Don't Miss!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Automobiles ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಿರ್ದೇಶಕ ರೇಣುಕಾ ಶರ್ಮಾ, ನಟ ಅರವಿಂದ್ ನಿಧನಕ್ಕೆ ಜಗ್ಗೇಶ್ ಸಂತಾಪ
ಕೊರೊನಾ ವೈರಸ್ ಬಿಕ್ಕಟ್ಟಿನ ಸಮಯದಲ್ಲಿ ಚಿತ್ರರಂಗ ಹಲವು ಚಿತ್ರೋದ್ಯಮಿಗಳನ್ನು ಕಳೆದುಕೊಂಡಿದೆ. ಕಳೆದ ಒಂದು ತಿಂಗಳಲ್ಲಿ ಕೊರೊನಾ ಹಾಗು ಇತರೆ ಕಾಯಿಲೆಗಳಿಂದ ಹಲವು ಗಣ್ಯರು ಇಹಲೋಕ ತ್ಯಜಿಸಿದ್ದಾರೆ.
ಇತ್ತೀಚಿಗಷ್ಟೆ ಹಿರಿಯ ನಿರ್ದೇಶಕ ರೇಣುಕಾ ಶರ್ಮಾ ಹಾಗೂ ಹಿರಿಯ ಕಲಾವಿದ ಶಂಖನಾದ ಅರವಿಂದ್ ಅವರು ಕೊನೆಯುಸಿರೆಳೆದರು. ಈ ಇಬ್ಬರ ಅಗಲಿಕೆಗೆ ನಟ ಜಗ್ಗೇಶ್ ಸಂತಾಪ ಸೂಚಿಸಿದ್ದಾರೆ.
ಕನ್ನಡದ ಖ್ಯಾತ ನಿರ್ದೇಶಕ ರೇಣುಕಾ ಶರ್ಮಾ ಕೊರೊನಾದಿಂದ ನಿಧನ
ಟ್ವಿಟ್ಟರ್ನಲ್ಲಿ ಬೇಸರ ವ್ಯಕ್ತಪಡಿಸಿರುವ ಜಗ್ಗೇಶ್ ''ಏನೆಂದು ಅಕ್ಷರ ಠಂಕಿಸಲಿ?? ಯಾವ ಅಕ್ಷರದಲ್ಲಿ ಸಾಂತ್ವನ ಹೇಳಲಿ?? ಯಾವ ಅಕ್ಷರದಿಂದ ಇವರ ಮನೆಯ ನೊಂದವರ ಸಮಾಧಾನ ಪಡಿಸಲಿ?? ಒಂದಂತು ಠಂಕಿಸುವೆ ನಿಮ್ಮಗಳ ಜೊತೆ ನಾ ಕಳೆದ ಸಮಯ ಅವಿಸ್ಮರಣೀಯ!! ನಿಮ್ಮ ಆತ್ಮ ರಾಯರಲ್ಲಿ ಲೀನವಾಗಲಿ!! ನಿಮ್ಮ ಮನೆಯವರಿಗೆ ಧೈರ್ಯ ಆ ರಾಯರೆ ತುಂಬಲಿ!! ಓಂ ಶಾಂತಿ....ಸದ್ಗತಿ...'' ಎಂದಿದ್ದಾರೆ.
ರೇಣುಕಾ ಶರ್ಮಾ ಕುರಿತು
'ಕವಿರತ್ನ ಕಾಳಿದಾಸ', 'ಅಂಜದ ಗಂಡು', 'ಕಿಂದರ ಜೋಗಿ' ಸೇರಿದಂತೆ ಹಲವು ಸಿನಿಮಾಗಳನ್ನು ರೇಣುಕಾ ಶರ್ಮಾ ನಿರ್ದೇಶನ ಮಾಡಿದ್ದರು. 1980 ರಲ್ಲಿ ಮೊದಲ ಬಾರಿಗೆ ರೇಣುಕಾ ಶರ್ಮಾ ನಿರ್ದೇಶನ ಮಾಡಿದರು. ಮೊದಲ ಸಿನಿಮಾ 'ಅನುಪಮಾ'. ತೆಲುಗು, ತಮಿಳಿನಲ್ಲಿಯೂ ಕೆಲಸ ಮಾಡಿರುವ ರೇಣುಕಾ ಶರ್ಮಾ ಜಯಲಲಿತಾ, ಎಎನ್ಆರ್ ಅವರ ಸಿನಿಮಾಗಳಿಗೂ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ.
ಖ್ಯಾತ ನಟ 'ಶಂಖನಾದ' ಅರವಿಂದ್ ಕೊರೊನಾಕ್ಕೆ ಬಲಿ
ಶಂಖನಾದ ಅರವಿಂದ್ ಕುರಿತು
Recommended Video
ಅರವಿಂದ್ ಅವರು ಅಪರಿಚಿತ, ಆಗಂತುಕ, ಬೆಟ್ಟದ ಹೂವು, ಶಂಖನಾದ ಚಿತ್ರಗಳಲ್ಲಿ ನಟಿಸಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದರು. ಸಾರಾ ಅಬೂಬಕ್ಕರ್ ಅವರ ಕೃತಿ 'ವಜ್ರಗಳು'ನ ಸಿನಿಮಾ ರೂಪ 'ಸಾರಾ ವಜ್ರ'ದಲ್ಲಿ ಮುಸ್ಲಿಂ ಪಾತ್ರದಲ್ಲಿ ನಟಿಸಿದ್ದಾರೆ. ಇದೇ ಅವರು ನಟಿಸಿದ ಕೊನೆಯ ಸಿನಿಮಾ. ಆ ಸಿನಿಮಾ ಇನ್ನೂ ಬಿಡುಗಡೆ ಆಗಿಲ್ಲ.