Don't Miss!
- News ಎಸ್ಸಿ, ಎಸ್ಟಿ ಮೀಸಲಾತಿ ಮುಸ್ಲಿಮರಿಗೆ ಹಂಚಿಕೆ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Automobiles ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇಂದಿನ ಮೆಜೆಸ್ಟಿಕ್, ಅಂದು ಹಿರಣಯ್ಯ ಮಿತ್ರ ಮಂಡಳಿ ಬಿಡಾರ!
ಮಾಸ್ಟರ್ ಹಿರಣ್ಣಯ್ಯ ವೇದಿಕೆ ಏರಿ ಮಾತಾಡುತ್ತಿದ್ದರೆ, ಪ್ರೇಕ್ಷಕರು ಅತ್ತ ಇತ್ತ ನೋಡದೆ ಅವರ ಮಾತನ್ನೇ ಕೇಳುತ್ತಿದ್ದರು. ತಮ್ಮ ನಾಟಕಗಳ ಡೈಲಾಗ್ ಮೂಲಕ ರಾಜಕಾರಣಿಗಳಿಗೆ ಚಾಟಿ ಏಟು ನೀಡುತ್ತಿದ್ದ ಮಹಾನ್ ಕಲಾವಿದ ಇಂದು ಮರೆಯಾಗಿದ್ದಾರೆ.
ಅಪ್ಪನಿಗೆ ಚಾಲೆಂಜ್ ಹಾಕಿ ರಂಗಭೂಮಿಯ 'ಮಾಸ್ಟರ್' ಆದ ಹಿರಣ್ಣಯ್ಯ
ಮಾಸ್ಟರ್ ಹಿರಣ್ಣಯ್ಯ ಅವರ ಬಗ್ಗೆ ನಟ ಜಗ್ಗೇಶ್ ಟ್ವೀಟ್ ಮಾಡಿದ್ದಾರೆ. ಅಂದಿನ ದಿನದ ಹಿರಣಯ್ಯ ಮಿತ್ರ ಮಂಡಳಿಯ ಬಗ್ಗೆ ಬರೆದುಕೊಂಡಿದ್ದಾರೆ. ಜಗ್ಗೇಶ್ ಕೂಡ ಖುಷಿಯಿಂದ ಹಿರಣ್ಣಯ್ಯ ಅವರ ನಾಟಕಗಳನ್ನು ನೋಡುತ್ತಿದ್ದರಂತೆ.
''ಇಂದಿನ ಮೆಜೆಸ್ಟಿಕ್ ಬಸ್ ನಿಲ್ದಾಣ ಅಂದು ಹಿರಣಯ್ಯ ಮಿತ್ರ ಮಂಡಳಿ ಬಿಡಾರ!. 1976ರಲ್ಲಿ ಇವರ ನಾಟಕ ನೋಡಲು ಅಪ್ಪ ಅಮ್ಮನ ಜೊತೆ ಹೋಗುತ್ತಿದ್ದೆ!. ನಮ್ಮ ಸೋದರ ಮಾವ ರಂಗನಟ Tm ಭಧ್ರಾಚಲ ನಾಟಕದ ಟಿಕೆಟ್ ಕೊಡುತ್ತಿದ್ದರು!. ಹಳ್ಳಿಯಂತಿದ್ದ ಆ ದಿನಗಳ ಬಾಲ್ಯ ನೆನಪಾಯಿತು!. ಇವರ ದೇವದಾಸಿ ಚಿತ್ರದ ಹಾಡು ಹಾಡಿ 9ನೇ ತರಗತಿಯಲ್ಲಿ ಪಾರಿತೋಷಕ ಪಡೆದಿದ್ದೆ ಓಂ ಶಾಂತಿ.'' ಎಂದು ಬರೆದುಕೊಂಡಿದ್ದಾರೆ.
ಮಾಸ್ಟರ್ ಹಿರಣ್ಣಯ್ಯ ನಿಧನಕ್ಕೆ ನಟ ಸುದೀಪ್ ಸಂತಾಪ
ನಟ ಜಗ್ಗೇಶ್ ಜೊತೆಗೆ, ಸುದೀಪ್, ದರ್ಶನ್, ಹಿರಿಯ ನಟ ದತ್ತಣ್ಣ, ಶಿವರಾಂ, ನಿರ್ದೇಶಕ ಟಿ ಎನ್ ಸೀತಾ ರಾಮ್ ಸೇರಿದಂತೆ ಸಾಕಷ್ಟು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಇಂದಿನ ಮೆಜಸ್ಟಿಕ್ ಬಸ್ನಿಲ್ದಾಣ ಅಂದು "ಹಿರಣಯ್ಯ ಮಿತ್ರಮಂಡಲಿ"ಬಿಡಾರ!ನನ್ನ 1976ರಲ್ಲಿ ಇವರ ನಾಟಕ ನೋಡಲು ಅಪ್ಪಅಮ್ಮನ ಜೊತೆ ಹೋಗುತ್ತಿದ್ದೆ!ನಮ್ಮ ಸೋದರಮಾವ ರಂಗನಟ Tmಭಧ್ರಾಚಲ ನಾಟಕದ ಟಿಕೆಟ್ ಕೊಡುತ್ತಿದ್ದರು!ಹಳ್ಳಿಯಂತಿದ್ದ ಆದಿನಗಳ
— Chowkidar🙏ನವರಸನಾಯಕ ಜಗ್ಗೇಶ್ (@Jaggesh2) May 2, 2019
ಬಾಲ್ಯ ನೆನಪಾಯಿತು!
ಇವರ ದೇವದಾಸಿ ಚಿತ್ರದ ಹಾಡು ಹಾಡಿ 9ನೆ ತರಗತಿಯಲ್ಲಿ ಪಾರಿತೋಷಕಪಡೆದಿದ್ದೆ
ಓಂಶಾಂತಿ. pic.twitter.com/HiC6dcsoMm
ಮಾಸ್ಟರ್ ಹಿರಿಯಣ್ಣಯ್ಯ ಇಂದು ಬೆಳಗ್ಗೆ ಇಹಲೋಕ ತ್ಯಜಿಸಿದ್ದಾರೆ. ಅನೇಕ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು 10 ಗಂಟೆ ಸುಮಾರಿಗೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಬನಶಂಕರಿಯ ಅವರ ನಿವಾಸದಲ್ಲಿ ಅಂತಿಮ ದರ್ಶನ ವ್ಯವಸ್ಥೆ ಮಾಡಲಾಗಿದೆ.