂದ್ಹಾಗೆ, ತೋತಾಪುರಿ ಸಿನಿಮಾದಲ್ಲಿ ಜಗ್ಗೇಶ್ ರೈತನ ಪಾತ್ರದಲ್ಲಿ ನಟಿಸಿದ್ದು, ಅದಿತಿ ಪ್ರಭುದೇವ ಮುಸ್ಲಿಂ ಯುವತಿ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದಲ್ಲಿ ಧನಂಜಯ್ ಸಹ ಪ್ರಮುಖ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಸುಮನ ರಂಗನಾಥ್ ಸಹ ಪ್ರಧಾನ ಪಾತ್ರದಲ್ಲಿ ಇರಲಿದ್ದಾರೆ.
ನನ್ನ ಸತ್ಯದ ಸೊಲ್ಲು ಅಡಗಿಸಲು ಅಪಪ್ರಚಾರ ತಂತ್ರರೂಪಿಸಿದರು- ಜಗ್ಗೇಶ್ ಬೇಸರ
ಅನೂಪ್ ಸೀಳಿನ್ ಸಂಗೀತ ನಿರ್ದೇಶನವಿದ್ದು, ತೋತಾಪುರಿ ಸಿನಿಮಾ ಮುಗಿಯುತ್ತಿದ್ದಂತೆ ಮಠ ಗುರುಪ್ರಸಾದ್ ನಿರ್ದೇಶನದ ರಂಗನಾಯಕ ಚಿತ್ರೀಕರಣ ಆರಂಭಿಸಲಿದ್ದಾರೆ ಜಗ್ಗೇಶ್.