Don't Miss!
- News ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ; ಇಬ್ಬರು ಶಂಕಿತರ ಸುಳಿವು ಕೊಟ್ಟರೆ ₹20 ಲಕ್ಷ ಬಹುಮಾನ
- Sports RCB VS KKR: ಟಾಸ್ ಗೆದ್ದ ಕೆಕೆಆರ್ ಫೀಲ್ಡೀಂಗ್ ಆಯ್ಕೆ: ಆರ್ಸಿಬಿ ತಂಡದಲ್ಲಿ ಇಲ್ಲ ಬದಲಾವಣೆ
- Lifestyle ಏಪ್ರಿಲ್ 1ರಿಂದ 800 ಔಷಧಗಳು ದುಬಾರಿ..! ಎಷ್ಟು ಬೆಲೆ ಹೆಚ್ಚಳ.?
- Automobiles ಭಾರತದಲ್ಲಿ ಬಿಡುಗಡೆಗೆ ಸಜ್ಜಾದ ಬಹುನಿರೀಕ್ಷಿತ ಹೊಸ ಸ್ಕೋಡಾ ಸೂಪರ್ಬ್ ಕಾರು
- Technology WhatsApp: ವಾಟ್ಸಾಪ್ನಲ್ಲಿ ಈ ಕರೆಗಳನ್ನು ಸ್ವೀಕರಿಸದಂತೆ ಕೇಂದ್ರದಿಂದ ಎಚ್ಚರಿಕೆ! ಯಾಕೆ ಗೊತ್ತಾ?
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂದು ದರ್ಶನ್ ಬಗ್ಗೆ ಜಗ್ಗೇಶ್ ಹೇಳಿದ್ದ ಮಾತು ನಿಜವಾಯ್ತಾ? ವಿಡಿಯೋ ವೈರಲ್
Recommended Video
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಗ್ಗೆ ನವರಸ ನಾಯಕ ಜಗ್ಗೇಶ್ ಅಪಾರ ಅಭಿಮಾನ ಹೊಂದಿದ್ದಾರೆ. ಸುಮಾರು ಒಂದೂವರೆ ವರ್ಷ ಆಗಿರಬಹುದು. ಹೀಗೆ ಟಿವಿ ಸಂದರ್ಶನದಲ್ಲಿ ಮಾತನಾಡುತ್ತಿದ್ದ ಜಗ್ಗಣ್ಣ, ಡಿ ಬಾಸ್ ಬಗ್ಗೆ ಒಂದು ಮಾತು ಹೇಳಿದ್ದರು.
ಆ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ದರ್ಶನ್ ಫ್ಯಾನ್ಸ್ ಶೇರ್ ಮಾಡುತ್ತಿದ್ದಾರೆ. ಈ ವಿಡಿಯೋ ಈಗ ಜಗ್ಗೇಶ್ ಅವರ ಕಣ್ಣಿಗೂ ಬಿದ್ದಿದೆ.
ಇದನ್ನ ಕಂಡು ಸಂತಸಗೊಂಡ ಜಗ್ಗೇಶ್ ಟ್ವಿಟ್ಟರ್ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನವರಸ ನಾಯಕನ ಈ ಟ್ವೀಟ್ ಗೆ ಡಿ ಬಾಸ್ ಕೂಡ ಪ್ರತಿಕ್ರಿಯಿಸಿದ್ದಾರೆ. ಏನಿದು ಜಗ್ಗೇಶ್-ದರ್ಶನ್ ಸ್ಟೋರಿ? ಮುಂದೆ ಓದಿ...
100 ಕೋಟಿ ಕ್ಲಬ್ ಗೆ ದರ್ಶನ್ ಹೋಗ್ತಾನೆ
ಒಂದೂವರೆ ವರ್ಷದ ಹಳೆಯ ಸಂದರ್ಶನದಲ್ಲಿ ಮಾತನಾಡುತ್ತಿದ್ದ ಜಗ್ಗೇಶ್ ''ದರ್ಶನ್ ಹಾಕ್ಕೊಂಡು ಕರೆಕ್ಟ್ ಆಗಿ ಸಿನಿಮಾ ಮಾಡಿದ್ರೆ ಕನ್ನಡದಲ್ಲಿ ಸಲ್ಮಾನ್ ಖಾನ್ ರೇಂಜ್ ಗೆ 100 ಕೋಟಿ ಕ್ಲಬ್ ಗೆ ಹೋಗ್ತಾನೆ'' ಎಂದು ಭವಿಷ್ಯ ನುಡಿದಿದ್ದರು. ಆ ವಿಡಿಯೋಗೆ ವೈರಲ್ ಆಗಿದೆ.
ಶಿವಣ್ಣ-ಅಪ್ಪು-ಸುದೀಪ್-ದರ್ಶನ್ ಈ ಗುಣಗಳನ್ನ ಬದಲಿಸಿಕೊಳ್ಳಬೇಕಂತೆ.!
ಟ್ವೀಟ್ ಮಾಡಿದ ಜಗ್ಗೇಶ್
ಜಗ್ಗೇಶ್ ಅವರ ಆ ಮಾತಿನ ಜೊತೆ ಕುರುಕ್ಷೇತ್ರ ಚಿತ್ರದ ಕ್ರೇಜ್ ಹೇಗಿದೆ ಎಂಬುದನ್ನ ಅಭಿಮಾನಿಗಳು ಎಡಿಟ್ ಮಾಡಿ ಹಾಕಿದ್ದಾರೆ. ಈ ವಿಡಿಯೋಗೆ ಟ್ವೀಟ್ ಮಾಡಿರುವ ಜಗ್ಗೇಶ್ ''ನನ್ನ ಆನಂದಕ್ಕೆ ಪಾರವೇ ಇಲ್ಲಾ! ಅನ್ಯರಾಜ್ಯದವರ ಆರ್ಭಟ ನೋಡಿ ನೋಡಿ ಸಾಕಾಗಿ ಮನಸಿನಲ್ಲಿ ಒಬ್ಬನೆ ನೋವುನುಂಗಿ ಬದುಕುತ್ತಿದ್ದೆ! ಭಾರಿಸಲಿ ನಮ್ಮ ಹುಡುಗರು ಕನ್ನಡ ಡಿಂಡಿಮವ! ನಮ್ಮ ಹೆಮ್ಮೆಯ ಕನ್ನಡ ಕನ್ನಡಿಗರು ಕನ್ನಡಚಿತ್ರರಂಗ ರಾಯರದಯೆಯಿಂದ ಹೀಗೆ ಕನ್ನಡತನವನ್ನು ರಾಷ್ಟ್ರಮಟ್ಟದಲ್ಲಿ ಮೆರೆಸಲಿ ಎಂದು ಆಶಿಸುವೆ..ಶುಭಮಸ್ತು'' ಎಂದಿದ್ದಾರೆ.
ಥ್ಯಾಂಕ್ಸ್ ಹೇಳಿದ ದರ್ಶನ್
ಕುರುಕ್ಷೇತ್ರ ಸಿನಿಮಾ ರಿಲೀಸ್ ಆಗಿ ಎಲ್ಲೆಡೆ ಯಶಸ್ವಿ ಪ್ರದರ್ಶನ ಕಾಣ್ತಿದೆ. ಇದನ್ನ ಕಂಡು ಜಗ್ಗೇಶ್ ಸಂತಸ ವ್ಯಕ್ತಪಡಿಸಿದ್ದಾರೆ. ಜಗ್ಗೇಶ್ ಅವರ ಟ್ವೀಟ್ ಗೆ ಪ್ರತಿಕ್ರಿಯಿಸಿರುವ ದರ್ಶನ್ ''ಹೃದಯಪೂರ್ವಕ ಧನ್ಯವಾದಗಳು ಅಣ್ಣ'' ಎಂದು ಥ್ಯಾಂಕ್ಸ್ ಹೇಳಿದ್ದಾರೆ.
ಕನ್ನಡಕ್ಕಾಗಿ ಎತ್ತಿದ ಗದೆ...
ದರ್ಶನ್ ಅವರ ಧನ್ಯವಾದಕ್ಕೆ ಪ್ರತಿಕ್ರಿಯಿಸಿರುವ ಜಗ್ಗೇಶ್ ''ಹೃದಯ ತುಂಬಿ ಬಂತು..ಕನ್ನಡಕ್ಕಾಗಿ ಎತ್ತಿದ ಗದೆ ರಾಯರ ದಯೇಯಿಂದ ನಿನ್ನ ಭುಜದಮೇಲೆ ಶಾಶ್ವತವಾಗಿ ಉಳಿಯಲಿ.. ಸಾಧ್ಯವಾದಷ್ಟು ಕನ್ನಡದ ಹಳೆ ಕಲಾವಿದರಿಗೆ ನಿನ್ನ ಚಿತ್ರದಲ್ಲಿ ಅವಕಾಶ ಕೊಟ್ಟು ಅವರ ಉದರತುಂಬಿಸುವ ಕಾರ್ಯಮಾಡು ಎಂದು ವಿನಂತಿ..ಅಮ್ಮನಿಗೆ ನನ್ನ ನಮಸ್ಕಾರ ತಿಳಿಸು..love you..God bless.'' ಎಂದಿದ್ದಾರೆ.
ದರ್ಶನ್ ಕನ್ನಡದ 'ಸಲ್ಮಾನ್ ಖಾನ್' ಎಂದ ದಕ್ಷಿಣದ ಖ್ಯಾತ ಖಳನಟ
ಮೂರನೇ ವಾರವೂ ಹೌಸ್ ಫುಲ್
ಬಿಡುಗಡೆಯಾಗಿ ಮೂರು ವಾರ ಕಳೆದರೂ ಚಿತ್ರಕ್ಕೆ ಭಾರಿ ರೆಸ್ಪಾನ್ಸ್ ಸಿಕ್ಕಿದೆ. ವಾರಾಂತ್ಯಗಳಲ್ಲಿ ಫ್ಯಾಮಿಲಿ ವೀಕ್ಷಕರ ಸಂಖ್ಯೆ ಹೆಚ್ಚಾಗಿದೆ. ಚಿತ್ರಮಂದಿರಗಳು ತುಂಬಿದ ಪ್ರದರ್ಶನ ಕಾಣುತ್ತಿದೆ. ಮೊದಲ ಮೂರು ದಿನದಲ್ಲಿ 30 ಕೋಟಿ ಗಳಿಕೆ ಕಂಡಿದ್ದ ಸಿನಿಮಾ, 50 ಕೋಟಿ ಗಡಿದಾಟಿದೆ ಎನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದ್ರೆ, 100 ಕೋಟಿ ಆಗುತ್ತಾ ಅಥವಾ ಆಗಿದೆ ಎಂಬುದರ ಬಗ್ಗೆ ಚಿತ್ರತಂಡವೇ ಪ್ರಕಟ ಮಾಡಬೇಕಿದೆ.